AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಸೌಲಭ್ಯ; ಕರಾವಳಿ ಜಿಲ್ಲೆಗಳ ಖಾಸಗಿ ಬಸ್​ಗಳಿಗೆ ನಷ್ಟದ ಆತಂಕ

ದಕ್ಷಿಣ ಕನ್ನಡ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡೀಸೆಲ್ ಸಬ್ಸಿಡಿ ರೂಪದಲ್ಲಿ ಪರಿಹಾರ ನೀಡುವ ಅಗತ್ಯವನ್ನು ಮನವರಿಕೆ ಮಾಡಿಕೊಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Mangaluru News: ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಸೌಲಭ್ಯ; ಕರಾವಳಿ ಜಿಲ್ಲೆಗಳ ಖಾಸಗಿ ಬಸ್​ಗಳಿಗೆ ನಷ್ಟದ ಆತಂಕ
ಖಾಸಗಿ ಬಸ್​​ಗಳು (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jun 02, 2023 | 9:18 PM

Share

ಮಂಗಳೂರು: ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು (Shakti Scheme) ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಕರಾವಳಿ ಕರ್ನಾಟಕ ಭಾಗದ ಖಾಸಗಿ ಬಸ್​​ ನಿರ್ವಾಹಕರನ್ನು ಚಿಂತೆಗೀಡು ಮಾಡಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಿಸಿರುವುದು ಖಾಸಗಿ ಬಸ್​ಗಳಿಗೆ ಹೊರೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್​ಗಳ ಸಂಖ್ಯೆಯೇ ಹೆಚ್ಚಿದೆ. ಸರ್ಕಾರದ ಯೋಜನೆಯಿಂದ ಖಾಸಗಿ ಬಸ್‌ಗಳ ಲಾಭದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಮಧ್ಯೆ, ದಕ್ಷಿಣ ಕನ್ನಡ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡೀಸೆಲ್ ಸಬ್ಸಿಡಿ ರೂಪದಲ್ಲಿ ಪರಿಹಾರ ನೀಡುವ ಅಗತ್ಯವನ್ನು ಮನವರಿಕೆ ಮಾಡಿಕೊಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರು ನಗರವೊಂದರಲ್ಲೇ ಸುಮಾರು 328 ಬಸ್‌ಗಳನ್ನು ಖಾಸಗಿ ನಿರ್ವಾಹಕರು ನಡೆಸುತ್ತಿದ್ದು, 68 ಬಸ್‌ಗಳು ಗ್ರಾಮಾಂತರ ಪ್ರದೇಶದಲ್ಲಿ ಕಾಂಟ್ರಾಕ್ಟ್ ಕ್ಯಾರೇಜ್ ಆಧಾರದ ಮೇಲೆ ಕಾರ್ಯಾಚರಿಸುತ್ತಿವೆ. ಇಲ್ಲಿ ಖಾಸಗಿ ಬಸ್ ನಿರ್ವಾಹಕರೊಂದಿಗೆ ಕೆಎಸ್​​​ಆರ್​​ಟಿಸಿ ನೇರ ಪೈಪೋಟಿ ನಡೆಸುತ್ತಿದೆ.

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತವಾದರೆ, ತಮ್ಮ ಆದಾಯದ ಪ್ರಮುಖ ಮೂಲವಾಗಿರುವ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲೇ ತೆರಳಬಹುದು ಎಂದು ಖಾಸಗಿ ಬಸ್ ನಿರ್ವಾಹಕರು ಆತಂಕಕ್ಕೊಳಗಾಗಿದ್ದಾರೆ.

ಇದನ್ನೂ ಓದಿ: Shakti Scheme: ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಬಸ್​​ಗಳಲ್ಲಿ?

ಕಾಂಗ್ರೆಸ್ ಪಕ್ಷವು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಜನರು ಹೆಚ್ಚಾಗಿ ಖಾಸಗಿ ಬಸ್​ಗಳನ್ನು ಅವಲಂಬಿಸಿರುವುದರಿಂದ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಸುನಿಲ್ ಕುಮಾರ್ ಒತ್ತಾಯಿಸಿದ್ದರು.

ಇದನ್ನೂ ಓದಿ: ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಿ: ಸುನಿಲ್ ಕುಮಾರ್

ಈ ಬಗ್ಗೆ ಟ್ವೀಟ್ ಮಾಡಿದ್ದ ಸುನಿಲ್ ಕುಮಾರ್, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್​ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಉಲ್ಲೇಖಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ