AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ; ಏಳು ಜನ ಆರೋಪಿಗಳ ಬಂಧನ

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ (18) ಎಂಬಾತನನ್ನು ಮಂಗಳೂರಿನ ಬಲ್ಮಠ ಬಳಿಯ ಮತ್ತೊಂದು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲಾಟ್​ಗೆ ಅಪಹರಿಸಿಕೊಂಡು ಹೋಗಿ, ಹುಡುಗಿ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ; ಏಳು ಜನ ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Aug 26, 2023 | 6:03 PM

Share

ದಕ್ಷಿಣ ಕನ್ನಡ, ಆ.26: ಖಾಸಗಿ ಕಾಲೇಜಿನ ವಿದ್ಯಾರ್ಥಿಯ ಮೇಲೆ ಇನ್ನೊಂದು ಕಾಲೇಜಿನ ವಿದ್ಯಾರ್ಥಿಗಳಿಂದ (College Students) ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಡಿಪಿಐ ಮುಖಂಡನ ಪುತ್ರ ಸೇರಿ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ (18) ಹಲ್ಲೆಗೊಳಗಾಗಿದ್ದ ಯುವಕ. ಇವರು ನಗರದ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಇಬ್ರಾಹಿಂ ಫಾಹಿಂನನ್ನು ಮಂಗಳೂರಿನ (Mangalore) ಬಲ್ಮಠ ಬಳಿಯ ಮತ್ತೊಂದು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಆರೋಪಿಗಳು, ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲಾಟ್​ಗೆ ಅಪಹರಿಸಿಕೊಂಡು ಹೋಗಿ, ಹುಡುಗಿ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದರು.

ಆರೋಪಿಗಳನ್ನು ಬಂಧಿಸಿದ ಪೊಲೀಸರು

ಗಾಂಜಾ ನಶೆಯಲ್ಲಿ ವಿದ್ಯಾರ್ಥಿ ಮೇಲೆ ರಕ್ತ ಹೆಪ್ಪುಗಟ್ಟುವಂತೆ ಬೆಲ್ಟ್ ಹಾಗೂ ಕೋಲಿನಿಂದ ಹೊಡೆದು ಮನ ಬಂದಂತೆ ದಾಳಿ ಮಾಡಿದ್ದಾರೆ. ಅಗಸ್ಟ್ 23ರ ಮಧ್ಯಾಹ್ನ ಕಿಡ್ನಾಪ್ ಮಾಡಿಕೊಂಡು ತೆರಳಿ ಗಂಭೀರ ಹಲ್ಲೆ ಮಾಡಲಾಗಿತ್ತು. ಸದ್ಯ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಫಾಹಿಂಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಬಂದರು ಠಾಣೆ ಪೊಲೀಸರಿಂದ ಆರೋಪಿಗಳಾದ ಅಬ್ದುಲ್ಲಾ ಹನ್ನಾನ್(19), ಇಬ್ರಾಹಿಂ ತಾಬೀಶ್ (19), ಮಹಮ್ಮದ್ ಶಾಕೀಫ್(19), ಮಹಮ್ಮದ್ ಶಾಯಿಕ್(19), ಯು‌.ಪಿ‌.ತನ್ವೀರ್(19), ಅಬ್ದುಲ್ ರಶೀದ್(20) ಮತ್ತು ಮನ್ಸೂರ್(19) ಸೇರಿ ಒಟ್ಟು ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಹಾಸನ: ಮೆದುಳು ನಿಷ್ಕ್ರಿಯಗೊಂಡು ಸಾವಿನ ಸನಿಹಕ್ಕೆ ಹೋದವನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಜೊತೆ ಮಾತನಾಡಿದಕ್ಕೆ ಆಗಸ್ಟ್​ 24 ರಂದು ಇದೇ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ರಾಜೀವ ಗಾಂಧಿ ಸಂಕೀರ್ಣದ ಎದುರು ಯುವಕನ ಮೇಲೆ ಅನ್ಯಧರ್ಮಿಯ ಗುಂಪೊಂದು ಹಲ್ಲೆ ಮಾಡಿತ್ತು. ಈ ಸಂಬಂಧ ಮೂಡಬಿದ್ರೆ ಪೊಲೀಸರು ಮೂವರು ಆರೋಪಿಗಳಾದ ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಎನ್ನುವವರನ್ನು ಬಂಧಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ