AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಒಳಗೆ ಆಂತರಿಕ ಜಗಳ, 3 ತಂಡಗಳಿಂದ ಗಲಾಟೆ ಎಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ನಿನ್ನೆ ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್‌ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​, ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್​ ನಡೆದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಒಳಗೆ ಆಂತರಿಕ ಜಗಳ, 3 ತಂಡಗಳಿಂದ ಗಲಾಟೆ ಎಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Oct 28, 2023 | 3:08 PM

Share

ಮಂಗಳೂರು, ಅಕ್ಟೋಬರ್​​​​​ 28: ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel)​ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ತಂಡ, ಡಿಸಿಎಂ ಡಿಕೆ ಶಿವಕುಮಾರ್ ತಂಡ ಮತ್ತು ಸಚಿವ  ಸತೀಶ್ ಜಾರಕಿಹೊಳಿ ತಂಡ ಕೆಲಸ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್​ ನಡೆದಿದೆ ಎಂದು ಹೇಳಿದ್ದಾರೆ.

ಮುಂದೆಯೂ ರೆಸಾರ್ಟ್ ರಾಜಕಾರಣ ಪ್ರಾರಂಭವಾಗುತ್ತದೆ. ಹಾಗಾಗಿ ಕಾಂಗ್ರೆಸ್​ನ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್ ಹಾಕಲಾಗುತ್ತಿದೆ

ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್​ಗಳನ್ನು ಹಾಕಲಾಗುತ್ತಿದೆ. ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗುತ್ತಿದೆ. ಜನಪ್ರತಿನಿಧಿಗಳ ಮೇಲೂ ಕೇಸ್ ಹಾಕಿ ಅವರ ಹಕ್ಕು ಕಸಿಯಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಿಸಿದ ಎನ್​ಐಎ

ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ‌ ಕೇಸ್​ ಹಾಕಲಾಗಿದೆ. ಸರ್ಕಾರ ಪೊಲೀಸ್ ಇಲಾಖೆ ಬಳಸಿಕೊಂಡು ಎಫ್​ಐಆರ್​​ ದಾಖಲಿಸಿದೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.

ಇದನ್ನೂ ಓದಿ: ‘ಕಲೆಕ್ಷನ್ ಮಾಸ್ಟರ್’ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಪೋಸ್ಟ್: ಶಾಸಕ ಹರೀಶ್ ಪೂಂಜ ವಿರುದ್ಧ FIR

ಸಾಮಾಜಿಕ ಜಾಲತಾಣದಲ್ಲಿ ಬರೆದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ತಿಂಗಳ ಒಳಗೆ ಎರಡನೇ ಎಫ್​ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್​ಗಳು‌ ಜಾಸ್ತಿಯಾಗುತ್ತಿವೆ. ಆದರೆ ದೇಶ ವಿರೋಧಿಗಳ ಮೇಲೆ ಒಂದೇ ಒಂದು ಕೇಸ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.

ಶಾಸಕ ಹರೀಶ್​ ಪೂಂಜ ರಾಜಕೀಯದಲ್ಲಿ ಬಚ್ಚಾ ಎಂದ ಸಿಎಂ ಸಿದ್ದರಾಮಯ್ಯ 

ಕಲೆಕ್ಷನ್ ಮಾಸ್ಟರ್​ ಎಂದು ಬಗ್ಗೆ ಹರೀಶ್​ ಪೂಂಜ ಪೋಸ್ಟ್​ ವಿಚಾರವಾಗಿ ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 1883ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು. ಅಂದಿನಿಂದ ಈವರೆಗೆ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಶಾಸಕ ಹರೀಶ್​ ಪೂಂಜ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಹಿಂದಿನ ಸರ್ಕಾರ ಹಾಗೂ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ತೀವ್ರ ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ