AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರ್ ಸಾವರ್ಕರ್ ಫೋಟೋ ಹಿಡಿದು ವಿದ್ಯಾರ್ಥಿಗಳ ನೃತ್ಯ: ಎಸ್ಡಿಪಿಐ ಸದಸ್ಯರಿಂದ ಕಿರಿಕ್, ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗ್ರಾ‌.ಪಂ.ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ನೃತ್ಯ ಮಾಡಿದರು.

ವೀರ್ ಸಾವರ್ಕರ್ ಫೋಟೋ ಹಿಡಿದು ವಿದ್ಯಾರ್ಥಿಗಳ ನೃತ್ಯ: ಎಸ್ಡಿಪಿಐ ಸದಸ್ಯರಿಂದ ಕಿರಿಕ್, ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್
ಎಸ್ಡಿಪಿಐ ಸದಸ್ಯರಿಂದ ಕಿರಿಕ್
TV9 Web
| Edited By: |

Updated on:Aug 15, 2022 | 3:37 PM

Share

ಮಂಗಳೂರು: ವಿದ್ಯಾರ್ಥಿಗಳು ಸಾವರ್ಕರ್(Veer Savarkar) ಫೋಟೋ ಹಿಡಿದು ನೃತ್ಯ ಮಾಡಿದ್ದಕ್ಕೆ ಎಸ್ಡಿಪಿಐ ಸದಸ್ಯರು(SDPI) ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗ್ರಾ‌.ಪಂ.ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ನೃತ್ಯ ಮಾಡಿದರು. ನೃತ್ಯದ ವೇಳೆ ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಾರೆ. ಈ ವೇಳೆ ಎಸ್ಡಿಪಿಐ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಕಿರಿಕ್ ಮಾಡಿದ್ದಾರೆ. ಗ್ರಾ.ಪಂ. ಸಿಬ್ಬಂದಿ ಜೊತೆ SDPI ಮುಖಂಡರು ವಾಗ್ವಾದ ನಡೆಸಿದ್ದಾರೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಸಾವರ್ಕರ್ ಬ್ಯಾನರ್ ತೆರವು ಖಂಡಿಸಿ ಹಿಂದೂ ಪರ ಸಂಘಟನೆಗಳ ಧರಣಿ

75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಶಿವಮೊಗ್ಗದಲ್ಲಿ ಸಾವರ್ಕರ್ ಬ್ಯಾನರ್ ಹಾಕಲಾಗಿತ್ತು. ಆದ್ರೆ ಕಿಡಿಗೇಡಿಗಳು ಸಾವರ್ಕರ್ ಬ್ಯಾನರ್​​​ ತೆರವುಗೊಳಿಸಿದ್ದಾರೆ. ಶಿವಮೊಗ್ಗದ ಅಮೀರ್​ ಅಹ್ಮದ್​​​ ವೃತ್ತದಲ್ಲಿ ಬ್ಯಾನರ್ ತೆರವು ಖಂಡಿಸಿ ಹಿಂದೂ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಸಾವರ್ಕರ್​ ಫ್ಲೆಕ್ಸ್​​ ಹಾಕಲು ಕಾರ್ಯಕರ್ತರು ಮುಂದಾಗಿದ್ದು ಈ ವೇಳೆ ಪೊಲೀಸರು ಫ್ಲೆಕ್ಸ್​ ಹಾಕುವುದನ್ನು ತಡೆದಿದ್ದಾರೆ. ಕಾರ್ಯಕರ್ತರು-ಪೊಲೀಸರ ನಡುವೆ ಮಾತಿನ ಚಕಮಕಿ ಆಗಿದೆ. ಲಘು ಲಾಠಿ ಪ್ರಹಾರ ಕೂಡ ಆಗಿದೆ. ಫ್ಲೆಕ್ಸ್​ ಹಾಕಲು ಬಂದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಅಮೀರ್​ ಅಹ್ಮದ್​​​ ವೃತ್ತದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಿ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 3:22 pm, Mon, 15 August 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ