AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಡಬ್ಬಿ ಹೊರತೆಗೆದ ಪಶುವೈದ್ಯರ ತಂಡ

ಪ್ಲಾಸ್ಟಿಕ್ ಬಾಟಲ್ ನುಂಗಿದ ನಾಗರಹಾವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ ಮಂಗಳೂರಿನ ಪಶುವೈದ್ಯರು ಹೊಟ್ಟೆಯಿಂದ ಪ್ಲಾಸ್ಟಿಕ್ ವಸ್ತುವನ್ನು ಹೊರತೆಗೆಯುವಲ್ಲಿ ಯಶ್ವಿಯಾಗಿದ್ದಾರೆ.

ಮಂಗಳೂರು: ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಡಬ್ಬಿ ಹೊರತೆಗೆದ ಪಶುವೈದ್ಯರ ತಂಡ
ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಬಾಟಲ್ ಹೊರತೆಗೆದ ಮಂಗಳೂರಿನ ಪಶುವೈದ್ಯರ ತಂಡ
Rakesh Nayak Manchi
|

Updated on: Jun 23, 2023 | 12:52 PM

Share

ಮಂಗಳೂರು: ನಾಗರಹಾವು (Cobra) ನುಂಗಿದ ಪ್ಲಾಸ್ಟಿಕ್ ಡಬ್ಬಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಮಂಗಳೂರಿನ (Mangaluru) ಪಶುವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಲಿಟಲ್ ಪಾವ್ಸ್‌ನ ಡಾ.ಯಶಸ್ವಿ ನಾರಾವಿ ನೇತೃತ್ವದ ಪಶುವೈದ್ಯರ ತಂಡದಿಂದ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆದಿದೆ.

ಬಂಟ್ವಾಳದ ಹಾವು ರಕ್ಷಕ ಸ್ನೇಕ್ ಕಿರಣ್ ಅವರು ಬಿಲದಲ್ಲಿ ನಾಗರಹಾವೊಂದನ್ನು ನೋಡಿದ್ದಾರೆ. ಎರಡು ದಿನಗಳಾದರೂ ಸ್ಥಳದಿಂದ ಕದಲದ ಕಾರಣ ಗಾಯಗೊಂಡಿದೆ ಎಂದು ಶಂಕಿಸಿದ ಕಿರಣ್, ಹಾವನ್ನು ಸೆರೆಹಿಡಿದಿದ್ದಾರೆ. ಸುಮಾರು 10 ವರ್ಷ ವಯಸ್ಸಿನ ಈ ನಾಗರಹಾವಿನ ದೇಹದ ಮೇಲೆ ಎರಡು ದೊಡ್ಡ ಗಾಯಗಳಿರುವುದನ್ನು ಗಮನಿಸಿ ಚಿಕಿತ್ಸೆಗಾಗಿ ಚಿಕಿತ್ಸಾಲಯಕ್ಕೆ ಕೊಂಡೊಯ್ದಿದ್ದರು.

ಪರೀಕ್ಷೆ ವೇಳೆ ಹಾವಿನ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ತಿಳಿದುಬಂದಿದೆ. ಹೀಗಾಗಿ ಶಸ್ತ್ರಚಿಕಿತ್ಸೆಗೆ ಸಿದ್ಧತೆಗಳನ್ನು ಮಾಡಲಾಯಿತು. ನಂತರ ಹಾವಿಗೆ ಅರಿವಳಿಕೆ ಮದ್ದು ನೀಡಿ ಜೂನ್ 4 ರಂದು ಶಸ್ತ್ರಚಿಕಿತ್ಸೆ ನಡೆಸಿ ಪ್ಲಾಸ್ಟಿಕ್ ಡಬ್ಬಿಯನ್ನು ಹೊರತೆಗೆಯಲಾಯಿತು.

ಇದನ್ನೂ ಓದಿ: Viral Video: ವಿಡಿಯೋ ನೋಡಿ ಕಿರುಚ್ಬೇಡಿ: ತಿರುಗುತ್ತಿದ್ದ ಫ್ಯಾನ್​ನ ರೆಕ್ಕೆಗೆ ಸಿಲುಕಿ ನೋಡ ನೋಡುತ್ತಿದ್ದಂತೆ ವ್ಯಕ್ತಿ ಮೇಲೆ ಹಾರಿದ ಹಾವು

ಹಾವಿನ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಡಬ್ಬಿಯನ್ನು (ವೀಳ್ಯದೆಲೆ ಅಗಿಯುವವರು ಸುಣ್ಣದ ಪುಡಿ ಇಡಲು ಬಳಸುವಂತಹ ಸಣ್ಣ ಪೆಟ್ಟಿಗೆ) ಕಂಡು ಆಶ್ಚರ್ಯವಾಯಿತು ಎಂದು ಡಾ.ಯಶಸ್ವಿ ನಾರಾವಿ ಹೇಳಿದ್ದಾರೆ. ಅರಿವಿಲ್ಲದೆ ಸೇವಿಸಿದ ಹಾವು ಅನಾರೋಗ್ಯಕ್ಕೆ ಒಳಗಾಗಿ ಬಿಲದಲ್ಲಿ ಉಳಿದುಕೊಂಡಿತು. ಶಸ್ತ್ರಚಿಕಿತ್ಸೆ ನಂತರ 15 ದಿನಗಳ ಕಾಲ ಆರೈಕೆಯಲ್ಲಿತ್ತು. ಈ ಅವಧಿಯಲ್ಲಿ, ಹಾವಿನ ಸಂಪೂರ್ಣ ಆರೈಕೆ ನಡೆಸಲಾಯಿತು. ಸದ್ಯ ಹಾವನ್ನು ರಕ್ಷಿಸಿದ ಅದೇ ಸ್ಥಳಕ್ಕೆ ಮತ್ತೆ ಬಿಡಲಾಯಿತು ಎಂದರು.

“ಪ್ಲ್ಯಾಸ್ಟಿಕ್‌ನಿಂದ ಸಾಕು ಮತ್ತು ಸಮುದ್ರ ಪ್ರಾಣಿಗಳಿಗೆ ಹಾನಿಯುಂಟಾದ ಹಲವಾರು ನಿದರ್ಶನಗಳಿವೆ. ಪ್ಲಾಸ್ಟಿಕ್ ಸೇವನೆಯು ಜೀರ್ಣಾಂಗದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ದೇಹದ ಆಂತರಿಕ ಅಂಗಗಳಿಗೆ ಹಾನಿ ಉಂಟುಮಾಡಬಹುದು. ಪ್ಲಾಸ್ಟಿಕ್‌ಗಳನ್ನು ತಿನ್ನುವುದರಿಂದ ಪ್ರಾಣಿಗಳಿಗೆ ಉಸಿರುಗಟ್ಟಿಸಬಹುದು. ನಂತರ ಆಹಾರ ಸೇವಿಸಲಾಗದೆ ಹಸಿವಿನಿಂದ ಸಾಯಬಹುದು” ಎಂದು ಡಾ ಯಶಸ್ವಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ