AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ, ಮಲೆನಾಡಿನಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್, ಕರುನಾಡಿಗೆ ಎದುರಾಗಿದ್ಯಾ ಉಗ್ರಗಾಮಿಗಳ ಆತಂಕ?

ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು ಮತ್ತೇ ಌಕ್ಟಿವ್ ಆಗಿವೆ. ರಾಜ್ಯದಲ್ಲಿ ಎನ್ಐಎ ದಾಳಿಯ ಬಳಿಕ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು ರಿಂಗಣಿಸುತ್ತಿರುವುದು ಗುಪ್ತಚರ ಇಲಾಖೆಯ ಅಧಿಕಾರಿಗಳ ನಿದ್ದೆಗೆಡಿಸಿದೆ.

ಕರಾವಳಿ, ಮಲೆನಾಡಿನಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್, ಕರುನಾಡಿಗೆ ಎದುರಾಗಿದ್ಯಾ ಉಗ್ರಗಾಮಿಗಳ ಆತಂಕ?
ಸ್ಯಾಟಲೈಟ್ ಫೋನ್
TV9 Web
| Updated By: ಆಯೇಷಾ ಬಾನು|

Updated on: Sep 17, 2021 | 7:05 AM

Share

ಮಂಗಳೂರು: ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು ಮತ್ತೇ ರಿಂಗಣಿಸಲು ಆರಂಭಿಸಿವೆ. ಕರಾವಳಿ ಹಾಗು ಮಲೆನಾಡು ಭಾಗದ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್‌ಗಳ ಮೂಲಕ ಸಂಪರ್ಕ ಸಾಧಿಸಿರುವುದು ಕೇಂದ್ರ ಬೇಹುಗಾರಿಕಾ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಶಂಕಿತ ಉಗ್ರರ ಬಂಧನದ ಬಳಿಕ ಸೈಲೆಂಟ್? ಇತ್ತೀಚೆಗಷ್ಟೇ ಎನ್ಐಎ ಅಧಿಕಾರಿಗಳು ಕೇರಳದ ಕಣ್ಣೂರು, ಮಂಗಳೂರು, ಭಟ್ಕಳದಲ್ಲಿ ದಾಳಿ ನಡೆಸಿದ್ರು. ಈ ವೇಳೆ ಶಂಕಿತ ಐಸಿಸ್ ಉಗ್ರನನ್ನ ಬಂಧಿಸಿದ್ರು. ಜೊತೆಗೆ ಐಸಿಸ್ ಉಗ್ರ ಸಂಘಟನೆಗೆ ಯುವಕರನ್ನು ರವಾನಿಸುತ್ತಿದ್ದ ಫಂಡ್ ರೈಸ್ ಮಾಡ್ತಿದ್ದ 8 ಶಂಕಿತರ ಹೆಡೆಮುರಿ ಕಟ್ಟಿದ್ರು. ಆಗ ದಿಢೀರನೆ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು ಇದೀಗ ಮತ್ತೆ ಌಕ್ಟೀವ್ ಆಗಿವೆ.

4 ಸ್ಥಳಗಳಲ್ಲಿ ಸ್ಯಾಟಲೈಟ್ ಫೋನ್ ಌಕ್ಟಿವ್ ರಾಜ್ಯದ 4 ಕಡೆ ಸ್ಯಾಟಲೈಟ್ ಫೋನ್ ಸಂಪರ್ಕ ಇಂಟರ್ ಸೆಪ್ಟ್ ಆಗಿರುವ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಕೇಂದ್ರ ಬೇಹುಗಾರಿಕಾ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ದಟ್ಟಾರಣ್ಯ ಪ್ರದೇಶ , ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಎರಡು ಪ್ರದೇಶಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಬಳಿಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಲೊಕೇಷನ್ ಟ್ರೇಸ್ ಮಾಡಲಾಗಿದೆ. ಕಳೆದ ಒಂದು ವಾರದ ಅಂತರದಲ್ಲಿ 4 ಕಡೆ ಸ್ಯಾಟಲೈಟ್ ಫೋನ್‌ನಿಂದ ನಿಗೂಢ ವ್ಯಕ್ತಿಗಳು ಸಂಪರ್ಕ ಸಾಧಿಸಿರುವುದು ಪತ್ತೆಯಾಗಿದೆ.

ಸೈಲೆಂಟ್ ಮೋಡ್‌ನಲ್ಲಿದ್ದ ಸ್ಯಾಟಲೈಟ್ ಫೋನ್‌ಗಳು ರಿಂಗಣಿಸಿದ್ದೇಕೆ? ಅಂದಹಾಗೆ ಇತ್ತೀಚೆಗೆ ದೇಶದೊಳಗೆ 13 ಮಂದಿ ಶ್ರೀಲಂಕಾದ ಶಂಕಿತ ಉಗ್ರರನ್ನು ಒಳನುಸುಳಿರುವ ಬಗ್ಗೆ ಬೇಹುಗಾರಿಕಾ ಇಲಾಖೆ ಮಾಹಿತಿ ರವಾನಿಸಿತ್ತು. ಈ ಶಂಕಿತ ಉಗ್ರರು ಪಾಕಿಸ್ಥಾನಕ್ಕೆ ತೆರಳುವ ಉದ್ದೇಶ ಹೊಂದಿದ್ದರು ಎಂಬ ಮಾಹಿತಿಯೂ ಲಭಿಸಿತ್ತು. ಹಾಗಾಗಿ ಕರಾವಳಿಯಲ್ಲಿನ ಸ್ಲೀಪರ್ ಸೆಲ್‌ಗಳನ್ನು ಬಳಸಿ ಈ ಶಂಕಿತರನ್ನು ಪಾಕಿಸ್ತಾನಕ್ಕೆ ಕಳುಹಿಸುವ ಪ್ರಯತ್ನ ನಡೀತಿದ್ಯಾ? ಅದಕ್ಕಾಗಿಯೇ ಸೈಲೆಂಟ್ ಮೋಡ್‌ನಲ್ಲಿದ್ದ ಸ್ಯಾಟಲೈಟ್ ಫೋನ್‌ಗಳು ಌಕ್ಟೀವ್ ಆಗಿದ್ಯಾ ಅನುಮಾನ ಕಾಡುತ್ತಿದ್ದು, ಗುಪ್ತಚರ ಇಲಾಖೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಘೋಷಿತ ಜಾಗತಿಕ ಉಗ್ರಗಾಮಿ ಖಲೀಲ್ ಹಕ್ಕಾನಿ ಕಾಬೂಲ್‌ನಲ್ಲಿ ರಾಜಾರೋಷವಾಗಿ ಓಡಾಟ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ