ದುರಂತ ವಿದ್ಯಮಾನ: ಮಂಗಳೂರಿನ ಜೀವನದಿ ಫಲ್ಗುಣಿ ವಿಷವಾಗುತ್ತಿದೆ -ಯಾಕೆ, ಏನಾಯ್ತು?

ಮಂಗಳೂರಿನ ಫಲ್ಗುಣಿ ನದಿ ಮಲಿನವಾಗುತ್ತಿರುವುದು ದುರಂತವೇ ಸರಿ. ಆದರೆ ಇದು ಯಾವುದೋ ಕೈಗಾರಿಕೆಯಿಂದ ಬರುತ್ತಿರೋ ತ್ಯಾಜ್ಯ ನೀರಲ್ಲ. ಬದಲಾಗಿ ಮಂಗಳೂರು ಪಾಲಿಕೆಯ ಪಚ್ಚನಾಡಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಬಂದು ಸೇರುತ್ತಿರುವ ತ್ಯಾಜ್ಯ ನೀರು. ಈ ಬಗ್ಗೆ ಪಾಲಿಕೆಗೆ 30 ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ್ದರೂ ಯಾವುದೇ ಕ್ರಮವನ್ನು ಪಾಲಿಕೆ ತೆಗೆದುಕೊಂಡಿಲ್ಲ.

ದುರಂತ ವಿದ್ಯಮಾನ: ಮಂಗಳೂರಿನ ಜೀವನದಿ ಫಲ್ಗುಣಿ ವಿಷವಾಗುತ್ತಿದೆ -ಯಾಕೆ, ಏನಾಯ್ತು?
ದುರಂತ ವಿದ್ಯಮಾನ: ಮಂಗಳೂರಿನ ಜೀವನದಿ ಫಲ್ಗುಣಿ ವಿಷವಾಗುತ್ತಿದೆ
Follow us
| Updated By: ಸಾಧು ಶ್ರೀನಾಥ್​

Updated on: Feb 07, 2024 | 2:52 PM

ಅದು ಮಂಗಳೂರಿನ ಜೀವನದಿ ಫಲ್ಗುಣಿ. ಆದ್ರೆ ಇದೀಗ ಆ ನದಿಯ ನೀರು ವಿಷವಾಗುತ್ತಿದೆ (poison). ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಸಂಸ್ಕರಿಸದೇ ತ್ಯಾಜ್ಯ ನೀರನ್ನು ನೇರವಾಗಿ ಬಿಡುತ್ತಿರುವುದರಿಂದ ಜಲಚರಗಳ ಸಾವಿಗೆ ಕಾರಣವಾಗುವ ಜೊತೆ ನದಿ ಪೂರ್ತಿ ಮಲಿನವಾಗುತ್ತಿದೆ. ಈ ಬಗ್ಗೆ ಇಲ್ಲಿದೆ ಒಂದು ಕಂಪ್ಲೀಟ್ ರಿಪೋರ್ಟ್. ಒಂದು ಕಡೆ ಪೈಪ್ ಮೂಲಕ ಹರಿಯುತ್ತಿರುವ ಕಲುಷಿತ ನೀರಿನಲ್ಲಿ ಉಕ್ಕುತ್ತಿರುವ ನೊರೆ. ಇನ್ನೊಂದು ಕಡೆ ನದಿಗೆ ಸೇರುತ್ತಿರುವ ಅದೇ ವಿಷಕಾರಿ ನೀರು. ಇದು ಮಂಗಳೂರಿನ ಫಲ್ಗುಣಿ ನದಿ (Phalguni river) ಮಲಿನವಾಗುತ್ತಿರುವ ದುರಂತ ವಿದ್ಯಮಾನಗಳು. ಇದು ಯಾವುದೋ ಕೈಗಾರಿಕೆಯಿಂದ ಬರುತ್ತಿರೋ ತ್ಯಾಜ್ಯ ನೀರಲ್ಲ. ಬದಲಾಗಿ ಮಂಗಳೂರು ಮಹಾನಗರ ಪಾಲಿಕೆಯ (Mangaluru City Corporation) ಪಚ್ಚನಾಡಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಬಂದು ಸೇರುತ್ತಿರುವ ತ್ಯಾಜ್ಯ ನೀರು.

ಇಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸದೇ ನೇರವಾಗಿ ನದಿಗೆ ಬಿಡಲಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅರಣ್ಯ ಜೀವಿಶಾಸ್ತ್ರ, ಪರಿಸರ ಸಚಿವ ಈಶ್ವರ ಖಂಡ್ರೆಗೂ ಸೊಸೈಟಿ ಫಾರ್ ಫಾರೆಸ್ಟ್ ಎನ್ವಿರಾಮೆಂಟ್ & ಕ್ಲೈಮೇಟ್ ಚೇಂಜ್ ಸಂಘಟನೆ ದೂರು ನೀಡಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಬಂದು ತ್ಯಾಜ್ಯ ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಂಗಳೂರಿನ ಪಚ್ಚನಾಡಿಯಲ್ಲಿ ತ್ಯಾಜ್ಯನೀರು ಸಂಸ್ಕರಣ ಘಟಕವಿದೆ. ಈ ಘಟಕಕ್ಕೆ ಮಂಗಳೂರು ನಗರದ ಶೌಚಯುಕ್ತ ಕೊಳಚೆ ನೀರು ಬಂದು ಬೀಳುತ್ತದೆ. ಈ ನೀರನ್ನು ಶುದ್ದಿಕರಿಸಿ ಬಿಡಬೇಕಾದುದು ಪಾಲಿಕೆಯ ಕರ್ತವ್ಯ. ಆದ್ರೆ ಇಲ್ಲಿ ಈ ಕೊಳಚೆ ನೀರನ್ನು ಶುದ್ದಿಕರೀಸದೆ ನೇರವಾಗಿ ಹರಿಯುವ ನೀರಿಗೆ ಬಿಡಲಾಗುತ್ತಿದೆ ಎಂಬ ಆರೋಪ ಪರಿಸರವಾದಿಗಳದ್ದು. ಈ ಹಿಂದೆ ತೆರೆದ ತೋಡಿಗೆ ಈ ತ್ಯಾಜ್ಯ ನೀರನ್ನು ಬಿಡಲಾಗುತ್ತಿತ್ತು.

ಇದು ನೇರವಾಗಿ 11 ಗ್ರಾಮಗಳಿಗೆ ಕುಡಿಯುವ ನೀರುಣಿಸುವ ಮರವೂರು ಡ್ಯಾಂಗೆ ಸೇರುತಿತ್ತು. ಜನರ ವಿರೋಧದ ಬಳಿಕ ಪೈಪ್ ಮೂಲಕ ಡ್ಯಾಂನ ಮುಂದೆ ಹರಿಯುವ ವ್ಯವಸ್ಥೆಯನ್ನು ಸದ್ಯ ಮಾಡಲಾಗಿದೆ. ಆದ್ರೆ ಈಗಲೂ ಶುದ್ದೀಕರಿಸದೇ ತ್ಯಾಜ್ಯ ನೀರನ್ನು ಬಿಡಲಾಗುತ್ತಿದೆ. ಇದರಿಂದ ಪಲ್ಗುಣಿ ನದಿ ಮಲಿನವಾಗಿ ಮತ್ಸ್ಯ ಸಂಕುಲವೂ ನಾಶವಾಗುತ್ತಿದೆ. ಈ ಬಗ್ಗೆ ಪಾಲಿಕೆಗೆ 30ಕ್ಕೂ ಹೆಚ್ಚು ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ್ರು ಯಾವುದೇ ಕ್ರಮವನ್ನು ಪಾಲಿಕೆ ತೆಗೆದುಕೊಂಡಿಲ್ಲ.

ಒಟ್ಟಿನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಎಷ್ಟು ನೀರು ಸಂಸ್ಕರಣೆ ಆಗುತ್ತೆ, ಹೇಗೆ ಆಗುತ್ತೆ ಎಂಬುದರ ಬಗ್ಗೆ ಸಮಗ್ರ ಪರಿಶೀಲನೆ ಆಗಬೇಕಿದೆ. ಈ ಬಗ್ಗೆ ಪಾಲಿಕೆ ನಿರ್ಲಕ್ಷ್ಯ ತೋರಿದ್ರೆ ದಂಡ ವಿಧಿಸಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಂಡು ನದಿ ಇನ್ನಷ್ಟು ಮಲಿನವಾಗದಂತೆ ಗಮನಹರಿಸಬೇಕಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾರತದ ವಿಶ್ವಕಪ್ ಹೀರೋಗೆ ಹುಟ್ಟುಹಬ್ಬದ ಶುಭಾಶಯಗಳು
ಭಾರತದ ವಿಶ್ವಕಪ್ ಹೀರೋಗೆ ಹುಟ್ಟುಹಬ್ಬದ ಶುಭಾಶಯಗಳು
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ