AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Scheme: ಉಚಿತ ಬಸ್ ಪ್ರಯಾಣ, ಧರ್ಮಸ್ಥಳದಲ್ಲಿ ಮಹಿಳಾ ಭಕ್ತರ ದಂಡು

ರಾಜ್ಯದ ವಿವಿಧ ಭಾಗದಿಂದ ಬಸ್​​ನಲ್ಲಿ ಬಂದಿರುವ ಮಹಿಳೆಯರು ದೇವರ ದರ್ಶನ ಪಡೆದು ಕುಕ್ಕೆಗೆ ತೆರಳಲು ಸಾಲುಗಟ್ಟಿ ನಿಂತ ದೃಶ್ಯ ಕಂಡು ಬಂದಿದೆ. ಧರ್ಮಸ್ಥಳದಿಂದ ಕುಕ್ಕೆಗೆ ತೆರಳಲು ಧರ್ಮಸ್ಥಳದಲ್ಲಿ‌ ಜನಜಂಗುಳಿ ಉಂಟಾಗಿದ್ದು ಸರ್ಕಾರಿ ಬಸ್​ ಹತ್ತಲು ಮಹಿಳೆಯರ ನೂಕುನುಗ್ಗಲಾಗಿದೆ.

ಆಯೇಷಾ ಬಾನು
|

Updated on: Jun 13, 2023 | 3:31 PM

Share

ಮಂಗಳೂರು: ಶಕ್ತಿ ಯೋಜನೆ(Shakti Scheme) ಮೂಲಕ ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸಿಗುತ್ತಿದ್ದು ನಾರಿ ಮಣಿಗಳು ಫುಲ್ ಖುಷ್ ಆಗಿದ್ದಾರೆ. ಈ ಯೋಜನೆ ಮೂಲಕ ರಾಜ್ಯ ಪ್ರವಾಸಕ್ಕೆ ಇಳಿದಿದ್ದಾರೆ. ಶ್ರೀಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ(Dharmasthala) ಮಹಿಳಾ ಭಕ್ತರ ದಂಡು ಹರಿದು ಬರುತ್ತಿದೆ. ಈ ಹಿಂದೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಮಂಜುನಾಥ ಸ್ವಾಮಿಯ ದರ್ಶನ ಮಾಡುತ್ತಿದ್ದಾರೆ.

ರಾಜ್ಯದ ವಿವಿಧ ಭಾಗದಿಂದ ಬಸ್​​ನಲ್ಲಿ ಬಂದಿರುವ ಮಹಿಳೆಯರು ದೇವರ ದರ್ಶನ ಪಡೆದು ಕುಕ್ಕೆಗೆ ತೆರಳಲು ಸಾಲುಗಟ್ಟಿ ನಿಂತ ದೃಶ್ಯ ಕಂಡು ಬಂದಿದೆ. ಧರ್ಮಸ್ಥಳದಿಂದ ಕುಕ್ಕೆಗೆ ತೆರಳಲು ಧರ್ಮಸ್ಥಳದಲ್ಲಿ‌ ಜನಜಂಗುಳಿ ಉಂಟಾಗಿದ್ದು ಸರ್ಕಾರಿ ಬಸ್​ ಹತ್ತಲು ಮಹಿಳೆಯರ ನೂಕುನುಗ್ಗಲಾಗಿದೆ.

ಕಲಬುರಗಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಕಲಬುರಗಿ ನಗರದಿಂದ ರಾಜ್ಯದ ಬೇರಡೆ, ವಿವಿಧ ಬಸ್ ಗಳಲ್ಲಿ ಹೆಚ್ಚಿನ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡುತ್ತಿರುವುದು ಕಂಡುಬಂತು.

ಇದನ್ನೂ ಓದಿ: Shakti Scheme: ಉಚಿತ ಬಸ್​ಗೆ ಮುಗಿಬಿದ್ದ ಮಹಿಳೆಯರು; ಸಂಕಷ್ಟದಲ್ಲಿ ಖಾಸಗಿ ಬಸ್ ಮಾಲೀಕರು

ಅಜ್ಜಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಪ್ರಯಾಣಿಕ

ಶಕ್ತಿ ಯೋಜನೆಗೆ ಚಾಲನೆ ಸಿಗುತ್ತಿದ್ದಂತೆ ಮಹಿಳೆಯರು ಇದರ ಉಪಯೋಗ ಪಡೆಯಲು ಮುಂದಾಗಿದ್ದಾರೆ. ಯೋಜನೆಗೆ ಚಾಲನೆ ಸಿಕ್ಕ ದಿನದಿಂದಲೇ ಮಹಿಳೆಯರು ತಮ್ಮ ದಾಖಲೆಗಳನ್ನು ತೋರಿಸಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆದ್ರೆ ಜೂನ್ 11ರಂದು ವಯಸ್ಸಾದ ಮಹಿಳೆಯರು ಉಚಿತ ಅಂತ ಯಾವುದೇ ದಾಖಲೆ ತಾರದೇ ಬಸ್ಸಿನಲ್ಲಿ ಗೊಂದಲಕ್ಕೀಡಾಗುತ್ತಿದ್ದ ಘಟನೆಗಳು ನಡೆದಿವೆ. ಉಡುಪಿಯಲ್ಲಿ ಅಜ್ಜಿಯೊಬ್ಬರು ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳಲು ದಾಖಲೆ ತಾರದೇ, ಕೈಯಲ್ಲಿ ಹಣವೂ ಇಲ್ಲದೇ ಬಸ್ಸು ನಿಲ್ದಾಣದಲ್ಲಿ ಅಳುತ್ತಾ ಕುಳಿತ್ತಿದ್ದರು. ಬಸ್ ನಿರ್ವಾಹಕರು ದಾಖಲೆ ನೀಡದೇ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ ಅಂತ ಅಜ್ಜಿಗೆ ಪ್ರಯಾಣ ನಿರಾಕರಿಸಿದ್ದರು. ಕೊನೆಗೆ ಬಸ್ಸುನಿಲ್ದಾಣದಲ್ಲಿ ಇದ್ದವರೊಬ್ಬರು ಮಾನವೀಯತೆ ಮೆರೆದು ಶಿವಮೊಗ್ಗದ ಟಿಕೆಟ್ ಹಣವನ್ನು ತಾವು ನೀಡಿ ಅಜ್ಜಿಯನ್ನು ಶಿವಮೊಗ್ಗಕ್ಕೆ ಕಳುಹಿಸಿದ ಘಟನೆ ನಡೆದಿದೆ.

ಸಾರಿಗೆ ಇಲಾಖೆಯಿಂದ ತಿದ್ದುಪಡಿ ಆದೇಶ

ಇನ್ನು ಮಹಿಳೆಯರು ನಾಲ್ಕು ನಿಗಮದ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಒರಿಜಿನಲ್ ಅಥವಾ ಡಿಜಿ ಲಾಕರ್ ನಲ್ಲಿರುವ ತಮ್ಮ ದಾಖಲೆಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಿತ್ತು. ಈಗ ಸಾರಿಗೆ ಇಲಾಖೆ ತನ್ನ ಆದೇಶ ತಿದ್ದುಪಡಿ ಮಾಡಿದ್ದು ಜೆರಾಕ್ಸ್ ದಾಖಲೆಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ನೂತನ ಆದೇಶ ಹೊರಡಿಸಿದೆ. ಈ ಮೂಲಕ ಮೂಲ/ನಕಲು/ ಡಿಜಿ ಲಾಕರ್ ( ಹಾರ್ಡ್ ಮತ್ತು ಸಾಫ್ಟ್ ಕಾಪಿ ತೋರಿಸಿ ಪ್ರಯಾಣ ‌ಮಾಡಬಹುದು).

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ