AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌

ಹಾರ್ಮುಜ್ ಜಲಸಂಧಿಯ ಉದ್ವಿಗ್ನತೆಯ ನಡುವೆಯೂ ಭಾರತಕ್ಕೆ ತೈಲ ಮತ್ತು ಎಲ್‌ಪಿಜಿ ಪೂರೈಕೆ ಚೇತರಿಸಿಕೊಳ್ಳುತ್ತಿದೆ. ಇರಾನ್‌ನಿಂದ ಮತ್ತೆರಡು ಹಡಗುಗಳು ಭಾರತ ತಲುಪುತ್ತಿದ್ದು, ಒಂದು ಹಡಗಿನಿಂದ 26,000 ಮೆಟ್ರಿಕ್ ಟನ್ ಎಲ್‌ಪಿಜಿ ಇಂದು ಮಂಗಳೂರಿನಲ್ಲಿ ಅನ್‌ಲೋಡ್ ಆಗಲಿದೆ. ಇದು ದೇಶದ ಎಲ್‌ಪಿಜಿ ಕೊರತೆ ಭೀತಿಯನ್ನು ತಾತ್ಕಾಲಿಕವಾಗಿ ನೀಗಿಸಲಿದೆ.

ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌
ಸಾಂದರ್ಭಿಕ ಚಿತ್ರ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Mar 17, 2026 | 7:38 AM

Share

ಮಂಗಳೂರು, ಮಾರ್ಚ್ 17: ಇರಾನ್, ಅಮೆರಿಕ, ಇಸ್ರೇಲ್ ನಡುವಿನ ಉದ್ವಿಗ್ನತೆಯ ಹಿನ್ನೆಲೆ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ನೂರಾರು ತೈಲ ಮತ್ತು ಎಲ್‌ಪಿಜಿ (LPG) ಸಾಗಿಸುತ್ತಿದ್ದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದ್ದವು. ಆದರೆ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ ಇರಾನ್ ಈಗಾಗಲೇ ನಾಲ್ಕು ಹಡಗುಗಳಿಗೆ ಅನುಮತಿ ನೀಡಿದ್ದು, ಅವುಗಳಲ್ಲಿ 2 ಹಡಗುಗಳು ಈಗಾಗಲೇ ಭಾರತ (India) ತಲುಪಿವೆ. ಮಾರ್ಚ್ 12ರಂದು ಕಚ್ಚಾ ತೈಲ ಹೊತ್ತ ಮೊದಲ ಹಡಗು ಮುಂಬೈ ತಲುಪಿತ್ತು. ನಂತರ ಮಾರ್ಚ್ 16ರಂದು ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಆಗಮಿಸಿತು. ಈ ಹಡಗಿನಲ್ಲಿ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ಅದರಲ್ಲಿ ಸುಮಾರು 20 ಸಾವಿರ ಮೆಟ್ರಿಕ್ ಟನ್ ಅನ್ನು ಮುಂದ್ರಾ ಬಂದರಿನಲ್ಲಿ ಅನ್‌ಲೋಡ್ ಮಾಡಲಾಗಿದೆ.

ಉಳಿದ 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಇಂದೇ ಮಂಗಳೂರು ಬಂದರಿಗೆ ತಂದು ಅನ್‌ಲೋಡ್ ಮಾಡುವ ಸಾಧ್ಯತೆ ಇದೆ. ಇದರಿಂದ ದೇಶದಲ್ಲಿ ಉಂಟಾಗಿದ್ದ ಎಲ್‌ಪಿಜಿ ಕೊರತೆ ಭೀತಿಗೆ ತಾತ್ಕಾಲಿಕ ರಿಲೀಫ್ ಸಿಗುವ ನಿರೀಕ್ಷೆಯಿದೆ.

ಇದರ ಜೊತೆಗೆ ‘ನಂದಾದೇವಿ’ ಮತ್ತು ‘ಜಗ್ ಲಾಡ್ಕಿ’ ಎಂಬ ಮತ್ತೆರಡು ಹಡಗುಗಳು ಇಂದು ಭಾರತ ತಲುಪುವ ಸಾಧ್ಯತೆ ಇದೆ. ‘ನಂದಾದೇವಿ’ ಹಡಗಿನಲ್ಲಿ ಸುಮಾರು 40 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ‘ಜಗ್ ಲಾಡ್ಕಿ’ ಹಡಗು ಸುಮಾರು 81 ಸಾವಿರ ಟನ್ ಕಚ್ಚಾ ತೈಲವನ್ನು ಹೊತ್ತು ಬರುತ್ತಿದೆ.

ಪೆಟ್ರೋಲಿಯಂ ಡೀಲರ್ಸ್‌ಗಳ ಅಂದಾಜಿನ ಪ್ರಕಾರ, ಈ ಎರಡು ಹಡಗುಗಳಿಂದ ಒಟ್ಟು ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಲಭ್ಯವಾಗಲಿದ್ದು, ಇದು ದೇಶದ ಅವಶ್ಯಕತೆಗೆ ಕೇವಲ 2 ದಿನಗಳ ಮಟ್ಟಿಗೆ ಮಾತ್ರ ಸಾಕಾಗಬಹುದು.

ಇದನ್ನೆಲ್ಲ ಮೀರಿ, ಇನ್ನೂ 20ಕ್ಕೂ ಹೆಚ್ಚು ಭಾರತೀಯ ಹಡಗುಗಳು ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿವೆ. ಇದೇ ವೇಳೆ ಇರಾನ್‌ನಲ್ಲಿ ಯುದ್ಧದ ಪರಿಣಾಮವಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಉಂಟಾಗಿರುವುದರಿಂದ, ಭಾರತದಿಂದ ಔಷಧಿ ಮತ್ತು ವೈದ್ಯಕೀಯ ನೆರವು ಒದಗಿಸಿದರೆ ಉಳಿದ ಹಡಗುಗಳನ್ನು ಬಿಡುಗಡೆ ಮಾಡುವ ಬಗ್ಗೆ ಇರಾನ್ ಮನವಿ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ಒಟ್ಟಿನಲ್ಲಿ, ಜಾಗತಿಕ ಉದ್ವಿಗ್ನತೆ ನಡುವೆಯೂ ಭಾರತಕ್ಕೆ ತೈಲ ಮತ್ತು ಎಲ್‌ಪಿಜಿ ಸರಬರಾಜು ಕ್ರಮೇಣ ಪುನರಾರಂಭವಾಗುತ್ತಿರುವುದು ಸ್ವಲ್ಪ ಮಟ್ಟಿನ ನಿಟ್ಟಿನಲ್ಲಿ ನೆಮ್ಮದಿ ತಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​