AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇತರ ಕೈದಿಗಳಿಂದ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌
ಆರೋಪಿ ಚೊಟ್ಟೆ ನೌಷಾದ್ ಮೇಲೆ ಅಟ್ಯಾಕ್‌
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 19, 2025 | 8:43 PM

Share

ಮಂಗಳೂರು, ಮೇ 19: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆಯ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ (Attack)​​ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾರಾಗಿದ್ದಾನೆ.

ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ  ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಅಟ್ಯಾಕ್‌ ಮಾಡಿದ್ದಾರೆ.

ಚೊಟ್ಟೆ ನೌಷಾದ್ ಹಿನ್ನಲೆ

ಆರೋಪಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್, ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಇತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ
Image
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ
Image
ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ BJP ಮನವಿ
Image
ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಪೇದೆ ರಶೀದ್ ದೂರು
Image
ಸುಹಾಸ್ ಹತ್ಯೆಗೆ 50 ಲಕ್ಷ ಫಂಡ್, ಹೆಡ್ ಕಾನ್ಸ್‌ಟೇಬಲ್ ಕುತಂತ್ರ: ಆರೋಪ

ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರಿನ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಪೈಕಿ ಇವನು ಒಬ್ಬನಾಗಿದ್ದು, ಇತ್ತೀಚೆಗೆ ಪೊಲೀಸರು ಅರೆಸ್ಟ್ ಮಾಡಿದ್ದರು. ಆರೋಪಿ ನೌಷದ್ ಉಳಿದ ಆರೋಪಿಗಳೊಂದಿಗೆ ಸೇರಿ ಸುಹಾಸ್‌ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿತ್ತು.

ಇದನ್ನೂ ಓದಿ: ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಕುತಂತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಸುಹಾಸ್‌ ಶೆಟ್ಟಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ 8 ಆರೋಪಿಗಳನ್ನ ಬಂಧಿಸಲಾಗಿತ್ತು. ಒಟ್ಟು 10 ಆರೋಪಿಗಳು ಭಾಗಿಯಾಗಿದ್ದು, ಇಬ್ಬರು ತಪ್ಪಿಸಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದರು. ಆದರೆ ಹತ್ತಲ್ಲ 20ಕ್ಕೂ ಹೆಚ್ಚು ಆರೋಪಿಗಳು ಕೃತ್ಯದಲ್ಲಿ ಭಾಗಿ ಆಗಿರೋ ಶಂಕೆ ಇದೆ. ಬಂಧಿತ 8 ಆರೋಪಿಗಳನ್ನ ಮೇ 9 ರವರೆಗೂ ಪೊಲೀಸ್‌ ಕಸ್ಟಡಿಗೆ ನೀಡಿ ಮಂಗಳೂರಿನ 6ನೇ JMFC ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:27 pm, Mon, 19 May 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು