AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ, ಮಲೆನಾಡಿನಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್, ಕರುನಾಡಿಗೆ ಎದುರಾಗಿದ್ಯಾ ಉಗ್ರಗಾಮಿಗಳ ಆತಂಕ?

ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು ಮತ್ತೇ ಌಕ್ಟಿವ್ ಆಗಿವೆ. ರಾಜ್ಯದಲ್ಲಿ ಎನ್ಐಎ ದಾಳಿಯ ಬಳಿಕ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು ರಿಂಗಣಿಸುತ್ತಿರುವುದು ಗುಪ್ತಚರ ಇಲಾಖೆಯ ಅಧಿಕಾರಿಗಳ ನಿದ್ದೆಗೆಡಿಸಿದೆ.

ಕರಾವಳಿ, ಮಲೆನಾಡಿನಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್, ಕರುನಾಡಿಗೆ ಎದುರಾಗಿದ್ಯಾ ಉಗ್ರಗಾಮಿಗಳ ಆತಂಕ?
ಸ್ಯಾಟಲೈಟ್ ಫೋನ್
TV9 Web
| Edited By: |

Updated on: Sep 17, 2021 | 7:05 AM

Share

ಮಂಗಳೂರು: ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು ಮತ್ತೇ ರಿಂಗಣಿಸಲು ಆರಂಭಿಸಿವೆ. ಕರಾವಳಿ ಹಾಗು ಮಲೆನಾಡು ಭಾಗದ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್‌ಗಳ ಮೂಲಕ ಸಂಪರ್ಕ ಸಾಧಿಸಿರುವುದು ಕೇಂದ್ರ ಬೇಹುಗಾರಿಕಾ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಶಂಕಿತ ಉಗ್ರರ ಬಂಧನದ ಬಳಿಕ ಸೈಲೆಂಟ್? ಇತ್ತೀಚೆಗಷ್ಟೇ ಎನ್ಐಎ ಅಧಿಕಾರಿಗಳು ಕೇರಳದ ಕಣ್ಣೂರು, ಮಂಗಳೂರು, ಭಟ್ಕಳದಲ್ಲಿ ದಾಳಿ ನಡೆಸಿದ್ರು. ಈ ವೇಳೆ ಶಂಕಿತ ಐಸಿಸ್ ಉಗ್ರನನ್ನ ಬಂಧಿಸಿದ್ರು. ಜೊತೆಗೆ ಐಸಿಸ್ ಉಗ್ರ ಸಂಘಟನೆಗೆ ಯುವಕರನ್ನು ರವಾನಿಸುತ್ತಿದ್ದ ಫಂಡ್ ರೈಸ್ ಮಾಡ್ತಿದ್ದ 8 ಶಂಕಿತರ ಹೆಡೆಮುರಿ ಕಟ್ಟಿದ್ರು. ಆಗ ದಿಢೀರನೆ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು ಇದೀಗ ಮತ್ತೆ ಌಕ್ಟೀವ್ ಆಗಿವೆ.

4 ಸ್ಥಳಗಳಲ್ಲಿ ಸ್ಯಾಟಲೈಟ್ ಫೋನ್ ಌಕ್ಟಿವ್ ರಾಜ್ಯದ 4 ಕಡೆ ಸ್ಯಾಟಲೈಟ್ ಫೋನ್ ಸಂಪರ್ಕ ಇಂಟರ್ ಸೆಪ್ಟ್ ಆಗಿರುವ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಕೇಂದ್ರ ಬೇಹುಗಾರಿಕಾ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ದಟ್ಟಾರಣ್ಯ ಪ್ರದೇಶ , ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಎರಡು ಪ್ರದೇಶಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಬಳಿಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಲೊಕೇಷನ್ ಟ್ರೇಸ್ ಮಾಡಲಾಗಿದೆ. ಕಳೆದ ಒಂದು ವಾರದ ಅಂತರದಲ್ಲಿ 4 ಕಡೆ ಸ್ಯಾಟಲೈಟ್ ಫೋನ್‌ನಿಂದ ನಿಗೂಢ ವ್ಯಕ್ತಿಗಳು ಸಂಪರ್ಕ ಸಾಧಿಸಿರುವುದು ಪತ್ತೆಯಾಗಿದೆ.

ಸೈಲೆಂಟ್ ಮೋಡ್‌ನಲ್ಲಿದ್ದ ಸ್ಯಾಟಲೈಟ್ ಫೋನ್‌ಗಳು ರಿಂಗಣಿಸಿದ್ದೇಕೆ? ಅಂದಹಾಗೆ ಇತ್ತೀಚೆಗೆ ದೇಶದೊಳಗೆ 13 ಮಂದಿ ಶ್ರೀಲಂಕಾದ ಶಂಕಿತ ಉಗ್ರರನ್ನು ಒಳನುಸುಳಿರುವ ಬಗ್ಗೆ ಬೇಹುಗಾರಿಕಾ ಇಲಾಖೆ ಮಾಹಿತಿ ರವಾನಿಸಿತ್ತು. ಈ ಶಂಕಿತ ಉಗ್ರರು ಪಾಕಿಸ್ಥಾನಕ್ಕೆ ತೆರಳುವ ಉದ್ದೇಶ ಹೊಂದಿದ್ದರು ಎಂಬ ಮಾಹಿತಿಯೂ ಲಭಿಸಿತ್ತು. ಹಾಗಾಗಿ ಕರಾವಳಿಯಲ್ಲಿನ ಸ್ಲೀಪರ್ ಸೆಲ್‌ಗಳನ್ನು ಬಳಸಿ ಈ ಶಂಕಿತರನ್ನು ಪಾಕಿಸ್ತಾನಕ್ಕೆ ಕಳುಹಿಸುವ ಪ್ರಯತ್ನ ನಡೀತಿದ್ಯಾ? ಅದಕ್ಕಾಗಿಯೇ ಸೈಲೆಂಟ್ ಮೋಡ್‌ನಲ್ಲಿದ್ದ ಸ್ಯಾಟಲೈಟ್ ಫೋನ್‌ಗಳು ಌಕ್ಟೀವ್ ಆಗಿದ್ಯಾ ಅನುಮಾನ ಕಾಡುತ್ತಿದ್ದು, ಗುಪ್ತಚರ ಇಲಾಖೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಘೋಷಿತ ಜಾಗತಿಕ ಉಗ್ರಗಾಮಿ ಖಲೀಲ್ ಹಕ್ಕಾನಿ ಕಾಬೂಲ್‌ನಲ್ಲಿ ರಾಜಾರೋಷವಾಗಿ ಓಡಾಟ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ