AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಟಿಕೆಟ್​​ ಘೋಷಿಸಿದ ಎಸ್​ಡಿಪಿಐ​

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್​ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್​ ಘೋಷಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಟಿಕೆಟ್​​ ಘೋಷಿಸಿದ ಎಸ್​ಡಿಪಿಐ​
ಮೃತ ಪ್ರವೀಣ್ ನೆಟ್ಟಾರು, ಜೈಲುಪಾಲಾಗಿರುವ ಶಾಫಿ ಬೆಳ್ಳಾರೆ
TV9 Web
| Edited By: |

Updated on:Feb 13, 2023 | 3:44 PM

Share

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ. ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇತ್ತ ಎಸ್​ಡಿಪಿಐ (SDPI) ಕೂಡ ಚುನಾವಣೆಗೆ ತಯಾರಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆ (Shafi Bellare) ಗೆ ಎಸ್​ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್​ ಘೋಷಿಸಿದೆ. ಎಸ್​ಡಿಪಿಐನ ಈ ನಡೆ ವಿವಾದ ಕೂಡ ಉಂಟುಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್​ಐಎ ಶಾಫಿ ಬೆಳ್ಳಾರೆಯನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ ವಶದಲ್ಲಿದ್ದು, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಎಸ್​ಡಿಪಿಐ ಕಾರ್ಯಕರ್ತರ ಸಮಾವೇಶ ದಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್​ ಖಾನ್​ ಆಗಿದ್ದು, ಶಾಫಿ ಬೆಳ್ಳಾರೆ ಎಸ್​ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಸದ್ಯ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ NIA ಬಂಧನದಲ್ಲಿರುವ ಶಾಫಿ ಬೆಳ್ಳಾರೆ, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ SDPI ಭಾರಿ ವಿವಾದ ಸೃಷ್ಟಿಸಿದೆ.

ಇದನ್ನೂ ಓದಿ: Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್​ಐಎ

ಉಗ್ರರನ್ನು ಕರೆತಂದು ಟಿಕೆಟ್ ಕೊಡ್ತಾರೆ: ಆರ್.ಅಶೋಕ್

ಈ ಕುರಿತಾಗಿ ಬೆಂಗಳೂರು ನಗರದಲ್ಲಿ ಕಂದಾಯ ಸಚಿವ ಆರ್.ಅಶೋಕ್​ ಪ್ರತಿಕ್ರಿಯೆ ನೀಡಿದ್ದು, ದೇಶದಲ್ಲಿ‌ ಈಗಾಗಲೇ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದೆ. ಪಿಎಫ್‌ಐ ರೀತಿ ಎಸ್​ಡಿ‌ಪಿಐ ಸಂಘಟನೆ ಕೂಡ ಬ್ಯಾನ್ ಮಾಡಬೇಕು. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುತ್ತೇನೆ. SDPI ಸಂಘಟನೆಯವರು ಉಗ್ರರನ್ನು ಕರೆತಂದು ಟಿಕೆಟ್ ಕೊಡ್ತಾರೆ. ಆಗ ಅವರಿಗೂ ಭದ್ರತೆ ಕೊಡಬೇಕಾಗುತ್ತೆ. ಬಳಿಕ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್​ಗೆ ಹೋಗ್ತಾರೆ. ಪ್ರವೀಣ್‌ ಹತ್ಯೆಯಲ್ಲಿ ಭಾಗಿಯಾದವನು ಚುನಾವಣೆಗೆ ಸ್ಪರ್ಧಿಸುತ್ತಿದ್ದಾನೆ. SDPI ಸಂಘಟನೆ ದೇಶವಿರೋಧಿ ಚಟುವಟಿಕೆಯ ಅಂಗ ಎಂದು ವಾಗ್ದಾಳಿ ಮಾಡಿದರು.

20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ NIA

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ಟಿವಿ9ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಶರಣ್​ ಪಂಪ್​​ವೆಲ್​ಗೆ ಸಂಕಷ್ಟ

ಬಿಜೆಪಿ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್​​ವೆಲ್​ ಇತ್ತೀಚೆಗೆ ಉಳ್ಳಾಲದಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಹೇಳಿದ್ದರು. ಈ ವಿಚಾರವಾಗಿ ಫಾಜಿಲ್ ತಂದೆ ಉಮಾರ್ ಫಾರೂಕ್​ ಮಂಗಳೂರು ಕಮಿಷನರ್ ಶಶಿಕುಮಾರ್​ಗೆ ಶರಣ್ ಪಂಪ್ ವೆಲ್​ನನ್ನು ಬಂಧಿಸಿ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿ ಮಾತನಾಡಿ, ಮಗನ ಹತ್ಯೆ ಕೇಸ್​ನಲ್ಲಿ ಎಂಟು ಜನರನ್ನು ಬಂಧಿಸಿ ಕೋರ್ಟ್​ಗೆ ಚಾರ್ಜ್ ಶೀಟ್ ಹಾಕಲಾಗಿದೆ.

ಇದನ್ನೂ ಓದಿ: ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ: ಶರಣ್ ಪಂಪ್​ವೆಲ್

ಪ್ರಕರಣದ ಸೂತ್ರಧಾರಿಗಳ ತನಿಖೆಗೆ ನಾನು ಮನವಿ ಮಾಡುತ್ತಲೇ ಇದ್ದೇನೆ. ಆದರೆ ಈವರೆಗೆ ತನಿಖಾಧಿಕಾರಿ ಸೂತ್ರಧಾರಿ ಯಾರೆಂದು ತನಿಖೆ ನಡೆಸಿಲ್ಲ. ಇದೀಗ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ನನ್ನ ಮಗನ ಹತ್ಯೆಯನ್ನು ಸಮರ್ಥಿಸಿದ್ದಾನೆ ಎಂದು ಉಮಾರ್ ಫಾರೂಕ್​ ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:36 pm, Mon, 13 February 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್