AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಪರಮೇಶ್ವರ್‌ಗೆ ಸ್ಟಾಲಿನ್‌ ಎಂದು ಹೆಸರಿಡಬಹುದಿತ್ತಲ್ಲವೇ; ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನೆ

ಸನಾತನ ಧರ್ಮದಿಂದ ಬಾಲ್ಯವಿವಾಹ, ವರದಕ್ಷಿಣೆ ಮೊದಲಾದ ಪಿಡುಗುಗಳನ್ನು ತೆಗೆದುಹಾಕಿದ್ದೇವೆ. ಮೂಢನಂಬಿಕೆ ತೊಡೆದು ಹಾಕುವ ಕೆಲಸ ಮಹಾಪುರುಷರು ಮಾಡಿದ್ದಾರೆ. ಈಗಿರುವ ಕೆಲವು ಆಚಾರ ಬದಲಾಯಿಸಲಾಗುತ್ತದೆ, ಇದನ್ನು ಮಾಡುತ್ತೇವೆ. ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಸಚಿವ ಪರಮೇಶ್ವರ್‌ಗೆ ಸ್ಟಾಲಿನ್‌ ಎಂದು ಹೆಸರಿಡಬಹುದಿತ್ತಲ್ಲವೇ; ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನೆ
ಕಲ್ಲಡ್ಕ ಪ್ರಭಾಕರ ಭಟ್ & ಪರಮೇಶ್ವರ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 06, 2023 | 6:55 PM

Share

ಮಂಗಳೂರು, ಸೆಪ್ಟೆಂಬರ್ 6: ಹಿಂದೂ ಧರ್ಮದ (Hindu Religion) ಬಗ್ಗೆ ಗೃಹ ಸಚಿವ ಪರಮೇಶ್ವರ್ (G Parameshwara) ನೀಡಿರುವ ಹೇಳಿಕೆಗೆ ಆರ್​ಎಸ್​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಪ್ರತಿಕ್ರಿಯಿಸಿದ್ದು, ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ. ಸನಾತನ ಧರ್ಮದ ಬಗ್ಗೆ ದೂಷಿಸಿದ್ರೆ ಅಲ್ಪಸಂಖ್ಯಾತರ ಮತ ಸಿಗುತ್ತೆ, ಅಧಿಕಾರ ಸಿಗುತ್ತೆ ಅನ್ನೋ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಹಿಂದೂ ಧರ್ಮದ ಹುಟ್ಟು ಗೊತ್ತಿಲ್ಲವೆಂದು ಪರಮೇಶ್ವರ್ ಹೇಳಿದ್ದಾರೆ. ಹಾಗಾದ್ರೆ ಪರಮೇಶ್ವರ್ ಹೆಸರು ಇಸ್ಮಾಯಿಲ್‌ ಎಂದು ಏಕೆ ಇಟ್ಟಿಲ್ಲ? ಅವರಿಗೆ ಸ್ಟಾಲಿನ್‌ ಎಂದು ಹೆಸರು ಇಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ಎಲ್ಲಾ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ದೇವಸ್ಥಾನದಿಂದ ಹೊರಗೆ ಬಂದ ಬಳಿಕ ಈ ರೀತಿ ಹೇಳಿಕೆ ನೀಡ್ತಾರೆ. ಸನಾತನ ಧರ್ಮದ ಹುಟ್ಟು ಯಾರಿಗೂ ತಿಳಿದಿಲ್ಲ. ಸನಾತನ ಧರ್ಮಕ್ಕೆ ಹುಟ್ಟೂ ಇಲ್ಲ, ನಾಶವೂ ಇಲ್ಲ. ಕ್ರಿಶ್ಚಿಯನ್ ಹಾಗೂ ಇಸ್ಲಾಂ ಧರ್ಮಗಳು ಇತ್ತೀಚೆಗೆ ಹುಟ್ಟಿಕೊಂಡಿವೆ. ಸನಾತನ ಧರ್ಮ ನಿತ್ಯ ನೂತನವಾದ ಧರ್ಮ. ಎಲ್ಲಾ ಕಾಲಕ್ಕೂ, ಎಲ್ಲವನ್ನೂ ಒಪ್ಪಿಕೊಳ್ಳುವ ಧರ್ಮ. ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಳ್ಳುವ ಅವಕಾಶವಿರುವ ಧರ್ಮ ಎಂದು ಅವರು ಹೇಳಿದ್ದಾರೆ.

ಸನಾತನ ಧರ್ಮದಿಂದ ಬಾಲ್ಯವಿವಾಹ, ವರದಕ್ಷಿಣೆ ಮೊದಲಾದ ಪಿಡುಗುಗಳನ್ನು ತೆಗೆದುಹಾಕಿದ್ದೇವೆ. ಮೂಢನಂಬಿಕೆ ತೊಡೆದು ಹಾಕುವ ಕೆಲಸ ಮಹಾಪುರುಷರು ಮಾಡಿದ್ದಾರೆ. ಈಗಿರುವ ಕೆಲವು ಆಚಾರ ಬದಲಾಯಿಸಲಾಗುತ್ತದೆ, ಇದನ್ನು ಮಾಡುತ್ತೇವೆ. ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದಲ್ಲಿ ಇದಕ್ಕೆ ಅವಕಾಶವಿಲ್ಲ. ಇದೇ ಕಾರಣಕ್ಕೆ ಆ ಧರ್ಮದ ಜನರೇ ಸ್ವಂತ ಧರ್ಮವನ್ನು ಒಪ್ಪುತ್ತಿಲ್ಲ.ಅಮೆರಿಕ ಮತ್ತು ಬ್ರಿಟನ್‌ ದೇಶಗಳಲ್ಲಿ ಚರ್ಚ್‌ಗಳಿಗೆ ಜನರೇ ಬರುತ್ತಿಲ್ಲ. ಹೀಗಾಗಿ ಅಲ್ಲಿನ ಚರ್ಚ್‌ಗಳನ್ನು ಹರಾಜಿಗೆ ಇಡುತ್ತಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ನೀಡಿಲ್ಲ, ಧರ್ಮಗಳ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ ಅಷ್ಟೆ; ಜಿ ಪರಮೇಶ್ವರ ಸ್ಪಷ್ಟನೆ

ಚಂದ್ರನ ಬಗ್ಗೆ ಸನಾತನ ಧರ್ಮದಲ್ಲಿ ಉಲ್ಲೇಖವಿದೆ. ಕೃಷ್ಣ ಪರ್ವ, ಶ್ವೇತ ಪರ್ವದ ಬಗ್ಗೆ ಸನಾತನ ಧರ್ಮದಲ್ಲಿ ಉಲ್ಲೇಖವಿದೆ. ಆ ಸತ್ಯ ಚಂದ್ರಯಾನ-3 ಯಶಸ್ವಿಯಾದಾಗ ಬೆಳಕಿಗೆ ಬಂದಿದೆ. ಸನಾತನ ಧರ್ಮ ಮತ್ತು ವಿಜ್ಞಾನ ಪರಸ್ಪರ ಒಪ್ಪಿಕೊಂಡಿವೆ. ಹಿಂದೂ ಧರ್ಮ ಮತ್ತು ವಿಜ್ಞಾನ ಒಟ್ಟೊಟ್ಟಿಗೆ ಹೋಗುತ್ತವೆ. ಸನಾತನ ಧರ್ಮದ ಬಗ್ಗೆ ಉದಯನಿಧಿ‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಉದಯನಿಧಿ‌ ಸ್ಟಾಲಿನ್‌ ತಂದೆ ಹಿಂದೂ ಧರ್ಮದ ಸತ್ವ ಒಪ್ಪಿಕೊಂಡಿದ್ದರು. ಅವರ ಕಾರನ್ನು ಅವರ ಮನೆ ಮುಂದೆ ದೇಗುಲಕ್ಕೆ ಮುಖ ಮಾಡಿ ನಿಲ್ಲಿಸುತ್ತಿದ್ದರು. ಈಗ ಉದಯನಿಧಿ‌ ಸ್ಟಾಲಿನ್‌ ಡೋಂಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತಾಡುವವರು ಎಚ್ಚರಿಕೆಯಿಂದ ಮಾತಾಡಲಿ. ಇದರಿಂದ ಅವರ ಮುಂದಿನ ಪೀಳಿಗೆ ಚೆನ್ನಾಗಿ ಇರುತ್ತದೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಈ ಮಧ್ಯೆ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಪರಮೇಶ್ವರ, ವಿವಾದಾತ್ಮಕ ಹೇಳಿಕೆ ನೀಡಿಲ್ಲ. ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮದ ಬಗ್ಗೆ ಹೇಳಿದ್ದೆ. ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್