AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಸಂಘರ್ಷ ಹಾಗೂ ಹುತಾತ್ಮರಾಗಲು ಮುಸ್ಲಿಮರಿಗೆ ಎಸ್​ಡಿಪಿಐ ರಾಜ್ಯಾಧ್ಯಕ್ಷ ಕರೆ

ಲೋಕಸಭಾ ಚುನಾವಣೆಗೆ ಇನ್ನು ಕೆಲವು ತಿಂಗಳು ಬಾಕಿ ಇರುವಂತೆಯೇ ‘ದೇಶದಲ್ಲಿ ಸಂಘರ್ಷಕ್ಕೆ ಮತ್ತು ಹುತಾತ್ಮರಾಗಲು ತಯಾರಾಗಿ ಎಂದು ಎಸ್​ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಹಿರಂಗ ಕರೆ ಕೊಟ್ಟಿದ್ದಾರೆ. ‘ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿರುವ ಹಿನ್ನೆಲೆ. ಅದನ್ನು ಖಂಡಿಸಿ ಇಂದು (ಫೆ,09) ಮಂಗಳೂರಿನಲ್ಲಿ SDPI, ‘ಜ್ಞಾನವಾಪಿ ನಮ್ಮದು, ನಮ್ಮದಾಗೆ ಉಳಿಯುವುದು ಎಂಬ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿದೆ.

ದೇಶದಲ್ಲಿ ಸಂಘರ್ಷ ಹಾಗೂ ಹುತಾತ್ಮರಾಗಲು ಮುಸ್ಲಿಮರಿಗೆ ಎಸ್​ಡಿಪಿಐ ರಾಜ್ಯಾಧ್ಯಕ್ಷ ಕರೆ
ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಅಶೋಕ್​ ಪೂಜಾರಿ, ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 09, 2024 | 5:30 PM

Share

ದಕ್ಷಿಣ ಕನ್ನಡ, ಫೆ.09: ಲೋಕಾಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದೆ. ಈ ವೇಳೆ ದೇಶದಲ್ಲಿ ಸಂಘರ್ಷಕ್ಕೆ ಮತ್ತು ಹುತಾತ್ಮರಾಗಲು ತಯಾರಾಗಿ ಎಂದು ಎಸ್​ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್(Abdul Majeed) ಬಹಿರಂಗ ಕರೆ ಕೊಟ್ಟಿದ್ದಾರೆ. ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿರುವ ಹಿನ್ನೆಲೆ ಅದನ್ನು ಖಂಡಿಸಿ ಇಂದು (ಫೆ,09) ಮಂಗಳೂರಿನಲ್ಲಿ SDPI, ‘ಜ್ಞಾನವಾಪಿ ನಮ್ಮದು, ನಮ್ಮದಾಗೆ ಉಳಿಯುವುದು ಎಂಬ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಮಾತನಾಡಿದ ಅವರು ‘ಜ್ಞಾನವಾಪಿ ವಿಷಯ ಕುರಿತು ಹೈಕೋರ್ಟ್​ನಲ್ಲಿ ಕೇಸು ನಡೀತಾ ಇತ್ತು. ಆದರೂ ತರಾತುರಿಯಲ್ಲಿ ಕೆಳಗಿನ ಕೋರ್ಟ್ ನ ಜಡ್ಜ್ ಪೂಜೆಗೆ ಅವಕಾಶ ಕೊಟ್ಟರು ಎಂದು ಕಿಡಿಕಾರಿದ್ದಾರೆ.

ಸಂಘರ್ಷ, ತ್ಯಾಗ, ಬಲಿದಾನ ಮಾಡದೇ ನಮ್ಮ ಸಮಸ್ಯೆಗೆ ಪರಿಹಾರ ಇಲ್ಲ

ಪೂಜಾ ಸ್ಥಳ ಕಾಯಿದೆಯಡಿ ಯಥಾಸ್ಥಿತಿ ಆದೇಶ ಇದೆ. ಆದರೆ, ಆ ಕಾನೂನಿಗೆ ಮೂರು ಕಾಸಿನ ಬೆಲೆ ಕೊಡುತ್ತಿಲ್ಲ. ಸಂಘರ್ಷ, ತ್ಯಾಗ, ಬಲಿದಾನ ಮಾಡದೇ ನಮ್ಮ ಸಮಸ್ಯೆಗೆ ಪರಿಹಾರ ಇಲ್ಲ. ಈ ದೇಶದಲ್ಲಿ ಕಾನೂನು ಇದ್ಯಾ?, ಕಾನೂನು ಸತ್ತು ಹೋಗಿದೆ. ಯಾವ ಬೆಲೆ ತೆತ್ತಾದರೂ ಮಸೀದಿ, ಮಂದಿರ, ಚರ್ಚ್​ಗಳನ್ನು ಉಳಿಸಿಕೊಳ್ಳಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದ್ದಿದ್ದನ್ನ ಅಲ್ಲೇ ಉಳಿಸಿಕೊಳ್ಳಬೇಕು.

ಇದನ್ನೂ ಓದಿ:ಸಾವರ್ಕರ್ ವಿಚಾರದಲ್ಲಿ ಸ್ಪೀಕರ್ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಸ್​ಡಿಪಿಐ ಮುಖಂಡ ಅರೆಸ್ಟ್

ಜೈಲಿಗೆ ಹೋಗಲು, ಕೇಸುಗಳನ್ನ ಹಾಕಿಸಿಕೊಳ್ಳಲು, ಹುತಾತ್ಮರಾಗಲು ತಯಾರಾಗಿ

ಸಿದ್ದರಾಮಯ್ಯ, ರಾಹುಲ್ ಗಾಂಧಿ, ಸೋನಿಯಾ ಹಾಗೂ ಖರ್ಗೆ ಉಳಿಸ್ತಾರೆ ಎಂದು ಕಾಯಬೇಡಿ. ಜೈಲಿಗೆ ಹೋಗಲು, ಕೇಸುಗಳನ್ನ ಹಾಕಿಸಿಕೊಳ್ಳಲು, ಲಾಠಿ ಏಟು ತಿನ್ನಲು ಹಾಗೂ ಹುತಾತ್ಮರಾಗಲು ಎಲ್ಲರೂ ತಯಾರಾಗಿ. ನಾವು ಇವತ್ತಲ್ಲ, ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ. ಯಾರೋ ಉಳಿಸ್ತಾರೆ ಅಂತ ಕಾಯಬೇಡಿ, ಬೀದಿಗಿಳಿದು ಹೋರಾಡಿ. ನಾವೆಲ್ಲರೂ ಸಂಘರ್ಷಕ್ಕೆ ತಯಾರಾಗೋಣ ಎಂದು ಎಸ್​ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕರೆ ಕೊಟ್ಟಿದ್ದಾರೆ . ಪ್ರತಿಭಟನೆಯಲ್ಲಿ SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

ದ‌.ಕ ಜಿಲ್ಲೆಯಲ್ಲಿ ಸಂಘಪರಿವಾರವನ್ನ ಎದುರಿಸೋ ಜನ ಸಮೂಹ ಇದೆ-ರಾಷ್ಟ್ರೀಯ ಕಾರ್ಯದರ್ಶಿ

ಇದೇ ವೇಳೆ ಮಾತನಾಡಿದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ, ‘ದೇಶದ ಸ್ಥಳೀಯ ಮತ್ತು ಮೇಲಿನ ನ್ಯಾಯಾಲಯಗಳ ತೀರ್ಪು ಅಂತಿಮ ಅಂದುಕೊಂಡಿದ್ದಾರೆ. ಆದರೆ, ಈ ದೇಶಕ್ಕೆ ಸರ್ವೋಚ್ಛ ಎನ್ನುವುದು ಸಂವಿಧಾನ. ಹೀಗಾಗಿ ನ್ಯಾಯಾಲಯಗಳು ಸಂವಿಧಾನದ ಪರವಾಗಿ ತೀರ್ಪು ನೀಡದಿದ್ದರೆ ಪ್ರಶ್ನಿಸಬೇಕು. ದ‌ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರವನ್ನ ಎದುರಿಸೋ ಜನ ಸಮೂಹ ಇದೆ. ನಾವು ಸೋತಿರಬಹುದು, ಆದರೆ ಸತ್ತಿಲ್ಲ.

ಮೋಹನ್ ಭಾಗವತ್ ಯಾರು ನಮ್ಮ ರಾಷ್ಟ್ರಪತಿಯಾ?, ನಮ್ಮ ಜೀವ ಹೋದರೂ ಪರವಾಗಿಲ್ಲ, ಹಕ್ಕಿಗಾಗಿ ನಾವು ಹೋರಾಟ ಮಾಡಬೇಕು. ಯಾವ ಕ್ಷಣದಲ್ಲಾದರೂ ನಮ್ಮ ಬಂಧನವಾಗಬಹುದು. ಆದರೆ, ಹೋರಾಟದಿಂದ ಹಿಂದೆ ಸರಿಯಲ್ಲ. ಇ.ಡಿ, ಎನ್ಐಎ ಮೂಲಕ ನೀವು ಭಯ ಪಡಿಸಿದರೂ ನಾವು ಭಯ ಪಡಲ್ಲ. ನಾವು ಕೇವಲ ಮಸೀದಿಗಳನ್ನ ಕಳೆದುಕೊಳ್ತಿಲ್ಲ, ನಮ್ಮ ಅಸ್ತಿತ್ವ ಕಳೆದುಕೊಳ್ತಾ ಇದೀವಿ. ಈ ದೇಶದ ಮಣ್ಣಿನಲ್ಲಿ ನಮಗೆ ಹಕ್ಕಿದೆ, ನಮ್ಮ ಪೂರ್ವಿಕರ ಅಸ್ತಿತ್ವ ಇದೆ. ನಿಮ್ಮ ಮನೆಗೆ ನುಸುಳಿದ್ರೆ ನೀವು ಸುಮ್ಮನೆ ಇರ್ತೀರಾ?, ಅದೇ ರೀತಿ ನಮ್ಮ ಧಾರ್ಮಿಕ ಚಿಹ್ನೆಗಳಾದ ಮಸೀದಿಗಳಿಗೆ ನುಸುಳಿದಾಗಲೂ ಪ್ರತಿರೋಧ, ವಿರೋಧ, ಆಕ್ರೋಶ ಇರಲಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Fri, 9 February 24

Follow Us
ಅಶೋಕ್​ ಪೂಜಾರಿ, ಮಂಗಳೂರು
ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್