Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಡಬ್ಬಿ ಹೊರತೆಗೆದ ಪಶುವೈದ್ಯರ ತಂಡ

ಪ್ಲಾಸ್ಟಿಕ್ ಬಾಟಲ್ ನುಂಗಿದ ನಾಗರಹಾವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ ಮಂಗಳೂರಿನ ಪಶುವೈದ್ಯರು ಹೊಟ್ಟೆಯಿಂದ ಪ್ಲಾಸ್ಟಿಕ್ ವಸ್ತುವನ್ನು ಹೊರತೆಗೆಯುವಲ್ಲಿ ಯಶ್ವಿಯಾಗಿದ್ದಾರೆ.

ಮಂಗಳೂರು: ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಡಬ್ಬಿ ಹೊರತೆಗೆದ ಪಶುವೈದ್ಯರ ತಂಡ
ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಬಾಟಲ್ ಹೊರತೆಗೆದ ಮಂಗಳೂರಿನ ಪಶುವೈದ್ಯರ ತಂಡ
Follow us
Rakesh Nayak Manchi
|

Updated on: Jun 23, 2023 | 12:52 PM

ಮಂಗಳೂರು: ನಾಗರಹಾವು (Cobra) ನುಂಗಿದ ಪ್ಲಾಸ್ಟಿಕ್ ಡಬ್ಬಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಮಂಗಳೂರಿನ (Mangaluru) ಪಶುವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಲಿಟಲ್ ಪಾವ್ಸ್‌ನ ಡಾ.ಯಶಸ್ವಿ ನಾರಾವಿ ನೇತೃತ್ವದ ಪಶುವೈದ್ಯರ ತಂಡದಿಂದ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆದಿದೆ.

ಬಂಟ್ವಾಳದ ಹಾವು ರಕ್ಷಕ ಸ್ನೇಕ್ ಕಿರಣ್ ಅವರು ಬಿಲದಲ್ಲಿ ನಾಗರಹಾವೊಂದನ್ನು ನೋಡಿದ್ದಾರೆ. ಎರಡು ದಿನಗಳಾದರೂ ಸ್ಥಳದಿಂದ ಕದಲದ ಕಾರಣ ಗಾಯಗೊಂಡಿದೆ ಎಂದು ಶಂಕಿಸಿದ ಕಿರಣ್, ಹಾವನ್ನು ಸೆರೆಹಿಡಿದಿದ್ದಾರೆ. ಸುಮಾರು 10 ವರ್ಷ ವಯಸ್ಸಿನ ಈ ನಾಗರಹಾವಿನ ದೇಹದ ಮೇಲೆ ಎರಡು ದೊಡ್ಡ ಗಾಯಗಳಿರುವುದನ್ನು ಗಮನಿಸಿ ಚಿಕಿತ್ಸೆಗಾಗಿ ಚಿಕಿತ್ಸಾಲಯಕ್ಕೆ ಕೊಂಡೊಯ್ದಿದ್ದರು.

ಪರೀಕ್ಷೆ ವೇಳೆ ಹಾವಿನ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ತಿಳಿದುಬಂದಿದೆ. ಹೀಗಾಗಿ ಶಸ್ತ್ರಚಿಕಿತ್ಸೆಗೆ ಸಿದ್ಧತೆಗಳನ್ನು ಮಾಡಲಾಯಿತು. ನಂತರ ಹಾವಿಗೆ ಅರಿವಳಿಕೆ ಮದ್ದು ನೀಡಿ ಜೂನ್ 4 ರಂದು ಶಸ್ತ್ರಚಿಕಿತ್ಸೆ ನಡೆಸಿ ಪ್ಲಾಸ್ಟಿಕ್ ಡಬ್ಬಿಯನ್ನು ಹೊರತೆಗೆಯಲಾಯಿತು.

ಇದನ್ನೂ ಓದಿ: Viral Video: ವಿಡಿಯೋ ನೋಡಿ ಕಿರುಚ್ಬೇಡಿ: ತಿರುಗುತ್ತಿದ್ದ ಫ್ಯಾನ್​ನ ರೆಕ್ಕೆಗೆ ಸಿಲುಕಿ ನೋಡ ನೋಡುತ್ತಿದ್ದಂತೆ ವ್ಯಕ್ತಿ ಮೇಲೆ ಹಾರಿದ ಹಾವು

ಹಾವಿನ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಡಬ್ಬಿಯನ್ನು (ವೀಳ್ಯದೆಲೆ ಅಗಿಯುವವರು ಸುಣ್ಣದ ಪುಡಿ ಇಡಲು ಬಳಸುವಂತಹ ಸಣ್ಣ ಪೆಟ್ಟಿಗೆ) ಕಂಡು ಆಶ್ಚರ್ಯವಾಯಿತು ಎಂದು ಡಾ.ಯಶಸ್ವಿ ನಾರಾವಿ ಹೇಳಿದ್ದಾರೆ. ಅರಿವಿಲ್ಲದೆ ಸೇವಿಸಿದ ಹಾವು ಅನಾರೋಗ್ಯಕ್ಕೆ ಒಳಗಾಗಿ ಬಿಲದಲ್ಲಿ ಉಳಿದುಕೊಂಡಿತು. ಶಸ್ತ್ರಚಿಕಿತ್ಸೆ ನಂತರ 15 ದಿನಗಳ ಕಾಲ ಆರೈಕೆಯಲ್ಲಿತ್ತು. ಈ ಅವಧಿಯಲ್ಲಿ, ಹಾವಿನ ಸಂಪೂರ್ಣ ಆರೈಕೆ ನಡೆಸಲಾಯಿತು. ಸದ್ಯ ಹಾವನ್ನು ರಕ್ಷಿಸಿದ ಅದೇ ಸ್ಥಳಕ್ಕೆ ಮತ್ತೆ ಬಿಡಲಾಯಿತು ಎಂದರು.

“ಪ್ಲ್ಯಾಸ್ಟಿಕ್‌ನಿಂದ ಸಾಕು ಮತ್ತು ಸಮುದ್ರ ಪ್ರಾಣಿಗಳಿಗೆ ಹಾನಿಯುಂಟಾದ ಹಲವಾರು ನಿದರ್ಶನಗಳಿವೆ. ಪ್ಲಾಸ್ಟಿಕ್ ಸೇವನೆಯು ಜೀರ್ಣಾಂಗದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ದೇಹದ ಆಂತರಿಕ ಅಂಗಗಳಿಗೆ ಹಾನಿ ಉಂಟುಮಾಡಬಹುದು. ಪ್ಲಾಸ್ಟಿಕ್‌ಗಳನ್ನು ತಿನ್ನುವುದರಿಂದ ಪ್ರಾಣಿಗಳಿಗೆ ಉಸಿರುಗಟ್ಟಿಸಬಹುದು. ನಂತರ ಆಹಾರ ಸೇವಿಸಲಾಗದೆ ಹಸಿವಿನಿಂದ ಸಾಯಬಹುದು” ಎಂದು ಡಾ ಯಶಸ್ವಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ