AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ

ಮಂಗಳೂರಿನ ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆ ಪ್ರಕರಣ ಸಂಬಂಧ 12 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.

Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ
ಫಾಜಿಲ್​, ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆಯಾದ ಸ್ಥಳ
TV9 Web
| Edited By: |

Updated on:Jul 29, 2022 | 10:52 AM

Share

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ (Praveen Nettar) ಕೊಲೆ ಪ್ರಕರಣ ಮಾಸುವ ಮುನ್ನವೆ ನಗರ ಹೊರವಲಯದ ಸುರತ್ಕಲ್​​ನಲ್ಲಿ ಫಾಜಿಲ್​ ಮಂಗಲಪೇಟೆ (Fazil Murder) (23) ಹತ್ಯೆ ಎಂಬ ಯುವಕನ ಹತ್ಯೆಯಾಗಿದೆ. ಫಾಜಿಲ್​ ಹತ್ಯೆಯ ನಂತರ ಅನುಮಾನಾಸ್ಪದವಾಗಿ ಕಂಡುಬಂದ 12 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿ ಎಂದು ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ಮಂಗಳೂರು ಪೊಲೀಸ್ ಆಯುಕ್ತ ಎನ್​.ಶಶಿಕುಮಾರ್ ಹೇಳಿಕೆ ನೀಡಿದ್ದು, ನಿಷೇಧಾಜ್ಞೆ ಉಲ್ಲಂಘಿಸಿದ 14 ಜನರನ್ನು ವಶಕ್ಕೆ ಪಡೆದಿದ್ದೇವೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕೆಲವರನ್ನ ವಶಕ್ಕೆ ಪಡೆದಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಹೇಳಿದರು. ಸುರತ್ಕಲ್​​ನ ಗಣೇಶಪುರದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: Suratkal Murder: ಸುರತ್ಕಲ್ ಹತ್ಯೆ; ಶಾಲಾ ಕಾಲೇಜುಗಳಿಗೆ ರಜೆ, ಮಸೀದಿಗಳಲ್ಲಿ ಪ್ರಾರ್ಥನೆ ಬೇಡವೆಂದು ಪೊಲೀಸರ ಮನವಿ

ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಮೃತ ಫಾಜಿಲ್ ಮೃತ ದೇಹ ಮನೆಗೆ ತಲುಪಿದ್ದು, ಸಾರ್ವಜನಿಕ ಅಂತಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಿಂದ ಸುರತ್ಕಲ್ ಮಂಗಳಪೇಟೆವರೆಗೆ ಮೆರವಣಿಗೆ ಮೂಲಕ ಫಾಝಿಲ್ ಮೃತ ದೇಹ ತರಲಾಗಿದ್ದು, ಫಾಝಿಲ್ ಸ್ವಗೃಹದಲ್ಲಿ ಅಂತಿ ದರ್ಶನಕ್ಕೆ ಸಾರ್ವಜನಿಕರು ಜಮಾಯಿಸಿದ್ದಾರೆ. ಪುರುಷರಿಗೆ ಅಂತಿಮ ದರ್ಶನಕ್ಕೆ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯಲ್ಲಿ ಅವಕಾಶ ಮಾಡಲಾಗಿದೆ. ಮಸೀದಿಯಲ್ಲಿ ಫಾಜಿಲ್​ ಪಾರ್ಥಿವ ಶರೀರಕ್ಕೆ ಪ್ರಾರ್ಥನೆ ಸಲ್ಲಿಕೆ ಬಳಿಕ ಮಸೀದಿಯ ಕಬರ್ ಸ್ಥಾನದಲ್ಲಿ ದಫನ್​ ಕಾರ್ಯ ನಡೆಯಲಿದೆ. ಫಾಝೀಲ್ ಅಂತೀಮ‌ ದರ್ಶನದಲ್ಲಿ ಐವನ್ ಡಿಸೋಜ, ಮೋಹಿದ್ದೀನ್ ಮಾಜಿ ಶಾಸಕರು ಭಾಗಿಯಾಗಿದ್ದರು.

ನಿಷೇಧಾಜ್ಞೆ ಜಾರಿ

ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆ ಪ್ರಕರಣ: ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ ಎಂದ ಮಾಜಿ ಸಚಿವ ಯು.ಟಿ.ಖಾದರ್

ವದಂತಿಗಳಿಗೆ ಕಿವಿಗೊಡಬೇಡಿ

ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಘಟನಾ ಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಫಾಜಿಲ್ ಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ. ಕೊಲೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದೇವೆ. ಕೊಲೆ ಸಂಬಂಧ ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಶಾಂತಿ ಕದಡುವ ಪ್ರಯತ್ನ ನಡೆಸಬಾರದು ಎಂದು ಸಾರ್ವಜನಿಕರಿಗೆ ತಿಳಿಹೇಳಿದರು.

Published On - 10:16 am, Fri, 29 July 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ