AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಫ್ರೀ ಬಸ್​ ಹತ್ತಿ ಮಂಗಳೂರಿಗೆ ಬಂದ ಹುಬ್ಬಳ್ಳಿ ಮಹಿಳೆ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದರಿಂದ ಹುಬ್ಬಳ್ಳಿಯ ಓರ್ವ ಮಹಿಳೆ 11 ತಿಂಗಳ ತನ್ನ ಮಗುವನ್ನು ಬಿಟ್ಟು ಪ್ರಿಯಕರನ್ನು ನೋಡಲು ದಕ್ಷಿಣ ಕನ್ನಡಕ್ಕೆ ಬಂದಿಳಿದಿದ್ದಾಳೆ.

ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಫ್ರೀ ಬಸ್​ ಹತ್ತಿ ಮಂಗಳೂರಿಗೆ ಬಂದ ಹುಬ್ಬಳ್ಳಿ ಮಹಿಳೆ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Jun 14, 2023 | 7:17 PM

ಮಂಗಳೂರು: ಕರ್ನಾಟಕದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಗೊಂಡಿದೆ. ಫ್ರೀ ಟಿಕೆಟ್ ಹಿನ್ನೆಲೆಯಲ್ಲಿ ಬಸ್​ಗಳಲ್ಲಿ ಮಹಿಳಾ ಪ್ರಯಾಣಿಕ ಓಡಾಟ ಹೆಚ್ಚಾಗಿದೆ. ಅದರಲ್ಲೂ ಹೆಚ್ಚಾಗಿ ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ. ಇನ್ನು ಈ ಯೋಜನೆಯಿಂದ ಬಡ ಕಾರ್ಮಿಕ, ಕೂಲಿಕಾರರಿಗೆ ಹಾಗೂ ಆಸ್ಪತ್ರೆಗೆ ತೆರಳುವ ಮಹಿಳೆಯರಿಗೆ ಅನುಕೂಲವಾಗಿದೆ. ಆದ್ರೆ, ಇಲ್ಲೋರ್ವ ಮಹಿಳೆ ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ ಬಂದಿದ್ದಾಳೆ. ಹೌದು.. ಹುಬ್ಬಳಿಯಿಂದ ದೂರದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದಿಳಿದಿದ್ದಾಳೆ. ತನ್ನ 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ಬಂದ ವಿವಾಹಿತೆ ಈಗ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್, ಸೀಟ್ ಮೇಲೇರಿ ಟಿಕೆಟ್​ ನೀಡಿದ ಬಸ್ ಕಂಡಕ್ಟರ್: ವಿಡಿಯೋ ವೈರಲ್

ಹುಬ್ಬಳ್ಳಿಯ ಮಹಿಳೆಯೋರ್ವಳು ತವರು ಮನೆಯಲ್ಲಿ ತನ್ನ ಮಗುವನ್ನು ಬಿಟ್ಟು ಫೋನ್ ಕರೆಯನ್ನು ಸ್ವೀಕರಿಸದೇ ನಾಪತ್ತೆಯಾಗಿದ್ದಳು. ಆಕೆ ಅದೇ ಊರಿನ ಯುವಕನೋರ್ವನನ್ನು ಪ್ರೀತಿಸುತ್ತಿದ್ದು, ಆತ ಪುತ್ತೂರಿನ ಕೋಡಿಂಬಾಡಿ ಬಳಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಮಹಿಳೆಯ ಮನೆಯವರಿಗೆ ಮೊದಲೇ ತಿಳಿದಿತ್ತು. ಆಕೆ ನೇರವಾಗಿ ತನ್ನ ಪ್ರಿಯಕರನ ಹತ್ತಿರ ಹೋಗಿರಬಹುದು ಎಂಬ ಶಂಕೆಯಿಂದ ಆಕೆಯ ಮನೆಯವರು ರಾತ್ರಿ ವೇಳೆ ಪುತ್ತೂರಿನ ಕೋಡಿಬಾಡಿಗೆ ಬಂದು ಹುಡುಕಾಡಿದ್ದಾರೆ. ಪರಿಚತವಿಲ್ಲದ ಜನರು ವ್ಯಕ್ತಿಯೋವನನ್ನು ಹುಡುಕಾಟ ನಡೆಸುತ್ತಿದ್ದಾರೆ ಎಂಬ ವಿಚಾರ ತಿಳಿದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರಿಗೆ ತಿಳಿದುಬಂದಿದ್ದು, ಕೂಡಲೇ ಮಹಿಳೆ ಮನೆಯವರಿಂದ ಗ್ರಾಮ ಪಂಚಾಯಿಸಿ ಸದಸ್ಯ ಮಾಹಿತಿ ಪಡೆದುಕೊಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಅವರ ಜೊತೆ ಹುಡುಕಾಟ ಆರಂಭಿಸಿದ್ದಾರೆ. ಆದ್ರೆ, ಕೋಡಿಂಬಾಡಿಯಲ್ಲಿ ಕೂಲಿ ಕೆಲಸ ಮಾಡಿದ್ದ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ.

ತನ್ನ ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಹೇಳಿ ಈಕೆ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಆಧಾರ್ ಕಾರ್ಡ್ ಅನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತೋರಿಸಲು ತಂದಿದ್ದಳು. ಗಂಡನಲ್ಲಿ ಆಧಾರ್ ಲಿಂಕ್ ಬಗ್ಗೆ ಸುಳ್ಳು ಹೇಳಿ ಎಸ್ಕೇಪ್ ಆಗಿದ್ದಾಳೆ. ಇದೀಗ ಎರಡೂ ಮನೆಯವರಿಂದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಧೈರ್ಯ ಹೇಳಿದ್ದು, ಇದೀಗ ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದ್ದು, ಮೊಬೈಲ್​ ಲೊಕೇಶನ್ ಮೂಲಕ ಅವರಿಬ್ಬರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ