AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರದ ಅಲೆಗಳಿಗೆ ಸಿಲುಕಿದ್ದ ಯುವಕ, ಪ್ರಾಣ ಒತ್ತೆಯಿಟ್ಟು ರಕ್ಷಿಸಿದ ಮೀನುಗಾರರು

ಮಂಗಳೂರು: ಹರೆಯದ ಹುಚ್ಚು ಮನಸ್ಸು, ಹಿರಿಯರ ಎಚ್ಚರಿಕೆ ಮತ್ತು ಬುದ್ದಿವಾದಕ್ಕೆ ಬೆಲೆ ಕೊಡದೆ ಸಮುದ್ರಕ್ಕಿಳಿದು ಅಲೆಗಳಿಗೆ ಸಿಲುಕಿ ಪ್ರಾಣಕಳೆದುಕೊಳ್ಳುತ್ತಿದ್ದವರನ್ನ ಪ್ರಾಣದ ಹಂಗು ತೊರೆದು ರಕ್ಷಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಹೌದು, ಮಂಗಳೂರಿನ ಹೊರವಲಯದ ಸುರತ್ಕಲ್‌ ಮತ್ತು ಪುತ್ತೂರಿನಿಂದ ಬಂದಿದ್ದ ಯುವಕರ ತಂಡ ತನ್ನ ಮಂಗನಾಟ ಮೆರೆದಿದೆ. ಸುರತ್ಕಲ್‌ನ ಗೊಡ್ಲೆಕೊಪ್ಪ ಸಮುದ್ರ ಕಿನಾರೆಯಲ್ಲಿ ಸ್ಥಳೀಯರು ಮತ್ತು ಮೀನುಗಾರರ ಎಚ್ಚರಿಕೆಯ ನಡುವೆಯೂ ಸಮುದ್ರಕ್ಕಿಳಿದಿದ್ದಾರೆ. ಆದ್ರೆ ಸಿಕ್ಕಾಪಟ್ಟೆ ಬೀಸುತ್ತಿದ್ದ ಗಾಳಿಯಿಂದಾಗಿ ಸಮುದ್ರದಲ್ಲಿ ವಿಪರೀತ ಅಲೆಗಳು ಎದ್ದಿವೆ. ಪರಿಣಾಮ ನೀರಿಗಿಳಿದಿದ್ದ ಆರು ಯುವಕರ […]

ಸಮುದ್ರದ ಅಲೆಗಳಿಗೆ ಸಿಲುಕಿದ್ದ ಯುವಕ, ಪ್ರಾಣ ಒತ್ತೆಯಿಟ್ಟು ರಕ್ಷಿಸಿದ ಮೀನುಗಾರರು
Guru
| Edited By: |

Updated on:Jun 28, 2020 | 8:45 PM

Share

ಮಂಗಳೂರು: ಹರೆಯದ ಹುಚ್ಚು ಮನಸ್ಸು, ಹಿರಿಯರ ಎಚ್ಚರಿಕೆ ಮತ್ತು ಬುದ್ದಿವಾದಕ್ಕೆ ಬೆಲೆ ಕೊಡದೆ ಸಮುದ್ರಕ್ಕಿಳಿದು ಅಲೆಗಳಿಗೆ ಸಿಲುಕಿ ಪ್ರಾಣಕಳೆದುಕೊಳ್ಳುತ್ತಿದ್ದವರನ್ನ ಪ್ರಾಣದ ಹಂಗು ತೊರೆದು ರಕ್ಷಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ.

ಹೌದು, ಮಂಗಳೂರಿನ ಹೊರವಲಯದ ಸುರತ್ಕಲ್‌ ಮತ್ತು ಪುತ್ತೂರಿನಿಂದ ಬಂದಿದ್ದ ಯುವಕರ ತಂಡ ತನ್ನ ಮಂಗನಾಟ ಮೆರೆದಿದೆ. ಸುರತ್ಕಲ್‌ನ ಗೊಡ್ಲೆಕೊಪ್ಪ ಸಮುದ್ರ ಕಿನಾರೆಯಲ್ಲಿ ಸ್ಥಳೀಯರು ಮತ್ತು ಮೀನುಗಾರರ ಎಚ್ಚರಿಕೆಯ ನಡುವೆಯೂ ಸಮುದ್ರಕ್ಕಿಳಿದಿದ್ದಾರೆ. ಆದ್ರೆ ಸಿಕ್ಕಾಪಟ್ಟೆ ಬೀಸುತ್ತಿದ್ದ ಗಾಳಿಯಿಂದಾಗಿ ಸಮುದ್ರದಲ್ಲಿ ವಿಪರೀತ ಅಲೆಗಳು ಎದ್ದಿವೆ. ಪರಿಣಾಮ ನೀರಿಗಿಳಿದಿದ್ದ ಆರು ಯುವಕರ ತಂಡದಲ್ಲಿ ಒಬ್ಬ ಯುವಕ ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಆಳ ನೀರಿನಲ್ಲಿ ಸಿಲುಕಿಕೊಂಡಿದ್ದ. ಸಮುದ್ರದಲೆಗೆ ಸಿಲುಕಿ ಅಂಗಲಾಚುತ್ತಿದ್ದ ಯುವಕ ಅದೃಷ್ಟವಶಾತ್‌ ಸಮುದ್ರದಲ್ಲಿ ಸಿಲುಕಿಕೊಂಡಿದ್ದಾತ ತನ್ನನ್ನು ರಕ್ಷಿಸುವಂತೆ ಅಂಗಲಾಚುತ್ತಿದ್ದ. ಅಲ್ಲಿಯೇ ಇದ್ದ ಕರಾವಳಿ ರಕ್ಷಣಾ ಪಡೆ ಕೂಡಾ ವಿಪರೀತ ಅಲೆಗಳಿದ್ದುದರಿಂದ ಈ ಯುವಕನನ್ನು ರಕ್ಷಿಸಲು ನಿರಾಕರಿಸಿದೆ.

ಪ್ರಾಣ ಪ್ರಾಣಪಣಕ್ಕಿಟ್ಟು ರಕ್ಷಿಸಿದ ಮೀನುಗಾರರು ಆದ್ರೆ ಪ್ರಾಣಕ್ಕಾಗಿ ಅಂಗಲಾಚುತ್ತಿದ್ದ ಯುವಕನ ಆರ್ತನಾದ ಕೇಳಿದ ಸ್ಥಳೀಯ ಮೀನುಗಾರರ ಮನಸ್ಸು ಕರಗಿದೆ. ತಮ್ಮ ಪ್ರಾಣದ ಹಂಗು ತೊರೆದು ಯುವಕನನ್ನು ರಕ್ಷಿಸಲು ಮೀನುಗಾರರಾದ ಶ್ರೀಯಾನ್‌ ಮತ್ತು ಸುಮನ್‌ ಮುಂದಾಗಿದ್ದಾರೆ. ದೊಡ್ಡ ದೊಡ್ಡ ಅಲೆಗಳ ನಡುವೆಯೂ ಸಮುದ್ರಕ್ಕಿಳಿದು ತಮ್ಮ ಪ್ರಾಣ ಪಣಕ್ಕಿಟ್ಟು ಯುವಕನನ್ನು ರಕ್ಷಿಸಿದ್ದಾರೆ.

ಅಪರಿಚಿತನ ಪ್ರಾಣರಕ್ಷಿಸಲು ತಮ್ಮ ಪ್ರಾಣ ಪಣಕ್ಕಿಟ್ಟು ಸಾಹಸ ಮೆರೆದ ಇಬ್ಬರು ಮೀನುಗಾರರಾದ ಶ್ರೀಯಾನ್ ಮತ್ತು ಸುಮನ್ ಅವರ ಧೈರ್ಯಕ್ಕೆ ಈಗ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.

Published On - 7:58 pm, Sun, 28 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!