AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುವ ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್ ರೆಡ್ ಸಿಗ್ನಲ್​​

ಹೋರಾಟಗಾರರಿಗೆ ‌ನೋಟಿಸ್ ಕೊಟ್ಟ ಬಗ್ಗೆ ಮಾಹಿತಿ ಇರಲಿಲ್ಲ. ನಾನು ‌ಕಮಿಷನರ್ ಗೆ ಹೇಳಿದ್ದೇನೆ, ಹೋರಾಟ ಸಹಜ, ಯಾವುದೇ ನೋಟಿಸ್ ‌ಮಾಡಬೇಡಿ ಎಂದಿದ್ದೇನೆ. ಈ ಮಧ್ಯೆ, 20 ದಿನಗಳ ಕಾಲಾವಕಾಶ ಕೊಡಿ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದ್ದೇನೆ -ಲೋಕಸಭಾ ಸಂಸದ ‌ನಳಿನ್ ಕುಮಾರ್ ಕಟೀಲ್

ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುವ ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್ ರೆಡ್ ಸಿಗ್ನಲ್​​
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್​ ಕಟೀಲ್
TV9 Web
| Edited By: |

Updated on:Oct 17, 2022 | 12:06 PM

Share

ಮಂಗಳೂರು: ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ (Surathkal Gate) ಕಿತ್ತೆಸೆಯಲು ನಾಳೆ ‘ನೇರ ಕಾರ್ಯಾಚರಣೆ’ಗೆ ಕರೆ ನೀಡಲಾಗಿದೆ. ಈ ಮಧ್ಯೆ ಹೋರಾಟ ಕೈ ಬಿಡಿ ಅಂತ ಈಗಾಗಲೇ ವಿನಂತಿ ಮಾಡಿರುವುದಾಗಿ ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಸಂಸದ ‌ನಳಿನ್ ಕುಮಾರ್ ಕಟೀಲ್ (nalinkumar kateel) ಹೇಳಿದ್ದಾರೆ. ಹೋರಾಟವನ್ನ (Protest) ಶಾಂತಿಯುತವಾಗಿ ‌ಮಾಡಲು ನನ್ನ ಅಭ್ಯಂತರ ಇಲ್ಲ. ಕಾನೂನು ಕೈಗೆತ್ತಿಕೊಂಡರೆ ಮುಂದಕ್ಕೆ ಆಗುವ ಅನಾಹುತಕ್ಕೆ ‌ಅವರೇ ಹೊಣೆಯಾಗುತ್ತಾರೆ. ನಾನು ಟೋಲ್ ಗೇಟ್ ತೆಗೆಯಲು ಕಠಿಬದ್ದನಾಗಿದ್ದೇನೆ, ತೆಗೆದೇ ತೆಗೆಸ್ತೀನಿ. ಆದರೆ ಕಾನೂನು ಸಮಸ್ಯೆ ಕಾರಣ ಟೋಲ್ ಗೇಟ್ ತೆರವು ಕಷ್ಟವಾಗಿದೆ. ಹೀಗಾಗಿ 20 ದಿನಗಳ ಕಾಲ ಹೋರಾಟ ಮುಂದೂಡಿ ಅಂತ ವಿನಂತಿ ಮಾಡ್ತೇನೆ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದ್ದಾರೆ.

ಹೋರಾಟ ಕೈ ಬಿಡಿ ಅಂತ ಈಗಾಗಲೇ ವಿನಂತಿ ಮಾಡಿದ್ದೇನೆ:

ಹೋರಾಟಗಾರರಿಗೆ ‌ನೋಟಿಸ್ ಕೊಟ್ಟ ಬಗ್ಗೆ ಮಾಹಿತಿ ಇರಲಿಲ್ಲ. ನಾನು ‌ಕಮಿಷನರ್ ಗೆ ಹೇಳಿದ್ದೇನೆ, ಹೋರಾಟ ಸಹಜ, ಯಾವುದೇ ನೋಟಿಸ್ ‌ಮಾಡಬೇಡಿ. ಶಾಂತಿಯುತ ಹೋರಾಟಕ್ಕೆ ‌ನನ್ನ ವಿರೋಧ ‌ಇಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ತನ್ನದೇ ಆದ ನಿಯಮದಡಿ‌ ಕ್ರಮ ಕೈಗೊಳ್ಳುತ್ತದೆ. ಹೆದ್ದಾರಿ ಪ್ರಾಧಿಕಾರ 20 ದಿನ ಸಮಯ ಕೇಳಿದೆ, ನಾವು ಸಮಯ ಕೊಡುವ. ನಾನು ಹೋರಾಟಗಾರರ ಜೊತೆ ಮಾತನಾಡಿದ್ರೆ ರಾಜಕೀಯ ಬರುತ್ತೆ. ಹಾಗಾಗಿ ಡಿಸಿ ಸೇರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಅವರ ಜೊತೆ ಮಾತನಾಡಿಸಿದ್ದೇನೆ. ಈಗ ಮತ್ತೆ ವಿನಂತಿ ‌ಮಾಡ್ತೇನೆ, 20 ದಿನಗಳ ಕಾಲಾವಕಾಶ ಕೊಡಿ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದ್ದಾರೆ.

Also Read: KSHDCL: ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಎಫ್ಐಆರ್​ -ಡಿಐಎನ್ ಅನರ್ಹತೆ ದೂರು, 1 ವರ್ಷ 8 ತಿಂಗಳು ಅಧಿಕಾರ ಅನುಭವಿಸಿದ ಆರೋಪ

Published On - 12:03 pm, Mon, 17 October 22

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!