Mangaluru News: ನಿಲ್ಲದ ಕಡಲ್ಕೊರೆತ, 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿ

ಮಂಗಳೂರಿನಲ್ಲಿ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ. ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದ್ದು, ಅಲೆಗಳ ಅಬ್ಬರಕ್ಕೆ ಸಾರ್ವಜನಿಕ ಆಟದ ಆಟದ ಮೈದಾನದ ಭೂ ಭಾಗ ಸಮುದ್ರ ಪಾಲಾಗಿದೆ.

Mangaluru News: ನಿಲ್ಲದ ಕಡಲ್ಕೊರೆತ, 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿ
ಕಡಲ್ಕೊರೆತ
Follow us
| Updated By: ವಿವೇಕ ಬಿರಾದಾರ

Updated on: Jul 09, 2023 | 8:15 AM

ಮಂಗಳೂರು: ಮಂಗಳೂರಿನಲ್ಲಿ (Mangaluru) ಮಳೆ (Rain) ಅಬ್ಬರ ನಿಂತರೂ ಕಡಲ್ಕೊರೆತ (Sea Erosion) ನಿಂತಿಲ್ಲ. ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದ್ದು, ಅಲೆಗಳ ಅಬ್ಬರಕ್ಕೆ ಸಾರ್ವಜನಿಕ ಆಟದ ಆಟದ ಮೈದಾನದ ಭೂ ಭಾಗ ಸಮುದ್ರ ಪಾಲಾಗಿದೆ. ಮೈದಾನದ ಸುತ್ತ ಕಲ್ಲುಗಳನ್ನ ಹಾಕಲಾಗಿದ್ದರೂ ಅಲೆಗಳು ಕಲ್ಲುಗಳನ್ನ ದಾಟಿ ಮೈದಾನದ ಭಾಗಕ್ಕೆ ಬಡಿಯುತ್ತಿವೆ. ಅಲ್ಲದೇ ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ.

ತಾತ್ಕಾಲಿಕ ಕಾಮಗಾರಿ ಆರಂಭ

ಮಂಗಳೂರಿನ ಬೀಚ್​ಗಳಲ್ಲಿ ‌ಕಡಲ್ಕೊರೆತ ತಡೆಗೆ ತಾತ್ಕಾಲಿಕ ಕಾಮಗಾರಿ ಆರಂಭವಾಗಿದೆ. ಬೈಕಂಪಾಡಿ, ಮೀನಕಳಿಯ, ಪಣಂಬೂರು ಬೀಚ್​ನಲ್ಲಿ ಅಲೆಗಳ ಅಬ್ಬರ ತಡೆಯಲು ಮರಳು ಚೀಲಗಳ ಅಳವಡಿಸಲಾಗುತ್ತಿದೆ. ಹಿಟಾಚಿ ಮೂಲಕ ದೊಡ್ಡ ಗಾತ್ರದ ಕಪ್ಪು ಬ್ಯಾಗ್​ಗಳಿಗೆ ಮರಳು ತುಂಬಿಸಿ ಜೋಡಿಸಲಾಗುತ್ತಿದೆ.

ಇದನ್ನೂ ಓದಿ: Mangaluru News: ನೇತ್ರಾವತಿ ನದಿಯಲ್ಲಿ ಮುಳುಗಿದ ಬೋಟ್; ಮೀನುಗಾರನ ರಕ್ಷಣೆ

ಇನ್ನು ಮಳೆ ಹೆಚ್ಚಾದರೆ ಅಲೆಗಳ ಅಬ್ಬರ ಮತ್ತಷ್ಟು ಜೋರಾಗಲಿದ್ದು, ಮೀನಕಳಿಯ ಭಾಗದ ಸುಮಾರು 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿಯಲ್ಲಿವೆ. ಅಪಾಯದಲ್ಲಿರುವ ಮನೆಗಳ ತುರ್ತು ರಕ್ಷಣೆಗೆ ‌ಜಿಲ್ಲಾಡಳಿತ ಮುಂದಾಗಿದೆ. ಸಮುದ್ರದ ಅಲೆಗಳ ಅಬ್ಬರ ಏರಿಳಿತ ಗಮನಿಸಿ ತುರ್ತು ಕಾಮಗಾರಿ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​