AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಂತರ ರೂ. ವಂಚಿಸಿದ್ದ ಸೈಬರ್ ವಂಚಕರ ಜತೆಗೇ ಮಂಗಳೂರು ಪೊಲೀಸರ ಪ್ರವಾಸ, ಸೆಲ್ಫಿ: ಕಾನೂನು ವಿದ್ಯಾರ್ಥಿಗಳಿಗೆ ಜಾಗೃತಿ ಪಾಠ!

ಮಂಗಳೂರಿನ ಉರ್ವ ಠಾಣೆಯ ಪೊಲೀಸರು ಸೈಬರ್ ವಂಚನೆ ಆರೋಪಿಗಳೊಂದಿಗೆ ಗುಜರಾತ್‌ಗೆ ಪ್ರವಾಸ ಹೋಗಿ, ಅವರ ಖರ್ಚಿನಲ್ಲೇ ಸುತ್ತಾಡಿರುವ ಆರೋಪ ಕೇಳಿಬಂದಿದೆ. ಇದಲ್ಲದೆ, ಅದೇ ಆರೋಪಿಗಳಿಂದಲೇ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಪಾಠ ಹೇಳಿಸಿದ್ದಾರೆ! ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕೋಟ್ಯಂತರ ರೂ. ವಂಚಿಸಿದ್ದ ಸೈಬರ್ ವಂಚಕರ ಜತೆಗೇ ಮಂಗಳೂರು ಪೊಲೀಸರ ಪ್ರವಾಸ, ಸೆಲ್ಫಿ: ಕಾನೂನು ವಿದ್ಯಾರ್ಥಿಗಳಿಗೆ ಜಾಗೃತಿ ಪಾಠ!
ಪೊಲೀಸರ ಜತೆ ಆರೋಪಿ ತೆಗೆದಿದ್ದ ಸೆಲ್ಫಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Feb 25, 2025 | 10:44 AM

Share

ಮಂಗಳೂರು, ಫೆಬ್ರವರಿ 25: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದಾರೆ! ಸೆಲ್ಫಿ ತೆಗೆದಿದ್ದಾರೆ. ಇಷ್ಟೇ ಅಲ್ಲದೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಪಾಠ ಹೇಳಿಸಿದ್ದಾರೆ! ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉರ್ವ ಠಾಣೆಯ ಪೊಲೀಸರ ವಿರುದ್ಧ ಇಂಥದ್ದೊಂದು ಗಂಭೀರ ಆರೋಪ ಕೇಳಿಬಂದಿದೆ. ಜತೆಗೆ, ಆರೋಪಿಗಳ ಜತೆ ಅವರು ತೆಗೆದ ಸೆಲ್ಫಿ, ಫೋಟೊಗಳೂ ಬಹಿರಂಗವಾಗಿವೆ.

ಅಮೆಜಾನ್​ಗೇ ನಾಮ: 30 ಕೋಟಿ ರೂ. ಲೂಟಿ ಮಾಡಿದ್ದ ಖದೀಮರು

ರಾಜಸ್ಥಾನ ಮೂಲದ ರಾಜ್‌ಕುಮಾರ್ ಮೀನಾ (23), ಸುಭಾಸ್ ಗುರ್ಜರ್ (27) ಜಾಗತಿಕ ದೈತ್ಯ ಅಮೆಜಾನ್ ಕಂಪನಿಗೇ ವಂಚಿಸಿದ್ದರು. ಅಮೆಜಾನ್ ಕಂಪನಿಯ ನಿಯಮಗಳನ್ನೇ ಬಂಡವಾಳ ಮಾಡಿಕೊಂಡು 30 ಕೋಟಿ ರೂ. ಲೂಟಿ ಮಾಡಿದ್ದರು. ಆರೋಪಿಗಳನ್ನು ತಮಿಳುನಾಡಿನ ಸೇಲಂ ಪೊಲೀಸರು ಬಂಧಿಸಿದ್ದರು.

ಆರೋಪಿಗಳ ಖರ್ಚಿನಲ್ಲೇ ಗುಜರಾತ್​ಗೆ ತೆರಳಿದ್ದ ಪೊಲೀಸರು

ಆರೋಪಿಗಳ ವಿರುದ್ಧ ಮಂಗಳೂರಿನ ಉರ್ವ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿತ್ತು. ಹೀಗಾಗಿ ಸೇಲಂ ಜೈಲ್‌ನಿಂದ ಬಾಡಿ ವಾರೆಂಟ್ ಮೇಲೆ ಉರ್ವ ಪೊಲೀಸರು ಇಬ್ಬರನ್ನು ನಗರಕ್ಕೆ ಕರೆದುಕೊಂಡು ಬಂದಿದ್ದರು. ಆ ಬಳಿಕ ಬಂಧಿತ ಆರೋಪಿಗಳ ಖರ್ಚಿನಲ್ಲೇ ಗುಜರಾತ್​ಗೆ ಪೊಲೀಸರು ತೆರಳಿದ್ದರು ಎಂಬ ಆರೋಪ ಕೇಳಿಬಂದಿದೆ. ಉರ್ವ ಠಾಣೆಯ ನಾಲ್ವರು ಪೊಲೀಸರು ತನಿಖೆಯ ನೆಪದಲ್ಲಿ ವಿಮಾನದಲ್ಲಿ ಗುಜರಾತ್‌ಗೆ ತೆರಳಿದ್ದರು. ಈ ವೇಳೆ ಆರೋಪಿಯೊಬ್ಬನ ಜತೆ ಸಲುಗೆ ಬೆಳೆಸಿ ನಾನಾ ಕಡೆ ಸುತ್ತಾಟ ಮಾಡಿದ್ದಾರೆ. ಗುಜರಾತ್​ನ ಹಲವೆಡೆ ಸುತ್ತಾಡಿ ಪೊಲೀಸರೊಂದಿಗೆ ಆರೋಪಿ ಸೆಲ್ಫಿಯನ್ನೂ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ.

ವಂಚಕನಿಂದಲೇ ಸೈಬರ್ ವಂಚನೆ ಜಾಗೃತಿಯ ಪಾಠ!

Awareness By Cyber Criminal Accused

ಬಂಧನ ಬಳಿಕ ಸೈಬರ್ ಕ್ರೈಂ ಆರೋಪಿಯಿಂದಲೇ ಸೈಬರ್ ವಂಚನೆ ಬಗ್ಗೆ ಜಾಗೃತಿ ಪಾಠ ಮಾಡಿಸಿದ್ದಾರಂತೆ ಪೊಲೀಸರು. ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಕಾನೂನು ಕಾಲೇಜೊಂದರ 30ಕ್ಕೂ ಅಧಿಕ‌ ವಿದ್ಯಾರ್ಥಿಗಳಿಗೆ ಜಾಗೃತಿ ಪಾಠ ಮಾಡಿಸಲಾಗಿತ್ತು. ಠಾಣೆಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲೇ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ, ಆರೋಪಿಯು ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಮಾಹಿತಿ ನೀಡಿದ್ದ.

10ಕ್ಕೂ ಹೆಚ್ಚು ರಾಜ್ಯಗಳ ಪೊಲೀಸರಿಗೆ ಬೇಕಾಗಿರುವ ಆರೋಪಿಗಳು

ಬಂಧಿತ ಆರೋಪಿಗಳು ಆನ್​ಲೈನ್ ಮಾರುಕಟ್ಟೆಯಿಂದ ನಾನಾ ರೀತಿಯ ಬೆಲೆಬಾಳುವ ಸಾಮಗ್ರಿಗಳನ್ನು ಖರೀದಿಸಿ ದೋಖಾ ಮಾಡಿದ್ದರು. ಹಣ ಕೊಟ್ಟಂತೆ ನಟಿಸಿ ದೋಖಾ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಆರೋಪಿಗಳ ವಿರುದ್ಧ ತಮಿಳುನಾಡು, ಕೇರಳ, ಅಸ್ಸಾಂ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ 10ಕ್ಕೂ ಅಧಿಕ ರಾಜ್ಯಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಮಹೀಂದ್ರಾ ಲಾಜಿಸ್ಟಿಕ್‌ನ ವಿಜಿಲೆನ್ಸ್ ಅಧಿಕಾರಿಯೊಬ್ಬರಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಮಂಗಳೂರಿನ ಉರ್ವ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: ಮಂಗಳೂರು ಕಾರಾಗೃಹಕ್ಕೆ ಗಾಂಜಾ ಸಪ್ಲೈ ಹೇಗೆ ಆಗುತ್ತಿದೆ ಗೊತ್ತಾ? ವಿಡಿಯೋ ನೋಡಿ

ಆರೋಪಿ ರಾಜಕುಮಾರ್ ಮೀನಾನನ್ನು ತಮಿಳುನಾಡಿನ ಸೇಲಂ ಪೊಲೀಸರು ಸೇಲಂನಲ್ಲಿ ಹಾಗೂ ರಾಜಸ್ಥಾನದಲ್ಲಿ ಸುಭಾಸ್ ಗುರ್ಜರ್​ನನ್ನು ಬಂಧಿಸಿದ್ದರು.

ಈ ಮಧ್ಯೆ, ಪೊಲೀಸ್ ‌ಕಸ್ಟಡಿ ವೇಳೆ ಆರೋಪಿಗೆ ರಾಜಾತಿಥ್ಯ ನೀಡಿರುವ ಆರೋಪವೂ ಉರ್ವ ಪೊಲೀಸರ ವಿರುದ್ಧ ಕೇಳಿಬಂದಿದೆ. ಸದ್ಯ ಪೊಲೀಸರ ಎಡವಟ್ಟಿನ ಕೆಲಸಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ