AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ನೊಂದಿಗೆ ಐತಿಹಾಸಿಕ ಕದ್ರಿ ದೇಗುಲದ ಆವರಣಕ್ಕೆ ನುಗ್ಗಿದ ಮುಸ್ಲಿಂ ಯುವಕರು; ವಶಕ್ಕೆ ಪಡೆದು ಪೊಲೀಸರ ವಿಚಾರಣೆ

ಮೂವರು ಯುವಕರು ಬೈಕ್​ನೊಂದಿಗೆಯೇ ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಅನುಮಾನಾಸ್ಪದವಾಗಿ ದೇಗುಲ ಪ್ರವೇಶಿಸಿದವರನ್ನು ಸ್ಥಳೀಯರು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೈಕ್‌ನೊಂದಿಗೆ ಐತಿಹಾಸಿಕ ಕದ್ರಿ ದೇಗುಲದ ಆವರಣಕ್ಕೆ ನುಗ್ಗಿದ ಮುಸ್ಲಿಂ ಯುವಕರು; ವಶಕ್ಕೆ ಪಡೆದು ಪೊಲೀಸರ ವಿಚಾರಣೆ
ಯುವಕರು ಬಂದ ಬೈಕ್ ಹಾಗೂ ಕದ್ರಿ ದೇವಸ್ಥಾನ
Follow us
ಆಯೇಷಾ ಬಾನು
|

Updated on:May 12, 2023 | 7:49 AM

ಮಂಗಳೂರು: ಮಂಗಳೂರಿನ‌ ಪುರಾಣ ಪ್ರಸಿದ್ದ, ಐತಿಹಾಸಿಕ ಕದ್ರಿ ದೇಗುಲಕ್ಕೆ(Kadri Shree Manjunatha Temple) ಅಪರಿಚಿತರು ಬೈಕ್‌ನೊಂದಿಗೆ ನುಗ್ಗಿರುವ ಘಟನೆ ನಡೆದಿದೆ. ಮೂವರು ಯುವಕರು ಬೈಕ್​ನೊಂದಿಗೆಯೇ ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಅನುಮಾನಾಸ್ಪದವಾಗಿ ದೇಗುಲ ಪ್ರವೇಶಿಸಿದವರನ್ನು ಸ್ಥಳೀಯರು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್‌, ಜಾಫರ್‌, ಫಾರೂಕ್‌ನನ್ನು ಕದ್ರಿ ಪೊಲೀಸರಿಗೆ ಒಪ್ಪಿಸಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕದ್ರಿ ಠಾಣೆಯಲ್ಲಿ ವಶಕ್ಕೆ ಪಡೆದಿರುವವರ ತೀವ್ರ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಶಂಕಿತ ಉಗ್ರ ಶಾರಿಕ್‌ ಕದ್ರಿ ದೇಗುಲ ಟಾರ್ಗೆಟ್‌ ಮಾಡಿದ್ದ. ಕದ್ರಿ‌ ದೇಗುಲದ ಆವರಣದಲ್ಲಿ ಬಾಂಬ್‌ ಸ್ಫೋಟಕ್ಕೆ ಸಂಚು ರೂಪಿಸಿದ್ದ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಲಾಗುತ್ತಿದೆ.

ಕದ್ರಿ ಟಾರ್ಗೆಟ್ ಮಾಡಿದ್ದ ಶಾರಿಕ್

ಕಳೆದ ವರ್ಷ ನಡೆದ ಮಂಗಳೂರು ಆಟೋ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರಿಕ್ ತಾನು ಮುಸ್ಲಿಮನಾಗಿದ್ರೂ ತನ್ನ ಕುಕ್ಕೃತ್ಯಗಳನ್ನ ಸಾಧಿಸೋಕೆ ಅಪ್ಪಟ ಹಿಂದೂ ವೇಶ ಹಾಕಿದ್ದ. ಹಿಂದೂಗಳ ರೀತಿ ವೇಷ ಹಾಕಿಕೊಂಡು ಕರಾವಳಿ ಭಾಗದ 3 ಪ್ರಸಿದ್ಧ ದೇವಾಲಯಗಳನ್ನು ಟಾರ್ಗೆಟ್​ ಮಾಡಿದ್ದ. ಈ ಪೈಕಿ ಕದ್ರಿಯ ದೇಗುಲವೂ ಒಂದು.

ಇದನ್ನೂ ಓದಿ: ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಮಂಗಳೂರಿನ ಕದ್ರಿಯ ಮಂಜುನಾಥಸ್ವಾಮಿ ದೇವಸ್ಥಾನದ ಲಕ್ಷ ದೀಪೋತ್ಸವದಲ್ಲಿ ಬಾಂಬ್ ಸ್ಫೋಟಿಸಲು ಶಾರಿಕ್ ಪ್ಲ್ಯಾನ್ ಮಾಡಿದ್ದನಂತೆ. ಕುದ್ರೋಳಿಯಲ್ಲಿರುವ ಗೋಕರ್ಣನಾಥೇಶ್ವರ ದೇಗುಲ ಹಾಗೂ ಮಂಗಳಾದೇವಿ ದೇವಾಲಯಕ್ಕೂ ಸ್ಕೆಚ್ ಹಾಕಿದ್ದ ಎಂಬ ಬಗ್ಗೆ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಶಿವನ ಡಿಪಿ ಬೆನ್ನತ್ತಿದಾಗ ಶಂಕಿತ ಉಗ್ರ ಶಾರಿಕ್ ಸಂಚು ಬಯಲಾಗಿತ್ತು. ಸದ್ಯ ಉಗ್ರ ಶಾರಿಕ್​ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ಸ್ಫೋಟ ಸಂಭವಿಸಿದ್ದರೆ ಸಾಕಷ್ಟು ಅಮಾಯಕರಿಗೆ ತೊಂದರೆ ಆಗುತ್ತಿತ್ತು

ಶಂಕಿತ ಉಗ್ರ ಶಾರಿಕ್​ನಿಂದ ಹಿಂದೂ ದೇಗುಲಗಳ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿ ಕದ್ರಿ ಮಂಜುನಾಥ ದೇಗುಲ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರದೀಪ್​ ಕುಮಾರ್ ಕಲ್ಕೂರ ಪ್ರತಿಕ್ರಿಯೆ ನೀಡಿದ್ದು ಮಂಜುನಾಥನ ಶಕ್ತಿ ಅವನ ಕೃತ್ಯಕ್ಕೆ ತಡೆ ನೀಡಿದೆ. ಸ್ಫೋಟ ಸಂಭವಿಸಿದ್ದರೆ ಸಾಕಷ್ಟು ಅಮಾಯಕರಿಗೆ ತೊಂದರೆ ಆಗುತ್ತಿತ್ತು. ಅವನಿಗೆ ಯಾಕೆ ಈ ಮನಸ್ಥಿತಿ ಬಂತೋ ನನಗೆ ಗೊತ್ತಿಲ್ಲ. ಮಂಜುನಾಥನ ಸಾನಿಧ್ಯದಲ್ಲಿ ಅಂತಹ ಅವಘಡ ನಡೆಯಲು ಬಿಡಲ್ಲ. ಇಲ್ಲಿನ ಮಂಜುನಾಥನ ಬೆಳಕಿನಲ್ಲಿ ಕತ್ತಲು ಕವಿಯಲು ಸಾಧ್ಯವಿಲ್ಲ ಎಂದಿದ್ದರು.

ಕದ್ರಿ ದೇಗುಲಕ್ಕೆ ಅಪರಿಚಿತರು ಬೈಕ್‌ನೊಂದಿಗೆ ನುಗ್ಗಿರುವುದರಿಂದ ಹಲವು ಅನುಮಾನಗಳು ವ್ಯಕ್ತವಾಗಿವೆ. ಅಲ್ಲದೆ ದಿ ಕೆರಳಾ ಸ್ಟೋರಿ ಸಿನಿಮಾ, ಚುನಾವಣೆಗಳು ನಡೆದಿರುವುದರಿಂದ ನಾನಾ ಆಯಾಮಗಳಲ್ಲಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:06 am, Fri, 12 May 23

ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ