AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್; ಮಂಗಳೂರು ಗಡಿಯಲ್ಲೂ ಹದ್ದಿನಕಣ್ಣಿಡಲು ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಸೂಚನೆ

ಕೇರಳದ ಕೋವಲಂ-ಮಂಗಳೂರು ನಡುವೆ ದೊಡ್ಡ ದೊಡ್ಡ ಐಷಾರಾಮಿ ವಾಹನಗಳು ಓಡಾಡುತ್ತಿವೆ. ಕೇರಳದ ವಿವಿಧ ಜಿಲ್ಲೆಗಳಿಗೆ ಶಸ್ತ್ರಾಸ್ತ್ರ, ಹಣ ಸಾಗಿಸಲು ವಾಹನ ಬಳಕೆಯಾಗುತ್ತಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕೇರಳ ಕರಾವಳಿ-ಮಂಗಳೂರು ಗಡಿ ಭಾಗದಲ್ಲಿ ಎಚ್ಚರವಿರಲು ಗುಪ್ತಚರ ಇಲಾಖೆ ಪೊಲೀಸರಿಗೆ ಸೂಚಿಸಿದೆ.

ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್; ಮಂಗಳೂರು ಗಡಿಯಲ್ಲೂ ಹದ್ದಿನಕಣ್ಣಿಡಲು ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 08, 2022 | 8:29 AM

Share

ಮಂಗಳೂರು: ಬೆಂಗಳೂರಿನಲ್ಲಿ ಮೋಸ್ಟ್ ಡೇಂಜರಸ್ ಉಗ್ರ ತಾಲಿಬಾನ್ ಹುಸೇನ್ನನ್ನು ಪೊಲೀಸರು ಬಂಧಿಸಿದ್ದಾರೆ. ಈಗ ಇದೇ ಬೆನ್ನಲ್ಲೆ ಮತ್ತೊಂದು ಲಿಂಕ್ ಬಯಲಾಗಿದೆ. ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್ ಇದೆ ಎಂದು ಕೇರಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಸಂದೇಶ ಕೊಟ್ಟಿದೆ. ಮಂಗಳೂರು ಗಡಿಯಲ್ಲೂ ಹದ್ದಿನಕಣ್ಣಿಡಲು ಗುಪ್ತಚರ ಇಲಾಖೆ ಸೂಚಿಸಿದೆ.

ಕೇರಳದ ಕೋವಲಂ-ಮಂಗಳೂರು ನಡುವೆ ದೊಡ್ಡ ದೊಡ್ಡ ಐಷಾರಾಮಿ ವಾಹನಗಳು ಓಡಾಡುತ್ತಿವೆ. ಕೇರಳದ ವಿವಿಧ ಜಿಲ್ಲೆಗಳಿಗೆ ಶಸ್ತ್ರಾಸ್ತ್ರ, ಹಣ ಸಾಗಿಸಲು ವಾಹನ ಬಳಕೆಯಾಗುತ್ತಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕೇರಳ ಕರಾವಳಿ-ಮಂಗಳೂರು ಗಡಿ ಭಾಗದಲ್ಲಿ ಎಚ್ಚರವಿರಲು ಗುಪ್ತಚರ ಇಲಾಖೆ ಪೊಲೀಸರಿಗೆ ಸೂಚಿಸಿದೆ. ಕಪ್ಪು ಹಣವನ್ನು ಬಿಳಿ ಮಾಡಲು ಹೆದ್ದಾರಿ ಗೂಡಂಗಡಿ ಬಳಸುವ ಶಂಕೆ ಇದೆ. ಕೆಲ ಗೂಡಂಗಡಿಗಳಿಗೆ ಭಯೋತ್ಪಾದಕ ಸಂಘಟನೆಗಳ ನಂಟಿನ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಗೂಡಂಗಡಿಗಳ ಜೊತೆ ಐಷಾರಾಮಿ ವಾಹನಗಳ ಅಕ್ರಮ ವ್ಯವಹಾರ? ನಡೆಯುತ್ತಿರುವ ಬಗ್ಗೆ ಅನುಮಾನ ಬಂದಿದ್ದು ಕೇರಳ ಕರಾವಳಿ, ಮಂಗಳೂರು ಗಡಿಗಳಲ್ಲಿ ಹದ್ದಿನ ಕಣ್ಣಿಡಲು ಸೂಚನೆ ನೀಡಿದೆ. ಕೇರಳ ಪೊಲೀಸ್ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಆಗಿರುವಂತೆ ತಿಳಿಸಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದ ಅಸನ್ಸೋಲ್​ನಲ್ಲಿ ಹಳಿ ತಪ್ಪಿದ 40 ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲು

ಶಿವಮೊಗ್ಗ ಜಿಲ್ಲೆಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆ ಶಂಕೆ ಜಿಲ್ಲೆಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ (Satellite Phone) ಬಳಕೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ತವರು ಜಿಲ್ಲೆಯ ಮೇಲೆ ಉಗ್ರರ ಕರಿನೆರಳು ಬಿದ್ದಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಸಾಗರ (ಸಿಗಂದೂರು) ಮತ್ತು ಶಿಕಾರಿಪುರ ಬಳಿ ಸ್ಯಾಟಲೈಟ್ ಫೋನ್ ಬಳಕೆಯಾಗಿರಬಹುದು ಎಂದು ಐಎಸ್ಡಿ ಅಧಿಕಾರಿಗಳು ಹೇಳಿದ್ದಾರೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಸ್ಯಾಟಲೈಟ್ ಫೋನ್ ಬಳಕೆಗೆ ಈ ಎರಡು ಪ್ರದೇಶಗಳನ್ನು ಆಯ್ಕೆ ಮಾಡಿದ್ದೇಕೆ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಈ ಮೊದಲು ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲ ಅರಣ್ಯ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿತ್ತು. ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಪ್ರವಾಸಿಗರ ಸೋಗಿನಲ್ಲಿ ಬಂದಿರುವ ಅನಿವಾಸಿ ಭಾರತೀಯರು ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೇಂದ್ರ ತನಿಖಾ ದಳ ಮತ್ತು ರಾಜ್ಯ ಪೊಲೀಸ್ ಇಲಾಖೆಯಿಂದ ಜಂಟಿ ತನಿಖೆ ಆರಂಭವಾಗಿದೆ. ಕಳೆದ 15 ದಿನಗಳ ಹಿಂದೆ ಈ ಪ್ರದೇಶದಲ್ಲಿ ಸ್ಯಾಟಲೈಟ್ ಪೋನ್ ಬಳಕೆಯಾಗಿದೆ ಎಂದು ಮೂಲಗಳು ಹೇಳಿವೆ.

Published On - 8:28 am, Wed, 8 June 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!