AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ನಡುವೆ ಮರಾಮಾರಿ: ಇಬ್ಬರು ಕೈದಿಗಳಿಗೆ ಗಂಭೀರ ಗಾಯ

ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದ್ದ, ಘಟನೆಯಲ್ಲಿ ಇಬ್ಬರಿಗ ಗಂಭೀರ ಗಾಯಗಳಾವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ಜೈಲಿನಿಂದ ಆಸ್ಪತೆಗೆ ದಾಖಲಿಸಲಾಗಿದೆ. ಇನ್ನು ಹಲ್ಲೆ ಪ್ರಕರಣ ಸಂಬಂಧ ಏಳು ಆರೋಪಿಗಳ ವಿರುದ್ಧ ಕೇಸ್‌ ದಾಖಲಾಗಿದೆ.

ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ನಡುವೆ ಮರಾಮಾರಿ: ಇಬ್ಬರು ಕೈದಿಗಳಿಗೆ ಗಂಭೀರ ಗಾಯ
ಮಂಗಳೂರು ಜೈಲ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 01, 2024 | 10:39 PM

Share

ಮಂಗಳೂರು, ಜುಲೈ 01): ಮಂಗಳೂರು ಸೆಂಟ್ರಲ್​ ಜೈಲಿನಲ್ಲಿ ಎರಡು ಗುಂಪುಗಳ ನಡುವೆ ಮರಾಮಾರಿಯಾಗಿದೆ. ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಜೈಲಿನಿಂದ ಆಸ್ಪತ್ರಗೆ ದಾಖಲಿಸಲಾಗಿದೆ. ಕೈದಿಗಳಾದ ಉಳ್ಳಾಲದ ಮೊಹಮ್ಮದ್​​​ ಸಮೀರ್​ ಅಲಿಯಾಸ್​​​ ಕಡಪರ ಸಮೀರ್(33) ಮತ್ತು ಬೋಳಿಯಾರ್ ನಿವಾಸಿ ಮೊಹಮ್ಮದ್​​​ ಮನ್ಸೂರ್(30) ಎನ್ನುವರು ಘರ್ಷಣೆ ವೇಳೆ ಗಾಯಗೊಂಡಿದ್ದಾರೆ. ಇಬ್ಬರನ್ನೂ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆ ಸಂಬಂಧ ಜೈಲು ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇಂದು (ಜುಲೈ 01) ಸಂಜೆ 6.30ರಿಂದ 6.45ರ ನಡುವೆ ಜೈಲಿನ ಎ ಬ್ಯಾರಕ್​ನ ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಹೊಡೆದಾಡಿಕೊಂಡಿದ್ದಾರೆ. ರೌಡಿಶೀಟರ್​​​​​​​​ ಟೋಪಿ ನೌಫಲ್ & ಗ್ಯಾಂಗ್ ವಿರುದ್ಧ ದಾಳಿ ಮಾಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ

ಘಟನೆಯಲ್ಲಿ ಇಬ್ಬರು ಗಾಯಾಳುಗಳಿಗೆ ವೆನ್ಲಾಕ್​​​​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಹಲ್ಲೆ ಮಾಡಿದ ತಂಡದ ಸೆಲ್​ಗಳ ಮೇಲೆ ದಾಳಿ, ಪರಿಶೀಲಿಸಿದ್ದು, ಘಟನೆ ಬಗ್ಗೆ ಸಿಸಿಟಿವಿಯಲ್ಲಿ ಸೆರೆಯಾಗಿರುವ ಬಗ್ಗೆ ಕಮಿನಷರ್ ಮಾಹಿತಿ ಪಡೆದುಕೊಂಡಿದ್ದಾರೆ.

ಮುಫದ್ ರಿಫಾತ್(28), ಮೊಹಮ್ಮದ್ ರಿಜ್ವಾನ್(34), ಇಬ್ರಾಹಿಂ ಕಲ್ಲೆಲ್(30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್, ಜೈನುದ್ದೀನ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಆರೋಪಿಗಳು, ಹಲ್ಲೆಗೊಳಗಾದವರ ವಿರುದ್ಧ ಹಲವು ಪ್ರಕರಣ ದಾಖಲಾಗಿವೆ. ಘಟನೆ ಸಂಬಂಧ ಜೈಲು ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:37 pm, Mon, 1 July 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು