ಧರ್ಮಸ್ಥಳ ಬಸ್​ ನಿಲ್ದಾಣದ ಬಳಿ ನೈತಿಕ ಪೊಲೀಸ್ ​​ಗಿರಿ ಪ್ರಕರಣ: ಮೂವರ ಬಂಧನ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರಿದಿದೆ. ಮುಸ್ಲಿಂ ಯುವಕನ ಆಟೋದಲ್ಲಿ ವಿದ್ಯಾರ್ಥಿನಿಯೊಬ್ಬಳು ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಮೂವರು ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ ನಡೆಸಿದ್ದ ಪ್ರಕರಣ ನಡೆದಿತ್ತು.

ಧರ್ಮಸ್ಥಳ ಬಸ್​ ನಿಲ್ದಾಣದ ಬಳಿ ನೈತಿಕ ಪೊಲೀಸ್ ​​ಗಿರಿ ಪ್ರಕರಣ: ಮೂವರ ಬಂಧನ
ಧರ್ಮಸ್ಥಳ ಬಸ್​ ನಿಲ್ದಾಣದ ಬಳಿ ನೈತಿಕ ಪೊಲೀಸ್ ​​ಗಿರಿ ನಡೆಸಿದ ಮೂವರ ಬಂಧನ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Aug 05, 2023 | 2:51 PM

ಮಂಗಳೂರು, ಆಗಸ್ಟ್ 5: ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಆಟೋದಲ್ಲಿ ಧರ್ಮಸ್ಥಳ (Dharmasthala) ಬಸ್ ನಿಲ್ದಾಣಕ್ಕೆ ಕರೆತಂದ ಮುಸ್ಲಿಂ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಆಟೋ ಚಾಲಕ ಮೊಹಮ್ಮದ್ ಆಶೀಕ್ ನೀಡಿದ ದೂರಿನ ಮೇರೆಗೆ ಅವಿನಾಶ್, ನಂದೀಪ್ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂಬವರನ್ನು ಬಂಧಿಸಲಾಗಿದೆ.

ಬೆಂಗಳೂರು ಮೂಲದ ಹಿಂದೂ ವಿದ್ಯಾರ್ಥಿನಿಯೊಬ್ಬಳು ಆಗಸ್ಟ್ 2 ರ ರಾತ್ರಿ ಊರಿಗೆ ತೆರಳಲು ಮೊಹಮ್ಮದ್ ಆಶೀಕ್ ಎಂಬಾತನ ಆಟೋದಲ್ಲಿ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ಈ ವೇಳೆ ಅಡ್ಡಗಡ್ಡಿದ ಯುವಕರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಘಟನೆ ನಂತರ ಪೊಲೀಸ್ ಠಾಣೆಗೆ ತೆರಳಿದ ಆಶೀಕ್, ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ಆಗಲಿದೆ ಧರ್ಮಸ್ಥಳದ ಸೌಜನ್ಯ ಸಾವಿನ ಕಥೆ? ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಆಶೀಕ್ ದೂರಿನ ಅನ್ವಯ ಧರ್ಮಸ್ಥಳ ಠಾಣಾ ಪೊಲೀಸರು ಐಪಿಸಿ ಸೆಕ್ಷನ್ 143, 147, 341, 323, 307, 395, 153(ಎ), 504, 506ರ ಜೊತೆಗೆ 149ರ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಅದರಂತೆ ಮೂವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us