ಸುಹಾಸ್​ ಶೆಟ್ಟಿ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳ ಮುಖಂಡ ಭರತ್ ಕುಮ್ಡೇಲು ಅವರು ಪ್ರತೀಕಾರದ ಮಾತುಗಳನ್ನು ಆಡಿದ್ದಾರೆ. ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಮುಸಲ್ಮಾನರು ವಿಜೃಂಭಿಸುತ್ತಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸುಹಾಸ್​ ಶೆಟ್ಟಿ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
ಭರತ್‌ ಕುಮ್ಡೇಲು
Edited By: ವಿವೇಕ ಬಿರಾದಾರ

Updated on: May 16, 2025 | 3:36 PM

ಮಂಗಳೂರು, ಮೇ 16: ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ “ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆಯ ಪ್ರತೀಕಾರಕ್ಕೆ ಹಿಂದೂ (Hindu) ಸಮಾಜ ಕಾದು ಕೂತಿದೆ” ಎಂದು ಭಜರಂಗದಳ ಮುಖಂಡ ಭರತ್‌ ಕುಮ್ಡೇಲು ಅವರು ಪ್ರಜೋದನಕಾರಿ ಮಾತುಗಳನ್ನು ಆಡಿದ್ದಾರೆ.
ಪುತ್ತೂರಿನಲ್ಲಿ ನಡೆದ ಸುಹಾಸ್‌ ಶೆಟ್ಟಿ ಶ್ರದ್ದಾಂಜಲಿ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಸುಹಾಸನನ್ನು ಯಾವ ರೀತಿ ಕೊಲೆ ಮಾಡಿದ್ದಾರೆ ಅದೇರೀತಿ ಪ್ರತೀಕಾರವಾಗಬೇಕು” ಎಂದರು.

“ಮುಸಲ್ಮಾನರು ಸುಹಾಸ್‌ ಹತ್ಯೆಯನ್ನು ವಿಜೃಂಭಣೆ ಮಾಡುತ್ತಿದ್ದಾರೆ. ಆ ಹತ್ಯೆಯಲ್ಲಿ ಮುಸಲ್ಮಾನರ ಬರ್ಬರತೆ ಕಂಡು ಹಿಂದೂ ಸಮಾಜ ಹೆದರಿ ಹೋಯ್ತು. ಆದರೆ, ಹಿಂದೂ ಸಮಾಜಕ್ಕೆ ಗೊತ್ತಿರಬೇಕು, ಇಂತಹ ಹತ್ಯೆಗಳು ಇದೇ ಮೊದಲಲ್ಲ. ಅದೆಷ್ಟೋ ಮುಸಲ್ಮಾನರ ಹತ್ಯೆಗಳು ಇದೇ ರೀತಿ ನಡೆದಿದೆ. ದೇಹ ಮತ್ತು ತಲೆ ಬೇರೆ ಬೇರೆ ಆಗಿದೆ. ಮರಣೋತ್ತರ ಪರೀಕ್ಷೆ ಮಾಡುವಾಗ ಹೊಲಿಗೆ ಹಾಕಲು ಜಾಗ ಇರಲಿಲ್ಲ. ಮುಖದ ಪರಿಚಯ ಕೂಡ ಸಿಗುತ್ತಿರಲಿಲ್ಲ. ಆ ರೀತಿ ಕೊಚ್ಚಿ ಕೊಂದವರು ನಮ್ಮ ಹಿಂದೂಗಳಲ್ಲಿ ಇದ್ದಾರೆ, ಇದೇನೂ ಹೊಸತಲ್ಲ, ಇದು ಅವರ ಸಾಧನೆಯೂ ಅಲ್ಲ” ಎಂದು ಹೇಳಿದರು.

“ವಿಷ ಕೊಟ್ಟು ಯಾರನ್ನೂ ಕೊಂದಿದ್ದಿಲ್ಲ. ಎಲ್ಲ ಹತ್ಯೆಗಳು ಇದೇರೀತಿ ಆಗಿರುವುದು. ಹೀಗಾಗಿ, ಹಿಂದೂ ಸಮಾಜ ಇದಕ್ಕೆ ಭಯ ಪಡಬೇಕಿಲ್ಲ. ಭಯ ಪಡುವ ಅವಶ್ಯಕತೆಯೂ ಇಲ್ಲ. ಈ ರೀತಿ ಹಿಂದೂ ಕಾರ್ಯಕರ್ತನ ಹತ್ಯೆಯಾದರೆ ಅದಕ್ಕೆ ಪ್ರತೀಕಾರವಾಗಿ ಇನ್ನೊಂದು ಹತ್ಯೆ ಆಗುತ್ತೆ‌” ಎಂದಿದ್ದಾರೆ.

ಇದನ್ನೂ ಓದಿ
ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ
ಸುಹಾಸ್ ಶೆಟ್ಟಿ ಕೊಲೆ: ಇಲ್ಲಿದೆ ಆರೋಪಿಗಳ ಪ್ಲ್ಯಾನ್​​ನ ಇನ್​ಸೈಡ್ ಡಿಟೇಲ್ಸ್
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?

“ಆದರೆ ಈ ಕೇಸಲ್ಲಿ ಆ ರೀತಿ ಆಗಿಲ್ಲ. ಹಾಗಂತ ಹಿಂದೂ ಸಮಾಜಕ್ಕೆ ಸಾಮರ್ಥ್ಯ ಇಲ್ಲದೆ ಕೂತಿಲ್ಲ. ಹತ್ಯೆಯಾಗುವುದಾದರೆ, ಪ್ರತೀಕಾರ ಆಗೋದಾದರೆ ಸುಹಾಸನನ್ನ ಯಾವ ರೀತಿ ಕೊಲೆ ಮಾಡಿದ್ದಾರೆ ಅದೇರೀತಿ ಪ್ರತೀಕಾರ ಆಗಬೇಕು. ಅದೇರೀತಿಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ” ಎಂದು ಪ್ರಚೋದನಕಾರಿ ಮಾತುಗಳನ್ನು ಆಡಿದ್ದಾರೆ.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ, ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

“ಪ್ರತಿಕ್ರಿಯೆ ಮಾಡದೆ ಸುಮ್ಮನಿರಲು ಇದು ಕಾಶ್ಮೀರ ಅಲ್ಲ, ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಾರೆ. ಇದು ಮಂಗಳೂರು, ಇದು ಕಾಶ್ಮೀರ ಅಲ್ಲ, ಇಲ್ಲಿ ಬಿಡುವ ಪ್ರಶ್ನೆಯೇ ಇಲ್ಲ. ಹಿಂದೂ ಕಾರ್ಯಕರ್ತರು, ಹಿಂದೂಗಳು ಮುಸಲ್ಮಾನರ ಜೊತೆ ವ್ಯಾಪಾರ ಮಾಡಬೇಡಿ. ನಾಯಕರು ಕೂಡ ಯಾವುದೇ ವಹಿವಾಟು ಮಾಡಬಾರದು. ಸುಹಾಸ್ ಕೇಸ್‌ ಎನ್‌ಐಎ ತನಿಖಗೆ ಕೊಡಲೇಬೇಕು” ಎಂದು ಒತ್ತಾಯಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Fri, 16 May 25

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us