AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನ 6 ವಿದ್ಯಾರ್ಥಿನಿಯರು ಅಮಾನತು! ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಯತ್ನ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿದ್ದ ಆರು ವಿದ್ಯಾರ್ಥಿನಿಯರು ಅಮಾನತುಗೊಂಡಿದ್ದಾರೆ.

ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನ 6 ವಿದ್ಯಾರ್ಥಿನಿಯರು ಅಮಾನತು! ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಯತ್ನ
ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಸುಖಾಂತ್ಯ
TV9 Web
| Edited By: |

Updated on:Jun 02, 2022 | 1:16 PM

Share

ಮಂಗಳೂರು: ಈಗಾಗಲೇ ಹಿಜಾಬ್ (Hijab) ಧರಿಸಿ ಶಾಲಾ- ಕಾಲೇಜಿಗೆ ಆಗಮಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆದರೂ ಮುಸ್ಲಿಂ (Muslim) ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದರು. ಹೀಗೆ ಸತತ ಸೂಚನೆ ಬಳಿಕವೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿದ್ದ ಆರು ವಿದ್ಯಾರ್ಥಿನಿಯರು ಅಮಾನತುಗೊಂಡಿದ್ದಾರೆ. ಉಪನ್ಯಾಸಕರ ಸಭೆಯಲ್ಲಿ ಒಮ್ಮತದ ನಿರ್ಧಾರದ ಬಳಿಕ ವಿದ್ಯಾರ್ಥಿನಿಯರನ್ನ ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡಿರುವ 6 ವಿದ್ಯಾರ್ಥಿನಿಯರು ನಿತ್ಯ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಹಿಜಾಬ್ ಧರಿಸಿದ್ದಕ್ಕೆ ಇತರೆ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದರು. ಈ ವೇಳೆ ಹಲವು ಬಾರಿ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯರಿಗೆ ತಿಳಿ ಹೇಳಿದ್ದರು. ಆದರೂ ಹಿಜಾಬ್​ ಧರಿಸಿ ತರಗತಿಗೆ ಪ್ರವೇಶಿಸುತ್ತಿದ್ದರು. ಕಾಲೇಜಿನಲ್ಲಿ ಸಂಘರ್ಷವಾಗುವ ಸಾಧ್ಯತೆ ಹಿನ್ನೆಲೆ ಸಭೆ ‌ನಡೆಸಿ ವಿದ್ಯಾರ್ಥಿನಿಯರನ್ನ ಅಮಾನತುಗೊಳಸಲಾಗಿದೆ.

ಇದನ್ನೂ ಓದಿ: Telangana Formation Day 2022: ಇಂದು ತೆಲಂಗಾಣ ಸಂಸ್ಥಾಪನಾ ದಿನ; ಭಾರತದ ಕಿರಿಯ ರಾಜ್ಯದ ಬಗ್ಗೆ ನಿಮಗೆಷ್ಟು ಗೊತ್ತು?

ಇದನ್ನೂ ಓದಿ
Image
Johnny Depp Amber Heard Case: ಮಾಜಿ ಪತ್ನಿ ವಿರುದ್ಧದ ಕೇಸ್ ಗೆದ್ದು ಸುಮಾರು 116 ಕೋಟಿ ರೂ ಪರಿಹಾರ ಪಡೆದ ಖ್ಯಾತ ನಟ ಜಾನಿ ಡೆಪ್​
Image
ವಿಜಯಪುರ ಇಂಡಿ ತಾಲೂಕು ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ! ದೃಶ್ಯ ಮೊಬೈಲ್​ನಲ್ಲಿ ಸೆರೆ
Image
Mental Health: ಮಾನಸಿಕ ಅಸಮತೋಲನ ನಿಮ್ಮ ಸಂಬಂಧವನ್ನು ಹಾಳು ಮಾಡುತ್ತಿದೆಯೇ?
Image
Rajya Sabha Polls 2022: ರಾಜಸ್ಥಾನದಲ್ಲಿ ಆಪರೇಷನ್ ಕಮಲದ ಭೀತಿ; ಕಾಂಗ್ರೆಸ್​ನ ಶಾಸಕರು ಇಂದು ರೆಸಾರ್ಟ್​ಗೆ ಶಿಫ್ಟ್​

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಯತ್ನ: ಘಟನೆ ವರದಿ ಮಾಡಲು ತೆರಳಿದ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಿದ್ದಾರೆ. ವಿದ್ಯಾರ್ಥಿಗಳು ವಿಡಿಯೋವನ್ನು ಬಲತ್ಕಾರವಾಗಿ ಡಿಲೀಟ್ ಮಾಡಿಸಿದ್ದಾರೆ. ಜೊತೆಗೆ ಕಾಲೇಜಿನ ಘಟನೆಯನ್ನು ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ‌. ಈ ವೇಳೆ ಪೋಲೀಸರು ವಿದ್ಯಾರ್ಥಿಗಳನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಹಿಜಾಬ್ ಧರಿಸಿ ಬಂದ 16 ವಿದ್ಯಾರ್ಥಿನಿಯರು: ಇನ್ನು ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ ನಿರ್ಬಂಧದ ನಡುವೆ ವಿದ್ಯಾರ್ಥಿನಿಯರು ಇಂದು ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಆದರೆ ಹಿಜಾಬ್​ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ತರಗತಿಗೆ ಹೋಗದಂತೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತಡೆದಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಕಾಲೇಜಿಗೆ ಬಂದಿರಲಿಲ್ಲ. ಇಂದು ಮತ್ತೆ 16 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಬಂದಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Thu, 2 June 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ