AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Education Summit 2022: ಮಂಗಳೂರಿನಲ್ಲಿ ಜುಲೈ 09,10ಕ್ಕೆ ಟಿವಿ9 ಎಜುಕೇಶನ್ ಸಮ್ಮಿಟ್-2022

ಪಿಯುಸಿ ನಂತರದ ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಭೇಟಿ ನೀಡಿ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ.

Tv9 Education Summit 2022: ಮಂಗಳೂರಿನಲ್ಲಿ ಜುಲೈ 09,10ಕ್ಕೆ ಟಿವಿ9 ಎಜುಕೇಶನ್ ಸಮ್ಮಿಟ್-2022
TV9 education Summit 2022 in Mangalore
TV9 Web
| Edited By: |

Updated on: Jul 08, 2022 | 4:00 PM

Share

ಮಂಗಳೂರು: ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟಿವಿ9 ಎಜುಕೇಶನ್ ಸಮ್ಮಿಟ್-2022 (Education Summit-2022) ನಡೆಸಿದ್ದ ಟಿವಿ9 ಕನ್ನಡ ವಾಹಿನಿಯು ಅದೇ ಕಾರ್ಯಕ್ರಮವನ್ನು ಮಂಗಳೂರಿನಲ್ಲಿ ಜುಲೈ 09 ಮತ್ತು 10ರಂದು (ಶನಿವಾರ ಮತ್ತು ಭಾನುವಾರ) ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಆಯೋಜಿಸಿದೆ. ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ ಎಜುಕೇಶನ್ ಸಮ್ಮಿಟ್ ಉದ್ಘಾಟಿಸಲಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶವಿದೆ. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸಮ್ಮಿಟ್​ನಲ್ಲಿ ಭಾಗವಹಿಸುತ್ತಿವೆ. ಟಿವಿ9 ವತಿಯಿಂದ 5ನೇ ಬಾರಿಗೆ ಎಜುಕೇಷನ್ ಎಕ್ಸ್‌ಪೋ ನಡೆಸುತ್ತಿದ್ದು, ಒಂದೇ ವೇದಿಕೆಯಲ್ಲಿ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತದೆ. ಟಿವಿ9 ಎಕ್ಸ್‌ಪೋನಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆ ಮಾಡಲಾಗುತ್ತದೆ. 2 ದಿನಗಳ ಕಾಲ ನಡೆಯುವ ಸಮ್ಮಿಟ್​ಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿಂದು ಎರಡನೇ ದಿನದ ಟಿವಿ9 ಎಜುಕೇಷನ್ ಸಮಿಟ್; ನೇರ ದೃಶ್ಯಾವಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಯುಸಿ ನಂತರದ ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಭೇಟಿ ನೀಡಿ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ. ಜೊತೆಗೆ ಎಕ್ಸ್​​​ಪೋದಲ್ಲಿ ಭಾಗವಹಿಸಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕಲ್ ಬೈಕ್, ಸ್ಮಾರ್ಟ್​​ಫೋನ್ ಹಾಗೂ ಗಿಫ್ಟ್ ವೋಚರ್​​​ಗಳನ್ನು ಸಹ ಗೆಲ್ಲಬಹುದುದಾಗಿದೆ.

ಇದನ್ನೂ ಓದಿ: ಟಿವಿ9 ಎಜ್ಯುಕೇಷನ್​​​ ಎಕ್ಸ್​​ಪೋ ಸಂಚಾರಿ ಪೊಲೀಸ್ ಜಂಟಿ ಆಯುಕ್ತ ಬಿ.ಆರ್ ರವಿಕಾಂತೇಗೌಡ ಭಾಗಿ

ಟಿವಿ9 ಎಜ್ಯುಕೇಷನ್​​​ ಎಕ್ಸ್​​ಪೋ ದೇಶದಾದ್ಯಂತದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳನ್ನು ಸಂಪರ್ಕಿಸುವ ಒಂದು ಅತಿ ದೊಡ್ಡ ವೇದಿಕೆಯನ್ನು ಒದಗಿಸುತ್ತಿದೆ. ಈ ಎಜ್ಯುಕೇಷನ್​​​ ಎಕ್ಸ್​​ಪೋವು ಚರ್ಚೆಗಳು, ಸಂವಾದಾತ್ಮಕ ವಿಚಾರಗಳು, ವೃತ್ತಿ ಸಮಾಲೋಚನೆ ಮತ್ತು ಉದ್ಯಮದ ಕುರಿತಾಗಿ ತಜ್ಞರ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿಗಳಿಗೆ ತಿಳಿಸುವ ಮತ್ತು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್