AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ ಯುವತಿಯ ಫೋಟೋಗೆ ಲೈಕ್, ಪ್ರೇಯಸಿಯಿಂದ ತರಾಟೆ: ಪ್ರಿಯಕರ ಆತ್ಮಹತ್ಯೆಗೆ ಶರಣು

ಬಂಟ್ವಾಳ ತಾಲೂಕಿನ ಯುವಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಫೋಟೋಗೆ ಲೈಕ್ ಕೊಟ್ಟಿದ್ದಕ್ಕಾಗಿ ಆತನ ಪ್ರೇಯಸಿ ಕೋಪಗೊಂಡು ತರಾಟೆಗೆ ತೆಗೆದುಕೊಂಡಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಯು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ಮತ್ತು ಅದರಿಂದ ಉಂಟಾಗುವ ಮಾನಸಿಕ ಒತ್ತಡದ ಬಗ್ಗೆ ಗಮನ ಸೆಳೆಯುತ್ತದೆ. ಯುವಕರಲ್ಲಿ ಸಾಮಾಜಿಕ ಮಾಧ್ಯಮದ ಚಟ ಹೆಚ್ಚುತ್ತಿರುವುದು ಚಿಂತಾಜನಕ.

ಇನ್​ಸ್ಟಾಗ್ರಾಮ್​ನಲ್ಲಿ ಯುವತಿಯ ಫೋಟೋಗೆ ಲೈಕ್, ಪ್ರೇಯಸಿಯಿಂದ ತರಾಟೆ: ಪ್ರಿಯಕರ ಆತ್ಮಹತ್ಯೆಗೆ ಶರಣು
ಮೃತ ಚೇತನ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 25, 2025 | 12:15 PM

Share

ಮಂಗಳೂರು, ಜನವರಿ 25: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗಿದೆ. ಸಾಮಾಜಿಕ ಜಾಲತಾಣದ ಫೋಸ್ಟ್​ ಮಾಡುವ ಫೋಟೋಗಳಿಗೆ ಹೆಚ್ಚಿನ ಲೈಕ್​ ಮತ್ತು ಕಾಮೆಂಟ್​​ ಬರಲಿ ಎಂಬ ಉದ್ವಿಗ್ನತೆಯಲ್ಲಿರುತ್ತಾರೆ. ಆದರೆ, ಇದೇ ಉದ್ವಿಗ್ನತೆ ಎಷ್ಟೋ ಜನರ ಪ್ರಾಣ ಕಸಿದುಕೊಂಡಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ‌ (Bantwal) ತಾಲೂಕಿನ ಪೂಂಜಾಲಕಟ್ಟೆ ಕುಕ್ಕಿಪ್ಪಾಡಿಯ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮೃತ ಚೇತನ್​ಗೆ ಕುಂದಾಪುರದ ಚೈತನ್ಯ ಎಂಬ ಯುವತಿಯು ಇನ್​ಸ್ಟ್ರಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು, ಸ್ನೇಹ ಪ್ರೀತಿಗೆ ತಿರುಗಿತ್ತು. 8 ತಿಂಗಳ ಹಿಂದೆ ಇಬ್ಬರ ನಿಶ್ಚಿತಾರ್ಥವಾಗಿತ್ತು. ಜನವರಿ 21 ರಂದು ಚೇತನ್ ತನ್ನ ಪರಿಚಯದ ಬೇರೊಂದು ಯುವತಿಯ ಫೋಟೋಗೆ ಇನ್ಸ್ಟಾಗ್ರಾಮ್​ನಲ್ಲಿ ಲೈಕ್ ಕೊಟ್ಟಿದ್ದನು.

ಇದನ್ನೂ ಓದಿ: ಅನೈತಿಕ ಚಟುವಟಿಕೆ ಆರೋಪ: ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ

ಇದನ್ನು ಪ್ರಶ್ನಿಸಲು ಚೈತನ್ಯ ಭಾವಿ ಪತಿ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಚೇತನ್ ಮನೆಯಲ್ಲಿ ಒಬ್ಬರೇ ಇದ್ದರು. ಯುವತಿಯ ಫೋಟೋಗೆ ಲೈಕ್ ನೀಡಿದ್ದಕ್ಕೆ ಚೇತನ್​ನನ್ನು ಚೈತನ್ಯ ತರಾಟೆಗೆ ತೆಗೆದುಕೊಂಡಿದ್ದಳು.

ಇದರಿಂದ ಮನನೊಂದ ಚೇತನ್ ಯುವತಿ ಮನೆಯಲ್ಲಿ ಇರುವಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಳಿಕ‌ ಚೇತನ್ ತಾಯಿಗೆ ಕರೆ ಮಾಡಿದ ಚೈತನ್ಯ ಮಲಗಿದ್ದಾತ ಮೇಲೆ ಏಳುತ್ತಿಲ್ಲ ಎಂದು ಹೇಳಿದ್ದಾನೆ. ಕೂಡಲೇ ಚೇತನ್​ ತಾಯಿ ಮನೆಗೆ ಬಂದು ನೋಡಿದಾಗ, ಮನೆಯ ಮೆಲ್ಚಾವಣಿಯಲ್ಲಿ ನೇಣು ಬಿಗಿದ ಕುಣಿಕೆ ಸಿಕ್ಕಿತ್ತು. ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್​ಸ್ಟಾಗ್ರಾಮ್​ನಲ್ಲಿನ ಒಂದು ಫೋಸ್ಟ್​ಗೆ ಲೈಕ್​ ಕೊಟ್ಟಿದ್ದರಿಂದ ಪ್ರೇಮಿಗಳ ನುಡುವೆ ಬಿರುಕು ಮೂಡುವಂತೆ ಮಾಡಿದ್ದು, ವಿಪರ್ಯಾಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Sat, 25 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್