AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಎರಡು ಸಾವಿರ ನೀಡುವ ವಿಚಾರದಲ್ಲಿ ನಡೆದ ಮಾತುಕತೆ ವಿಕೋಪಕ್ಕೆ ತಿರುಗಿ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು
ಕೊಲೆಯಾದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್
ಅಶೋಕ್​ ಪೂಜಾರಿ
| Edited By: Rakesh Nayak Manchi|

Updated on:Nov 07, 2023 | 1:13 PM

Share

ಮಂಗಳೂರು, ನ.7: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು (Puttur) ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆಯಾದ ಯುವಕ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

ಸದ್ಯ ಪೊಲೀಸರು ಬನ್ನೂರು ನಿವಾಸಿ ಮನೀಷ್, ಚೇತು, ಮಂಜ, ಕೇಶವ ಎಂಬವರನ್ನು ಬಂಧಿಸಿದ್ದಾರೆ.  ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿದೆ.

ಇದನ್ನೂ ಓದಿ: ಕೋಲಾರ: ಎರಡು ಕುಟುಂಬಗಳ ಜಗಳ ಕೊಲೆಯಲ್ಲಿ ಅಂತ್ಯ; ಹತ್ಯೆ ಹಿಂದಿನ ಮಾಸ್ಟರ್‌ ಮೈಂಡ್​ಗೆ ಗುಂಡೇಟು

ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡವು ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್​ನಲ್ಲಿ ಅಕ್ಷಯ್​ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಾಗುತ್ತಿದೆ. ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವವನ್ನು ಅಕ್ಷಯ್ ವಹಿಸಿಕೊಂಡಿದ್ದನು.

ದೂರುದಾರ ವಿಖ್ಯಾತ್ ಹಾಗೂ ಆರೋಪಿ ಚೇತನ್ ಚಲಾಯಿಸುತ್ತಿದ್ದ ಬಸ್ಸಿನ ನಡುವೆ ಅಪಘಾತ ನಡೆದಿ್ತು. ಈ ವಿಚಾರದಲ್ಲಿ ಅಕ್ಷಯ್ ಹಾಗೂ ಆರೋಪಿಗಳಾದ ಮನೀಶ್, ಚೇತನ್ ಜೊತೆ ಫೋನ್ ಮೂಲಕ ಮಾತಿನ ಚಕಮಕಿ ನಡೆದಿತ್ತು. ರಾತ್ರಿ ವೇಳೆ ನೆಹರುನಗರದ ಎಟಿಎಂ ಬಳಿ ಅಕ್ಷಯ್ ಹಾಗೂ ವಿಖ್ಯಾತ್ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಆರೋಪಿಗಳು ಜಗಳ ಆರಂಭಿಸಿದ್ದಾರೆ. ಈ ವೇಳೆ ತಾವು ತಂದಿದ್ದ ಎರಡು ತಲಾವಾರು ಮೂಲಕ ಅಕ್ಷಯ್​ ಮೇಲೆ ಹಲ್ಲೆ ನಡೆಸಿದ್ದು, ವಿಖ್ಯಾತ್ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 7 November 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?