AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Education Summit 2022: ಮಂಗಳೂರಿನಲ್ಲಿ ಜುಲೈ 09,10ಕ್ಕೆ ಟಿವಿ9 ಎಜುಕೇಶನ್ ಸಮ್ಮಿಟ್-2022

ಪಿಯುಸಿ ನಂತರದ ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಭೇಟಿ ನೀಡಿ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ.

Tv9 Education Summit 2022: ಮಂಗಳೂರಿನಲ್ಲಿ ಜುಲೈ 09,10ಕ್ಕೆ ಟಿವಿ9 ಎಜುಕೇಶನ್ ಸಮ್ಮಿಟ್-2022
TV9 education Summit 2022 in Mangalore
TV9 Web
| Edited By: |

Updated on: Jul 08, 2022 | 4:00 PM

Share

ಮಂಗಳೂರು: ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟಿವಿ9 ಎಜುಕೇಶನ್ ಸಮ್ಮಿಟ್-2022 (Education Summit-2022) ನಡೆಸಿದ್ದ ಟಿವಿ9 ಕನ್ನಡ ವಾಹಿನಿಯು ಅದೇ ಕಾರ್ಯಕ್ರಮವನ್ನು ಮಂಗಳೂರಿನಲ್ಲಿ ಜುಲೈ 09 ಮತ್ತು 10ರಂದು (ಶನಿವಾರ ಮತ್ತು ಭಾನುವಾರ) ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಆಯೋಜಿಸಿದೆ. ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ ಎಜುಕೇಶನ್ ಸಮ್ಮಿಟ್ ಉದ್ಘಾಟಿಸಲಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶವಿದೆ. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸಮ್ಮಿಟ್​ನಲ್ಲಿ ಭಾಗವಹಿಸುತ್ತಿವೆ. ಟಿವಿ9 ವತಿಯಿಂದ 5ನೇ ಬಾರಿಗೆ ಎಜುಕೇಷನ್ ಎಕ್ಸ್‌ಪೋ ನಡೆಸುತ್ತಿದ್ದು, ಒಂದೇ ವೇದಿಕೆಯಲ್ಲಿ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತದೆ. ಟಿವಿ9 ಎಕ್ಸ್‌ಪೋನಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆ ಮಾಡಲಾಗುತ್ತದೆ. 2 ದಿನಗಳ ಕಾಲ ನಡೆಯುವ ಸಮ್ಮಿಟ್​ಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿಂದು ಎರಡನೇ ದಿನದ ಟಿವಿ9 ಎಜುಕೇಷನ್ ಸಮಿಟ್; ನೇರ ದೃಶ್ಯಾವಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಯುಸಿ ನಂತರದ ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಭೇಟಿ ನೀಡಿ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ. ಜೊತೆಗೆ ಎಕ್ಸ್​​​ಪೋದಲ್ಲಿ ಭಾಗವಹಿಸಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕಲ್ ಬೈಕ್, ಸ್ಮಾರ್ಟ್​​ಫೋನ್ ಹಾಗೂ ಗಿಫ್ಟ್ ವೋಚರ್​​​ಗಳನ್ನು ಸಹ ಗೆಲ್ಲಬಹುದುದಾಗಿದೆ.

ಇದನ್ನೂ ಓದಿ: ಟಿವಿ9 ಎಜ್ಯುಕೇಷನ್​​​ ಎಕ್ಸ್​​ಪೋ ಸಂಚಾರಿ ಪೊಲೀಸ್ ಜಂಟಿ ಆಯುಕ್ತ ಬಿ.ಆರ್ ರವಿಕಾಂತೇಗೌಡ ಭಾಗಿ

ಟಿವಿ9 ಎಜ್ಯುಕೇಷನ್​​​ ಎಕ್ಸ್​​ಪೋ ದೇಶದಾದ್ಯಂತದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳನ್ನು ಸಂಪರ್ಕಿಸುವ ಒಂದು ಅತಿ ದೊಡ್ಡ ವೇದಿಕೆಯನ್ನು ಒದಗಿಸುತ್ತಿದೆ. ಈ ಎಜ್ಯುಕೇಷನ್​​​ ಎಕ್ಸ್​​ಪೋವು ಚರ್ಚೆಗಳು, ಸಂವಾದಾತ್ಮಕ ವಿಚಾರಗಳು, ವೃತ್ತಿ ಸಮಾಲೋಚನೆ ಮತ್ತು ಉದ್ಯಮದ ಕುರಿತಾಗಿ ತಜ್ಞರ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿಗಳಿಗೆ ತಿಳಿಸುವ ಮತ್ತು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್