ಕಾಂಗ್ರೆಸ್​ ಒಳಗೆ ಆಂತರಿಕ ಜಗಳ, 3 ತಂಡಗಳಿಂದ ಗಲಾಟೆ ಎಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ನಿನ್ನೆ ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್‌ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​, ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್​ ನಡೆದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಒಳಗೆ ಆಂತರಿಕ ಜಗಳ, 3 ತಂಡಗಳಿಂದ ಗಲಾಟೆ ಎಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Edited By:

Updated on: Oct 28, 2023 | 3:08 PM

ಮಂಗಳೂರು, ಅಕ್ಟೋಬರ್​​​​​ 28: ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel)​ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ತಂಡ, ಡಿಸಿಎಂ ಡಿಕೆ ಶಿವಕುಮಾರ್ ತಂಡ ಮತ್ತು ಸಚಿವ  ಸತೀಶ್ ಜಾರಕಿಹೊಳಿ ತಂಡ ಕೆಲಸ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್​ ನಡೆದಿದೆ ಎಂದು ಹೇಳಿದ್ದಾರೆ.

ಮುಂದೆಯೂ ರೆಸಾರ್ಟ್ ರಾಜಕಾರಣ ಪ್ರಾರಂಭವಾಗುತ್ತದೆ. ಹಾಗಾಗಿ ಕಾಂಗ್ರೆಸ್​ನ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್ ಹಾಕಲಾಗುತ್ತಿದೆ

ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್​ಗಳನ್ನು ಹಾಕಲಾಗುತ್ತಿದೆ. ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗುತ್ತಿದೆ. ಜನಪ್ರತಿನಿಧಿಗಳ ಮೇಲೂ ಕೇಸ್ ಹಾಕಿ ಅವರ ಹಕ್ಕು ಕಸಿಯಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಿಸಿದ ಎನ್​ಐಎ

ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ‌ ಕೇಸ್​ ಹಾಕಲಾಗಿದೆ. ಸರ್ಕಾರ ಪೊಲೀಸ್ ಇಲಾಖೆ ಬಳಸಿಕೊಂಡು ಎಫ್​ಐಆರ್​​ ದಾಖಲಿಸಿದೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.

ಇದನ್ನೂ ಓದಿ: ‘ಕಲೆಕ್ಷನ್ ಮಾಸ್ಟರ್’ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಪೋಸ್ಟ್: ಶಾಸಕ ಹರೀಶ್ ಪೂಂಜ ವಿರುದ್ಧ FIR

ಸಾಮಾಜಿಕ ಜಾಲತಾಣದಲ್ಲಿ ಬರೆದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ತಿಂಗಳ ಒಳಗೆ ಎರಡನೇ ಎಫ್​ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್​ಗಳು‌ ಜಾಸ್ತಿಯಾಗುತ್ತಿವೆ. ಆದರೆ ದೇಶ ವಿರೋಧಿಗಳ ಮೇಲೆ ಒಂದೇ ಒಂದು ಕೇಸ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.

ಶಾಸಕ ಹರೀಶ್​ ಪೂಂಜ ರಾಜಕೀಯದಲ್ಲಿ ಬಚ್ಚಾ ಎಂದ ಸಿಎಂ ಸಿದ್ದರಾಮಯ್ಯ 

ಕಲೆಕ್ಷನ್ ಮಾಸ್ಟರ್​ ಎಂದು ಬಗ್ಗೆ ಹರೀಶ್​ ಪೂಂಜ ಪೋಸ್ಟ್​ ವಿಚಾರವಾಗಿ ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 1883ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು. ಅಂದಿನಿಂದ ಈವರೆಗೆ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಶಾಸಕ ಹರೀಶ್​ ಪೂಂಜ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಹಿಂದಿನ ಸರ್ಕಾರ ಹಾಗೂ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ತೀವ್ರ ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us