AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ಕರ್ನಾಟಕದಾದ್ಯಂತ ಶೌರ್ಯ ಯಾತ್ರೆ

ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ಶೌರ್ಯ ಯಾತ್ರೆ ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಚಿತ್ರದುರ್ಗದಲ್ಲಿ ಈ ಯಾತ್ರೆಗೆ ಚಾಲನೆ ದೊರಕಲಿದ್ದು, ಉಡುಪಿಯಲ್ಲಿ ಸಮಾರೋಪಗೊಳ್ಳಲಿದೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಇರುವ ಬಜರಂಗದಳದ ಘಟಕಗಳನ್ನು ಎರಡು ಸಾವಿರದಿಂದ ಐದು ಸಾವಿರಕ್ಕೆ ಏರಿಸುವ ಗುರಿಯನ್ನೂ ಹೊಂದಲಾಗಿದೆ.

ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ಕರ್ನಾಟಕದಾದ್ಯಂತ ಶೌರ್ಯ ಯಾತ್ರೆ
ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ರಾಜ್ಯಾದ್ಯಂತ ಶೌರ್ಯ ಯಾತ್ರೆ (ಸಾಂದರ್ಭಿಕ ಚಿತ್ರ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: Rakesh Nayak Manchi|

Updated on: Sep 21, 2023 | 2:36 PM

Share

ಮಂಗಳೂರು, ಸೆ.21: ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ರಾಜ್ಯಾದ್ಯಂತ ಶೌರ್ಯ ಯಾತ್ರೆ (Shaurya Yatra) ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶ ಸೇರಿದಂತೆ ವಿವಿಧ ಉದ್ದೇಶದಿಂದ ರಥಯಾತ್ರೆ ನಡೆಸಲಾಗುತ್ತಿದ್ದು, ಸೆಪ್ಟೆಂಬರ್ 25 ಕ್ಕೆ ಚಿತ್ರದುರ್ಗದಲ್ಲಿ (Chitradurga) ಚಾಲನೆ ನೀಡಲಾಗುತ್ತಿದೆ. ಅಕ್ಟೋಬರ್ 10 ರಂದು ಉಡುಪಿಯಲ್ಲಿ (Udupi) ಸಮರೋಪಗೊಳ್ಳಲಿದೆ.

ಈ ಬಗ್ಗೆ ಮಾಹಿತಿ ನೀಡಿದ ವಿಶ್ವ ಹಿಂದು ಪರಿಷತ್ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್​ವೆಲ್, ಎರಡು ಸಾವಿರ ಇರುವ ಭಜರಂಗದಳ ಘಟಕವನ್ನು ಐದು ಸಾವಿರಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶ ಸೇರಿದಂತೆ ವಿವಿಧ ಉದ್ದೇಶದಿಂದ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ಬೆಳ್ಳಂದೂರು ಮಹಿಳಾ ಟೆಕ್ಕಿಯಿಂದ ಲವ್ ಜಿಹಾದ್ ಆರೋಪ: ಯುವಕನ ಬೆನ್ನುಹತ್ತಿ ಕಾಶ್ಮೀರಕ್ಕೆ ತೆರಳಿದ ಹೆಬ್ಬಗೋಡಿ ಪೊಲೀಸರು

ಶೌರ್ಯ ಜಾಗರಣ ಯಾತ್ರೆ ಮರ್ಮವೇನು?

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಜರಂಗದಳವನ್ನು ನಿಷೇಧಿಸುವ ಭರವಸೆ ನೀಡಿತ್ತು. ರಾಜ್ಯ ಸರ್ಕಾರದ ಈ ನಿಲುವಿಗೆ ಠಕ್ಕರ್ ಕೊಡುವುದೇ ಶೌರ್ಯ ಯಾತ್ರೆಯ ಉದ್ದೇಶವೂ ಹೌದು. ಇದರ ಜೊತೆಗೆ ಲವ್ ಜಿಹಾದ್, ಮತಾಂತರ, ಗೋಹ್ಯತೆ ನಿಷೇಧ ವಿಚಾರವಾಗಿ ತಳಮಟ್ಟದಲ್ಲಿ ಜಾಗೃತಿ ಉಂಟು ಮಾಡುವ ಪ್ಲಾನ್ ಇದಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಅಂತಾ ಬಿಂಬಿಸುವ ಸಾಧ್ಯತೆ ನಿಟ್ಟಿನಲ್ಲಿ ಈ ಶೌರ್ಯ ಯಾತ್ರೆ ಮಹತ್ವ ಪಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More