AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಕ್ರಿಮಿಗಳ ಹುಟ್ಟಡಗಿಸಲು ಬಂದ ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಏನಿದರ ಕೆಲಸ? ಇದರಲ್ಲಿ ಯಾರ್ಯಾರು ಇರ್ತಾರೆ?

ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಸಂಘರ್ಷಗಳನ್ನು ತಡೆಯಲು ಕರ್ನಾಟಕ ಸರ್ಕಾರ ವಿಶೇಷ ಕಾರ್ಯಪಡೆ (SAF) ಅನ್ನು ಸ್ಥಾಪಿಸಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜೂನ್ 13ರಂದು ಈ ವಿಶೇಷ ಫೋರ್ಸ್ ಉದ್ಘಾಟನೆ ಮಾಡಿದ್ದಾರೆ. ಆ ಮೂಲಕ ಕಿಡಿಗೇಡಿಗಳ ಹುಟ್ಟಡಗಿಸಲು ಮುಂದಾಗಿದೆ. ಇನ್ನು ಈ ಆ್ಯಕ್ಷನ್ ಪೋರ್ಸ್ ಹೇಗೆ ಕಾರ್ಯನಿರ್ವಹಿಸುತ್ತೆ? ವಿಶೇಷ ಕಾರ್ಯಪಡೆ ಎಷ್ಟು ಸಿಬ್ಬಂದಿ ಒಳಗೊಂಡಿದೆ? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕೋಮು ಕ್ರಿಮಿಗಳ ಹುಟ್ಟಡಗಿಸಲು ಬಂದ ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಏನಿದರ ಕೆಲಸ? ಇದರಲ್ಲಿ ಯಾರ್ಯಾರು ಇರ್ತಾರೆ?
Special Action Force
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jun 16, 2025 | 10:05 PM

Share

ಮಂಗಳೂರು, (ಜೂನ್ 16): ಕೋಮು ವೈಷಮ್ಯ ಪ್ರಕರಣ ( communal Cases) ತಡೆಯಲು ಮಂಗಳೂರನ್ನು ಕೇಂದ್ರೀಕರಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (ಎಸ್​​ಎಎಫ್ )  (Special Action Force) ಸ್ಥಾಪಿಸಲಾಗಿದೆ. ಇದು ಕೋಮು ವೈಷಮ್ಯ ತಡೆಯಲು ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಸಂಸ್ಥೆಯಾಗಿದೆ. ದಕ್ಷಿಣ ಕನ್ನಡ (Dakshina Kannada) , ಉಡುಪಿ (Udupi) ಮತ್ತು ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಕೋಮು ದ್ವೇಷದ ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯದಿಂದ ಸರಣಿ ಹತ್ಯೆಗಳು ನಡೆಯುತ್ತಿವೆ. ಕೋಮು ವೈಷಮ್ಯದಿಂದ ಜಿಲ್ಲೆಯಲ್ಲಿ ಜನರು ಭಯದಿಂದ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ (ಸ್ಪೆಷಲ್‌ ಆ್ಯಕ್ಷನ್‌ ಫೋರ್ಸ್‌-ಎಸ್‌ಎಎಫ್‌) ಸ್ಥಾಪಿಸಿ ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ.

DIG ದರ್ಜೆ ಅಧಿಕಾರಿ ನೇತೃತ್ವದಲ್ಲಿ ಕಾರ್ಯ

ಈ ಸ್ಪೆಷಲ್ ಆ್ಯಕ್ಷನ್ ಪೋರ್ಸ್ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡುತ್ತಿದೆ. DIG ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಕಾರ್ಯ ನಿರ್ವಹಿಸುತ್ತೆ.  ದಕ್ಷಿಣ, ಶಿವಮೊಗ್ಗ, ಉಡುಪಿ   ಈ 3 ಕಾರ್ಯಪಡೆ ಒಟ್ಟು 248 ಸಿಬ್ಬಂದಿ ಒಳಗೊಂಡಿದ್ದು, ಬಹುತೇಕ ಸಿಬ್ಬಂದಿ ಎ.ಎನ್.ಎಫ್ ನಿಂದ ಬಂದವರು.  ANF ಪಡೆಯಲ್ಲಿದ್ದ 656 ಸಿಬ್ಬಂದಿಯಲ್ಲಿ 248 ಸಿಬ್ಬಂದಿ ಈ SAF ಪಡೆಗೆ ನಿಯೋಜನೆ ಮಾಡಲಾಗಿದೆ. 3 ಕಾರ್ಯಪಡೆಯಲ್ಲಿ ತಲಾ 80 ಸಿಬ್ಬಂದಿ ಇದ್ದಾರೆ. ಡಿಐಜಿ, ಡಿವೈಎಸ್ಪಿ, ಸಹಾಯಕ ಕಮಾಂಡೆಂಟ್, 4 ಇನ್ಸ್ಪೆಕ್ಟರ್, 16 ಪಿಎಸ್ ಐ, ಸೇರಿದಂತೆ 248 ಸಿಬ್ಬಂದಿಯನ್ನು ಈ ಪಡೆ ಒಳಗೊಂಡಿವೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಅಸ್ತಿತ್ವಕ್ಕೆ ಬಂತು ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಗೃಹ ಸಚಿವ ಪರಮೇಶ್ವರ್ ಚಾಲನೆ

ಉಡುಪಿ ಕಾರ್ಯಪಡೆಯಲ್ಲಿ ಎಷ್ಟು ಸಿಬ್ಬಂದಿ?

ಕಾರ್ಕಳದಲ್ಲಿ ಕೇಂದ್ರ ಸ್ಥಾನದಲ್ಲಿರುವ ನಕ್ಸಲ್ ನಿಗ್ರಹ ದಳ ( ಎಎನ್​ಎಫ್ ) ದ 656 ಸಿಬ್ಬಂದಿಗಳಲ್ಲಿ 248 ಸಿಬ್ಬಂದಿಗಳನ್ನು ಎಸ್​ಎಎಫ್​ ಗೆ ನಿಯೋಜಿಸಲಾಗಿದೆ. ಇದರಲ್ಲಿ ಡಿಐಜಿಪಿ 1, ಡಿವೈಎಸ್​​ಪಿ ಸಿವಿಲ್ 1, ಸಹಾಯಕ ಕಮಾಂಡೆಂಟ್ 1, ಪಿಐ/ ಆರ್​​ಪಿಐ 4, ಪಿಎಸ್ಐ/ ಆರ್​​ಎಸ್​​ಐ/ ಎಸ್​ಐ 16, ಸಿಹೆಚ್​ಸಿ 60 , ಸಿಪಿಸಿ/ಎಪಿಸಿ 150, ಅನುಯಾಯಿ 15 ಮಂದಿ ಇರಲಿದ್ದಾರೆ.

ಮಂಗಳೂರಿನಲ್ಲಿ ಸುಧೀರ್ ಕುಮಾರ್ ರೆಡ್ಡಿ ನೇತೃತ್ವ

ಮಂಗಳೂರು ಕೇಂದ್ರ ಸ್ಥಾನದಲ್ಲಿ ಡಿಐಜಿಪಿ 1, ಎಸ್​ಪಿ 1, ಡಿವೈಎಸ್​ಪಿ 1, ಸಹಾಯಕ ಕಮಾಂಡೆಂಟ್ 1, ಪಿಐ/ಆರ್​ಪಿಐ 1, ಪಿಎಸ್ಐ, ಆರ್​ಎಸ್​​ಐ, ಎಸ್​​ಐ 1, ಸಿಹೆಚ್​​ಸಿ 3 , ಪಿಸಿಪಿ, ಎಪಿಸಿ 6 ಇದ್ದು, ಒಟ್ಟು 15 ಸಿಬ್ಬಂದಿ ಇದೆ. ಮಂಗಳೂರಿನಲ್ಲಿ ಸರಣಿ ಹತ್ಯೆ ಬಳಿಕ ನೂತನ ನಗರ ಪೊಲೀಸ್ ಕಮೀಷನರ್​ ಆಗಿ ನೇಮಕಗೊಂಡಿರುವ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್​​ಎಎಫ್ ಫೋರ್ಸ್​ನ ಮುಖ್ಯಸ್ಥರಾಗಿದ್ದಾರೆ. ಇವರು ವಿಶೇಷ ಕಾರ್ಯಪಡೆಯ ಡಿಐಜಿಪಿ ಹುದ್ದೆಯಲ್ಲಿ ಇವರು ಕಾರ್ಯನಿರ್ವಹಿಸುತ್ತಾರೆ.

ಇನ್ನು ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗೆ ತಲಾ ಒಂದು ಪಿಐ/ ಆರ್​​ಪಿಐ, 5 ಪಿಎಸ್​​ಐ / ಆರ್​​ಎಸ್​​ಐ / ಎಸ್​ಐ, 19 ಸಿಹೆಚ್​ಸಿ , 48 ಸಿಪಿಸಿ/ಎಪಿಸಿ ಮತ್ತು 5 ಸಿಬ್ಬಂದಿ ಇದ್ದಾರೆ. ಮೂರು ಜಿಲ್ಲೆಗೂ ತಲಾ 78 ಸಿಬ್ಬಂದಿ ಒಳಗೊಂಡಿದೆ.

ಈ ಪೋರ್ಸ್  ಹೇಗೆ ಕಾರ್ಯನಿರ್ವಹಿಸುತ್ತೆ?

ಸರ್ಕಾರ ನಡವಳಿಯನ್ನು ಮಾಡಿ ಈ ಪೋರ್ಸ್ ನ್ನು ಕಾರ್ಯಾಚರಣೆಗೆ ಇಳಿಸಿದೆ.ಸದ್ಯ ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಈ ವಿಶೇಷ ಕಾರ್ಯಪಡೆಯ ಹೆಚ್ಚುವರಿ ಹೊಣೆ ಹೊತ್ತಿದ್ದಾರೆ.ಮಂಗಳೂರಿನಲ್ಲೇ ಈ ಕಾರ್ಯಪಡೆಯ ಕೇಂದ್ರ ಕಚೇರಿ ಕಾರ್ಯ ನಿರ್ವಹಿಸುತ್ತಿದೆ.ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಆಗುವ ಚಟುವಟಿಕೆಗಳ ಮೇಲೆ ಈ ಪೋರ್ಸ್ ತೀವ್ರ ನಿಗಾ ಇಡುತ್ತೆ.

ಈ ಪೋರ್ಸ್ ಗೆ ಪ್ರಕರಣಗಳ ಬಗೆಗೆ ಯಾವುದೇ ರೀತಿಯ ವಿಚಾರಣೆ ಮಾಡುವ ಅಧಿಕಾರ ಇಲ್ಲ. ಬದಲಾಗಿ ಗುಪ್ತ ಮಾಹಿತಿ ಸಂಗ್ರಹಿಸಿ ಕೋಮು ಘರ್ಷಣೆ ನಿಗ್ರಹಿಸಲಿದೆ. ಸಂಭಾವ್ಯ ಕೋಮು ಹಿಂಸಾಚಾರ, ಕೋಮು ಗಲಭೆಯಂತಹ ಸಂಚುಗಳನ್ನು ವಿಫಲ ಗೊಳಿಸಲು ಈ ತಂಡದ ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗಿದೆ.ಕೋಮು ಹಿಂಸಾಚಾರ ಸಂಬಂಧಿ ಚಟುವಟಿಕೆ ಮೇಲೆ SAF ಕಣ್ಣಾವಲು ಇಡಲಿದೆ. ವಿಶ್ವಾಸ ವೃದ್ಧಿಸುವ ಕ್ರಮಗಳನ್ನು ಕೈಗೊಳ್ಳುವುದು,ಮೂಲಭೂತವಾದಿ ಚಟುವಟಿಕೆ ಗುರುತಿಸಿ ನಿಗ್ರಹಿಸುವುದು SAF ಕರ್ತವ್ಯವಾಗಿರುತ್ತೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.