AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ

ಮಂಗಳೂರಿನ ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆ ಪ್ರಕರಣ ಸಂಬಂಧ 12 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.

Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ
ಫಾಜಿಲ್​, ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆಯಾದ ಸ್ಥಳ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 29, 2022 | 10:52 AM

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ (Praveen Nettar) ಕೊಲೆ ಪ್ರಕರಣ ಮಾಸುವ ಮುನ್ನವೆ ನಗರ ಹೊರವಲಯದ ಸುರತ್ಕಲ್​​ನಲ್ಲಿ ಫಾಜಿಲ್​ ಮಂಗಲಪೇಟೆ (Fazil Murder) (23) ಹತ್ಯೆ ಎಂಬ ಯುವಕನ ಹತ್ಯೆಯಾಗಿದೆ. ಫಾಜಿಲ್​ ಹತ್ಯೆಯ ನಂತರ ಅನುಮಾನಾಸ್ಪದವಾಗಿ ಕಂಡುಬಂದ 12 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿ ಎಂದು ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ಮಂಗಳೂರು ಪೊಲೀಸ್ ಆಯುಕ್ತ ಎನ್​.ಶಶಿಕುಮಾರ್ ಹೇಳಿಕೆ ನೀಡಿದ್ದು, ನಿಷೇಧಾಜ್ಞೆ ಉಲ್ಲಂಘಿಸಿದ 14 ಜನರನ್ನು ವಶಕ್ಕೆ ಪಡೆದಿದ್ದೇವೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕೆಲವರನ್ನ ವಶಕ್ಕೆ ಪಡೆದಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಹೇಳಿದರು. ಸುರತ್ಕಲ್​​ನ ಗಣೇಶಪುರದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: Suratkal Murder: ಸುರತ್ಕಲ್ ಹತ್ಯೆ; ಶಾಲಾ ಕಾಲೇಜುಗಳಿಗೆ ರಜೆ, ಮಸೀದಿಗಳಲ್ಲಿ ಪ್ರಾರ್ಥನೆ ಬೇಡವೆಂದು ಪೊಲೀಸರ ಮನವಿ

ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಮೃತ ಫಾಜಿಲ್ ಮೃತ ದೇಹ ಮನೆಗೆ ತಲುಪಿದ್ದು, ಸಾರ್ವಜನಿಕ ಅಂತಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಿಂದ ಸುರತ್ಕಲ್ ಮಂಗಳಪೇಟೆವರೆಗೆ ಮೆರವಣಿಗೆ ಮೂಲಕ ಫಾಝಿಲ್ ಮೃತ ದೇಹ ತರಲಾಗಿದ್ದು, ಫಾಝಿಲ್ ಸ್ವಗೃಹದಲ್ಲಿ ಅಂತಿ ದರ್ಶನಕ್ಕೆ ಸಾರ್ವಜನಿಕರು ಜಮಾಯಿಸಿದ್ದಾರೆ. ಪುರುಷರಿಗೆ ಅಂತಿಮ ದರ್ಶನಕ್ಕೆ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯಲ್ಲಿ ಅವಕಾಶ ಮಾಡಲಾಗಿದೆ. ಮಸೀದಿಯಲ್ಲಿ ಫಾಜಿಲ್​ ಪಾರ್ಥಿವ ಶರೀರಕ್ಕೆ ಪ್ರಾರ್ಥನೆ ಸಲ್ಲಿಕೆ ಬಳಿಕ ಮಸೀದಿಯ ಕಬರ್ ಸ್ಥಾನದಲ್ಲಿ ದಫನ್​ ಕಾರ್ಯ ನಡೆಯಲಿದೆ. ಫಾಝೀಲ್ ಅಂತೀಮ‌ ದರ್ಶನದಲ್ಲಿ ಐವನ್ ಡಿಸೋಜ, ಮೋಹಿದ್ದೀನ್ ಮಾಜಿ ಶಾಸಕರು ಭಾಗಿಯಾಗಿದ್ದರು.

ನಿಷೇಧಾಜ್ಞೆ ಜಾರಿ

ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆ ಪ್ರಕರಣ: ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ ಎಂದ ಮಾಜಿ ಸಚಿವ ಯು.ಟಿ.ಖಾದರ್

ವದಂತಿಗಳಿಗೆ ಕಿವಿಗೊಡಬೇಡಿ

ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಘಟನಾ ಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಫಾಜಿಲ್ ಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ. ಕೊಲೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದೇವೆ. ಕೊಲೆ ಸಂಬಂಧ ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಶಾಂತಿ ಕದಡುವ ಪ್ರಯತ್ನ ನಡೆಸಬಾರದು ಎಂದು ಸಾರ್ವಜನಿಕರಿಗೆ ತಿಳಿಹೇಳಿದರು.

Published On - 10:16 am, Fri, 29 July 22

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?