ಬುರ್ಖಾ ತೆಗೆದು ಒಳಗೆ ಬನ್ನಿ – ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!

ಒಂದು ವರ್ಷದ ಹಿಂದೆಯೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದೆ ಹರಿದುಬಿಡಲಾಗಿದೆ.

ಬುರ್ಖಾ ತೆಗೆದು ಒಳಗೆ ಬನ್ನಿ - ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!
ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!
Edited By: ಸಾಧು ಶ್ರೀನಾಥ್​

Updated on: Dec 11, 2023 | 3:55 PM

ಮಂಗಳೂರು, ಡಿಸೆಂಬರ್​ 11: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (puttur hospital) ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ (burkha) ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ (Controversy) ಕಾರಣವಾಗಿದೆ.

ಒಂದು ವರ್ಷದ ಹಿಂದೆಯೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ರೋಗಿಗಳ ಇಸಿಜಿ (ECG) ತೆಗೆಯುವ ರೂಮ್ ಬಾಗಿಲಿನಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದೆ ಹರಿದುಬಿಡಲಾಗಿದೆ.

ಇದನ್ನೂ ಓದಿ: ಬುರ್ಖಾ ಧರಿಸಿ ಕಾಣಿಸಿಕೊಂಡ ನಟಿ ಸಂಜನಾ, ಏನು ವಿಶೇಷತೆ?

ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ ನಲ್ಲೂ ಈ ಪೋಸ್ಟ್ ಕಾಣಿಸಿಕೊಂಡಿತ್ತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆಯ ಸಿಬ್ಬಂದಿ ಮೇಲೆ ಒತ್ತಡ ಹೇರಲಾಯಿತು. ಒತ್ತಡದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ತಕ್ಷಣ ಸೂಚನಾ ಫಲಕ ತೆರವುಗೊಳಿಸಿದರು. ಆದರೂ ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಗೊಂದಲದಲ್ಲಿದ್ದಾರೆ. ಈ ಪೋಸ್ಟ್ ಮೂಲಕ ಚಿಕಿತ್ಸೆಯಲ್ಲೂ ಧರ್ಮ ಎಳೆ ತಂದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us