AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಬಸ್​ ನಿಲ್ದಾಣದ ಬಳಿ ನೈತಿಕ ಪೊಲೀಸ್ ​​ಗಿರಿ ಪ್ರಕರಣ: ಮೂವರ ಬಂಧನ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರಿದಿದೆ. ಮುಸ್ಲಿಂ ಯುವಕನ ಆಟೋದಲ್ಲಿ ವಿದ್ಯಾರ್ಥಿನಿಯೊಬ್ಬಳು ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಮೂವರು ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ ನಡೆಸಿದ್ದ ಪ್ರಕರಣ ನಡೆದಿತ್ತು.

ಧರ್ಮಸ್ಥಳ ಬಸ್​ ನಿಲ್ದಾಣದ ಬಳಿ ನೈತಿಕ ಪೊಲೀಸ್ ​​ಗಿರಿ ಪ್ರಕರಣ: ಮೂವರ ಬಂಧನ
ಧರ್ಮಸ್ಥಳ ಬಸ್​ ನಿಲ್ದಾಣದ ಬಳಿ ನೈತಿಕ ಪೊಲೀಸ್ ​​ಗಿರಿ ನಡೆಸಿದ ಮೂವರ ಬಂಧನ (ಸಾಂದರ್ಭಿಕ ಚಿತ್ರ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 05, 2023 | 2:51 PM

Share

ಮಂಗಳೂರು, ಆಗಸ್ಟ್ 5: ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಆಟೋದಲ್ಲಿ ಧರ್ಮಸ್ಥಳ (Dharmasthala) ಬಸ್ ನಿಲ್ದಾಣಕ್ಕೆ ಕರೆತಂದ ಮುಸ್ಲಿಂ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಆಟೋ ಚಾಲಕ ಮೊಹಮ್ಮದ್ ಆಶೀಕ್ ನೀಡಿದ ದೂರಿನ ಮೇರೆಗೆ ಅವಿನಾಶ್, ನಂದೀಪ್ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂಬವರನ್ನು ಬಂಧಿಸಲಾಗಿದೆ.

ಬೆಂಗಳೂರು ಮೂಲದ ಹಿಂದೂ ವಿದ್ಯಾರ್ಥಿನಿಯೊಬ್ಬಳು ಆಗಸ್ಟ್ 2 ರ ರಾತ್ರಿ ಊರಿಗೆ ತೆರಳಲು ಮೊಹಮ್ಮದ್ ಆಶೀಕ್ ಎಂಬಾತನ ಆಟೋದಲ್ಲಿ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ಈ ವೇಳೆ ಅಡ್ಡಗಡ್ಡಿದ ಯುವಕರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಘಟನೆ ನಂತರ ಪೊಲೀಸ್ ಠಾಣೆಗೆ ತೆರಳಿದ ಆಶೀಕ್, ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ಆಗಲಿದೆ ಧರ್ಮಸ್ಥಳದ ಸೌಜನ್ಯ ಸಾವಿನ ಕಥೆ? ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಆಶೀಕ್ ದೂರಿನ ಅನ್ವಯ ಧರ್ಮಸ್ಥಳ ಠಾಣಾ ಪೊಲೀಸರು ಐಪಿಸಿ ಸೆಕ್ಷನ್ 143, 147, 341, 323, 307, 395, 153(ಎ), 504, 506ರ ಜೊತೆಗೆ 149ರ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಅದರಂತೆ ಮೂವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?