ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​

ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ನಂತರ ಮಂಗಳೂರಿನಲ್ಲಿ ಕಿಡಿಗೇಡಿಗಳಿಂದ ಹಿಂದೂ ಮುಖಂಡರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಜನರನ್ನು ಬಂಧಿಸಲಾಗಿದೆ. ಪೊಲೀಸ್ ಇಲಾಖೆಯ ಕ್ರಮದ ನಡುವೆ ದ್ವೇಷ ಕಾರುವ ಪೋಸ್ಟ್ ವೈರಲ್ ಆಗುತ್ತಿವೆ.

ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​
ವೈರಲ್​ ಪೋಸ್ಟ್
Edited By:

Updated on: May 04, 2025 | 1:02 PM

ಮಂಗಳೂರು, ಮೇ 04: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ (Suhas Shetty)  ಮೇ 1ರಂದು ಕೊಲೆಯಾಗಿದ್ದ. ಈ ಪ್ರಕರಣವನ್ನ ಬೇಧಿಸಿರುವ ಪೊಲೀಸರು ಇಬ್ಬರು ಹಿಂದೂಗಳು ಸೇರಿದಂತೆ 8 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಈಗಲೂ ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ಸ್ಥಿತಿಯಿದೆ. ಈ ಮಧ್ಯೆ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ (Life threat) ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ.

ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಿದ್ದು, ಪೋಸ್ಟ್ ವೈರಲ್ ಮಾಡಿದ್ದಾರೆ. ಭರತ್ ಕುಮ್ಡೇಲ್​​ ಎಸ್​​ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ.

ಇದನ್ನೂ ಓದಿ: ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್​​ಗಳ ವಿರುದ್ಧ ಮಂಗಳೂರು ಪೊಲೀಸ್ ಕಾರ್ಯಾಚರಣೆ, 12 ಪ್ರಕರಣ ದಾಖಲು

ಇದನ್ನೂ ಓದಿ
ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಪರಮೇಶ್ವರ್
ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್​​ಗಳ ವಿರುದ್ಧ 12 ಪ್ರಕರಣ ದಾಖಲು
ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಪೊಲೀಸರಿಂದ ವಿಚಾರಣೆ
ಸುಹಾಸ್ ಹತ್ಯೆಕೋರರನ್ನು ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: CT ರವಿ

ಎಸ್​​ಡಿಪಿಐನಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಅಶ್ರಫ್ ಕಲಾಯಿ ಅನ್ನು 2017ರ ಜೂನ್ 21ರಂದು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಅಶ್ರಫ್ ಕೊಲೆ ಬಳಿಕ ಪ್ರತೀಕಾರವಾಗಿ ಶರತ್ ಮಡಿವಾಳ ಹತ್ಯೆಯಾಗಿತ್ತು. ಅಶ್ರಫ್ ಕೊಂದ ಭರತ್​​ ನನ್ನ ಮರೆತಿಲ್ಲ. Wait and watch ಎಂದು ಕೇವಲ ಎಂಟು ಗಂಟೆ ಮೊದಲು On fixed leader ಎಂಬ ಹೆಸರಿನ ಇನ್​​ಸ್ಟಾಗ್ರಾಂ ಪೇಜ್​ನಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.

ಶರಣ್ ಪಂಪ್​ವೆಲ್​ಗೂ ಜೀವ ಬೆದರಿಕೆ

ಭರತ್ ಕುಮ್ಡೇಲ್​ ಮಾತ್ರವಲ್ಲದೇ ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್​​ಗೂ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್​ವೆಲ್, ಶರಣ್ ಹತ್ಯೆಯಾಗಲು ತಯಾರಾಗಿರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ.

‘ಎಲ್ಲಿದೀಯಾ ನೀನು, ನೆಕ್ಸ್ಟ್ ನೀನೆ’: ಶ್ರೀಜುಗೂ ಜೀವ ಬೆದರಿಕೆ

ಅದೇ ರೀತಿಯಾಗಿ ಶ್ರೀಜಿತ್ ಅಲಿಯಾಸ್ ಶ್ರೀಜುಗೂ ಜೀವ ಬೆದರಿಕೆ ಹಾಕಲಾಗಿದೆ. ‘Killers_target’ ಎಂಬ ಪೇಜ್​​ನಿಂದ ಮುಂಚೆ ಪೋಸ್ಟ್​ ಹಾಕಲಾಗಿತ್ತು. ಇಂದು ಮತ್ತೆ ವೈಯಕ್ತಿಕವಾಗಿ ‘Abu_Sifiyan678’ ಪೇಜ್​​ನಿಂದ ಮೆಸೇಜ್ ಕಳುಹಿಸಿರುವ ಕಿಡಿಗೇಡಿಗಳು, ‘ಎಲ್ಲಿದೀಯಾ ನೀನು, ನೆಕ್ಸ್ಟ್ ನೀನೆ’ ಅಂತಾ ಮಲಯಾಳಂ ನಲ್ಲಿ ಮೆಸೇಜ್ ಮಾಡಿದ್ದಾರೆ.

ಇದನ್ನೂ ಓದಿ: ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಹಿಂದೂಗಳು: ಅಣ್ಣನ ಹತ್ಯೆ ಪ್ರತೀಕಾರಕ್ಕೆ ಹಿಂದೂಗಳನ್ನು ಬಳಸಿದ ಫಾಜಿಲ್ ತಮ್ಮ

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರತಿಕಾರಕ್ಕೆ 2018ರ ಜನವರಿಯಲ್ಲಿ ಬಶೀರ್​ ಕೊಲೆ ಆಗಿತ್ತು. ಮಂಗಳೂರಿನ ಹೊರವಲಯ ಕೊಟ್ಟಾರ ಚೌಕಿ ಬಳಿ ಹತ್ಯೆ ಮಾಡಲಾಗಿತ್ತು. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಶ್ರೀಜಿತ್ ಅಲಿಯಾಸ್ ಶ್ರೀಜು ಪ್ರಕರಣದ ಆರೋಪಿ. ಹೀಗಾಗಿ ಈತನಿಗೆ ಮತ್ತೆ ಮತ್ತೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:24 pm, Sun, 4 May 25

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us