ಪುತ್ತೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ವಿಚಾರಣಾಧೀನ ಕೈದಿ, ಪ್ರವೀಣ್ ನೆಟ್ಟಾರು ಕೊಲೆ ಆರೋಪಿ

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್​ಡಿಪಿಐ ಅಭ್ಯರ್ಥಿಯಾಗಿ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆ ಜೈಲಿನಿಂದಲೇ ಚುನಾವಣೆ ಎದುರಿಸಲಿದ್ದಾರೆ.

ಪುತ್ತೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ವಿಚಾರಣಾಧೀನ ಕೈದಿ, ಪ್ರವೀಣ್ ನೆಟ್ಟಾರು ಕೊಲೆ ಆರೋಪಿ
ಶಾಫಿ ಬೆಳ್ಳಾರೆ ಪರ ಎಸ್​ಡಿಪಿಐ ಕಾರ್ಯಕರ್ತರ ಪ್ರಚಾರ
ಆಯೇಷಾ ಬಾನು

Updated on: Apr 19, 2023 | 1:31 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್​ಡಿಪಿಐ ಅಭ್ಯರ್ಥಿಯಾಗಿರುವ ಶಾಫಿ ಬೆಳ್ಳಾರೆ ಅವರು ತಮ್ಮ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಯುಎಪಿಎ ಕಾಯ್ದೆಯಡಿ ಎನ್​​ಐಎ ತಂಡ ಬಂಧಿಸಿತ್ತು.

ಪಕ್ಷದ ಸಭೆ ನಡೆಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿತ್ತು. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ಸದ್ಯ ಜೈಲಿನಲ್ಲಿದ್ದಾರೆ. ಶಾಫಿ ಬೆಳ್ಳಾರೆ ಜೈಲಿನಿಂದಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೈಲಿನಿಂದಲೇ ನಾಮಪತ್ರ ಸಲ್ಲಿಸಲು ಅವಕಾಶವಿರುವುದರಿಂದ ತಮ್ಮ ಏಜೆಂಟರ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಶಾಫಿ ಬಂಧನದ ನಂತರ ಎಸ್‌ಡಿಪಿಐಗೆ ಭಾರೀ ಹೊಡೆತ ಬಿದ್ದಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us