AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುತಿನ ಚೀಟಿಗಾಗಿ ಮಂಗಳೂರು ಪಾಲಿಕೆ ಆಯುಕ್ತರ ಕಚೇರಿಗೆ ಬೀದಿ ವ್ಯಾಪಾರಿಗಳಿಂದ ಮುತ್ತಿಗೆ

ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡದ ಹಿನ್ನೆಲೆ ಮಂಗಳೂರು ಪಾಲಿಕೆ ಆಯುಕ್ತರ ಕಚೇರಿಗೆ ಇಂದು ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ ಘಟನೆ ನಡೆಯಿತು. ವರ್ಷ ಕಳೆದರೂ ಗುರುತಿನ ಚೀಟಿ ನೀಡದ ಪಾಲಿಕೆ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದ್ದು, ಈ ತಿಂಗಳ ಒಳಗಾಗಿ ವಿತರಣೆ ಮಾಡಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ.

ಗುರುತಿನ ಚೀಟಿಗಾಗಿ ಮಂಗಳೂರು ಪಾಲಿಕೆ ಆಯುಕ್ತರ ಕಚೇರಿಗೆ ಬೀದಿ ವ್ಯಾಪಾರಿಗಳಿಂದ ಮುತ್ತಿಗೆ
ಮಂಗಳೂರು ಮಹಾನಗರ ಪಾಲಿಕೆImage Credit source: mangalurusmartcity
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Oct 05, 2023 | 12:39 PM

Share

ಮಂಗಳೂರು, ಅ.5: ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡದ ಹಿನ್ನೆಲೆ ಮಂಗಳೂರು (Mangaluru) ಪಾಲಿಕೆ ಆಯುಕ್ತರ ಕಚೇರಿಗೆ ಇಂದು ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ ಘಟನೆ ನಡೆಯಿತು. ವರ್ಷ ಕಳೆದರೂ ಗುರುತಿನ ಚೀಟಿ ನೀಡದ ಪಾಲಿಕೆ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದರು.

ಗುರುತಿನ ಚೀಟಿ ಮುದ್ರಣಗೊಂಡಿದ್ದು, ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆ ನೀಡಿದೆ. ಆದರೂ ಚೀಟಿಗಳನ್ನು ಪಾಲಿಕೆ ವಿತರಣೆ ಮಾಡಿಲ್ಲ. ಹಲವು ಬಾರಿ ಪಾಲಿಕೆ ಮುಂದೆ ಪ್ರತಿಭಟಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಡಿವೈಎಫ್ಐ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಸ್ಥರು ದಿಢೀರ್​ ಮುತ್ತಿಗೆ ಹಾಕಿ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಮಂಗಳೂರು: ಬಜರಂಗದಳ ಮುಖಂಡ ಮತ್ತು ತಂಡದಿಂದ ಗೂಂಡಾಗಿರಿ

ವ್ಯಾಪಾರಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ

ಸ್ಥಳಕ್ಕೆ ಆಗಮಿಸಿದ ಪಾಲಿಕೆ ಆಯುಕ್ತ ಆನಂದ್, ಈ ತಿಂಗಳ ಒಳಗೆ ಗುರುತಿನ ಚೀಟಿ, ಪ್ರಮಾಣ ಪತ್ರ ನೀಡುವ ಭರವಸೆ ನೀಡಿದರು. 667 ಜನರಿಗೆ ಗುರುತಿನ ಚೀಟಿ, ಪ್ರಮಾಣಪತ್ರ ನೀಡಬೇಕಾಗಿದೆ. ಮೇಯರ್, ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನೀಡುತ್ತೇವೆ. 30 ರ ಒಳಗಡೆ ಕಾರ್ಯಕ್ರಮ ಆಯೋಜಿಸಿ ಐಡೆಂಟಿಟಿ ಕಾರ್ಡ್, ಪ್ರಮಾಣಪತ್ರ ವಿತರಣೆ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?