AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳ ಹಿಂದೂ ರಾಷ್ಟ್ರ ಸಭೆಗೆ SDPI ವಿರೋಧ: ಸಂವಿಧಾನ ಉಲ್ಲಂಘನೆ ಆರೋಪ, ದೂರು ದಾಖಲು

ಬಂಟ್ವಾಳದ ಅರಳದಲ್ಲಿ ಫೆಬ್ರವರಿ 22ರಂದು ನಡೆಯಲಿರುವ 'ಹಿಂದೂ ರಾಷ್ಟ್ರ ಜಾಗೃತಿ ಸಭೆ'ಗೆ ಎಸ್‌ಡಿಪಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಯಾವುದೇ ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ರಾಷ್ಟ್ರವನ್ನು ಗುರುತಿಸುವುದು ಸಂವಿಧಾನದ ಉಲ್ಲಂಘನೆ ಮತ್ತು ದೇಶದ್ರೋಹ ಎಂದು ಆರೋಪಿಸಿ, ಎಸ್‌ಡಿಪಿಐ ಮುಖಂಡರು ಸಭೆಯ ಆಯೋಜಕರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಬಂಟ್ವಾಳ ಹಿಂದೂ ರಾಷ್ಟ್ರ ಸಭೆಗೆ SDPI ವಿರೋಧ: ಸಂವಿಧಾನ ಉಲ್ಲಂಘನೆ ಆರೋಪ, ದೂರು ದಾಖಲು
SDPI ಮುಖಂಡರಿಂದ ದೂರು Image Credit source: tv9 kannada
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 15, 2026 | 7:10 PM

Share

ಮಂಗಳೂರು, ಫೆಬ್ರವರಿ 15: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಅರಳ ಗರುಡ ಮಹಾಕಾಳಿ ದೇಗುಲದಲ್ಲಿ ಫೆ.22ರಂದು ನಡೆಯುವ ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ (Hindu Rashtra Jagruti Sabha) SDPIನಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆಯೋಜಕರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಫೆ.22ರಂದು ನಡೆಯಲಿರುವ ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ ಸದ್ಯ ವಿರೋಧ ವ್ಯಕ್ತವಾಗಿದೆ. SDPI ಮುಖಂಡ S.H.ಶಾಹುಲ್, ಕಬೀರ್ ಅಕ್ಕರಂಗಡಿ, ಅಕ್ಬರ್ ಅಲಿ ಪೊನ್ನೋಡಿ, ಇಮ್ರಾನ್ ಬಂಟ್ವಾಳ, ಉಬೈದ್​ರಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ದೂರಿನಲ್ಲೇನಿದೆ?

ಹಿಂದೂ ಜನಜಾಗೃತಿ ಸಮಿತಿ ಇದರ ವತಿಯಿಂದ ಹಿಂದೂ ರಾಷ್ಟ್ರ ನಿರ್ಮಾಣ ಎಂಬ ಸಂವಿಧಾನ ವಿರೋದಿ ದೇಶದ್ರೋಹಿ ಚಟುವಟಿಕೆಗಳಿಗೆ ಕರೆನೀಡುವ ಮತ್ತು ಸಮಾಜದಲ್ಲಿ ಆತಂಕ ಸೃಷ್ಟಿಸುವ ಕಾರ್ಯಕ್ರಮದ ಅನುಮತಿಯನ್ನು ನಿರಾಕರಿಸಬೇಕು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ.

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ನಡೆಯಬೇಕಿದ್ದ ದಫ್ ಕಾರ್ಯಕ್ರಮ ರದ್ದು

ಇನ್ನು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಲು ಉದ್ದೇಶಿಸಿದ್ದ ದಫ್ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಬೋಟ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಏನೆಲ್ಲಾ ಸೌಲಭ್ಯ, ಹೇಗೆ ಕಾರ್ಯನಿರ್ವಹಿಸುತ್ತೆ?

ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ “ಕೆವಿಜಿ ಸುಳ್ಯ ಹಬ್ಬ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಮಂಗಳೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ದಫ್ ಪ್ರದರ್ಶನವನ್ನು ಏರ್ಪಡಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಒತ್ತಡ ಹೇರಿದ ಪರಿಣಾಮ, ಆಯೋಜಕರು ದಫ್ ಪ್ರದರ್ಶನವನ್ನು ಕಾರ್ಯಕ್ರಮ ಪಟ್ಟಿಯಿಂದ ಕೈಬಿಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ?
ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ?
ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?