AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಡಿಸಿಪಿ ಕಾರಿನ ಮೇಲೆ ಮರಳು ಲಾರಿ ಹತ್ತಿಸಲು ಯತ್ನ: ಚಾಲಕನ ಬಂಧನ

ಡಿಸಿಪಿ ಕಾರಿನ ಮೇಲೆ ಮರಳು ಸಾಗಣೆ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಈಚೆಗೆ ನಡೆದಿದೆ.

ಮಂಗಳೂರು ಡಿಸಿಪಿ ಕಾರಿನ ಮೇಲೆ ಮರಳು ಲಾರಿ ಹತ್ತಿಸಲು ಯತ್ನ: ಚಾಲಕನ ಬಂಧನ
ಡಿಸಿಪಿಯಿದ್ದ ವಾಹನಕ್ಕೆ ಡಿಕ್ಕಿ ಹೊಡೆಯಲು ಯತ್ನಿಸಿದ ಲಾರಿ ಮತ್ತು ಡಿಸಿಪಿ ಹರಿರಾಮ್ ಶಂಕರ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 21, 2021 | 11:39 PM

Share

ಮಂಗಳೂರು: ಡಿಸಿಪಿ ಕಾರಿನ ಮೇಲೆ ಮರಳು ಸಾಗಣೆ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಈಚೆಗೆ ನಡೆದಿದೆ. ಮಂಗಳೂರು ಹೊರವಲಯದ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಡಿಸಿಪಿ ಹರಿರಾಮ್ ಶಂಕರ್ ಪ್ರಯತ್ನಿಸಿದ್ದರು.

ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್​ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ, ಪರಂಗಿಪೇಟೆ ಔಟ್​ ಪೋಸ್ಟ್​ ಬಳಿ ಲಾರಿ ಅಡ್ಡಗಟ್ಟಿದ್ದರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಚಾಲಕ ಪ್ರಯತ್ನಿಸಿದ್ದ. ಬಳಿಕ ಔಟ್​ಪೋಸ್ಟ್​ನ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ.

ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆಎ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು. ಲಾರಿ ಚಾಲಕ ಮತ್ತು ಲಾರಿಯನ್ನು ಹಿಂಬಾಲಿಸುತ್ತಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು.

ಆರೋಪಿಗಳ ವಿರುದ್ಧ ಮರಳು ಕಳವು, ನಿರ್ಲಕ್ಷ್ಯದ ಚಾಲನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ. ಮರಳುಗಳ್ಳರು ತಪ್ಪಿಸಿಕೊಂಡು ಹೋಗುವ ಸಿಸಿಟಿವಿ ದೃಶ್ಯ ಪೊಲೀಸರಿಗೆ ಸಿಕ್ಕಿದೆ.

ಇದನ್ನೂ ಓದಿ: ‘ಸಲಗ’ VS​ ‘ರಿಯಲ್​ ಎಸ್ಟೇಟ್​’ ಸಿನಿಮಾಗಳ ವಿವಾದ ಅಂತ್ಯ; ಪೊಲೀಸ್​ ಠಾಣೆಯಲ್ಲಿ ಸಂಧಾನ ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಅಂಬರ್​ಗ್ರೀಸ್ ಮಾರುತ್ತಿದ್ದ ಐವರ ಬಂಧನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ