AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಮಾಜಿ ಪ್ರೇಯಸಿ ಎಂಟ್ರಿ; ಮುಂದೆ ಕಲ್ಯಾಣ ಮಂಟಪದಲ್ಲಿ ಆಗಿದ್ದೇನು?

ತನ್ನನ್ನು ಬಿಟ್ಟು ಬೇರೊಬ್ಬಳೊಂದಿಗೆ ಮದುವೆಯಾಗುತ್ತಿರುವ ವಿಚಾರ ತಿಳಿದು ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಬಂದು ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಗೆ ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪ ಕೇಳಿಬಂದಿದ್ದು, ಯುವತಿಯಿಂದ ದೂರು ದಾಖಲಾಗಿದೆ.

ಮಂಗಳೂರು: ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಮಾಜಿ ಪ್ರೇಯಸಿ ಎಂಟ್ರಿ; ಮುಂದೆ ಕಲ್ಯಾಣ ಮಂಟಪದಲ್ಲಿ ಆಗಿದ್ದೇನು?
ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಮಾಜಿ ಪ್ರೇಯಸಿ ಎಂಟ್ರಿ; ಮುಂದೆ ಕಲ್ಯಾಣ ಮಂಟಪದ ಮುಂಭಾಗ ಯುವತಿಯ ಹೈಡ್ರಾಮ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 05, 2024 | 1:16 PM

Share

ಮಂಗಳೂರು, ಜ.5: ತನ್ನಗೆ ಮೋಸ ಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟ ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ.

ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ. ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

ಇದನ್ನೂ ಓದಿ: ಪ್ರೀತಿಸಿ ಕಾರಲ್ಲಿ ಹಾರ ವಿನಿಮಯ ಮಾಡಿಕೊಂಡ ಬಳ್ಳಾರಿಯ ಯುವಕ-ಯುವತಿ ಕೇವಲ 12 ತಾಸುಗಳಲ್ಲಿ ಬೇರ್ಪಟ್ಟರು!

ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ.

ಯುವತಿಯನ್ನು ಕರೆದೊಯ್ದ ಪೊಲೀಸರು, ಮಂಗಳೂರು ಯುವತಿಗೆ ತಾಳಿ ಕಟ್ಟಿದ ಅಕ್ಷಯ್

ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Fri, 5 January 24

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ