ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಬಿಜೆಪಿ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ವೇಳೆ ಬೈಕ್‌ಗಳಲ್ಲಿ 20-25 ಮುಸ್ಲಿಂ ಯುವಕರ ತಂಡ ಅವರನ್ನು ಹಿಂಬಾಲಿಸಿ ಬಂದು ಬೋಳಿಯಾರ್ ಬಾರ್‌ ಬಳಿ ವಾಗ್ವಾದ ನಡೆಸಿ ಥಳಿಸಿದ್ದಾರೆ. ಇದರಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ.

ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Jun 10, 2024 | 11:47 AM

ಮಂಗಳೂರು, ಜೂನ್.10: ಮಂಗಳೂರಿನಲ್ಲಿ (Mangaluru) ಚುನಾವಣೋತ್ತರ ಹಿಂಸಾಚಾರ ಮುಂದುವರೆದಿದೆ. ನಿನ್ನೆ ರಾತ್ರಿ ಬಿಜೆಪಿ ವಿಜಯೋತ್ಸವ ವೇಳೆ ಅನ್ಯಕೋಮಿಯ ಗುಂಪೊಂದು ಇಬ್ಬರಿಗೆ ಚಾಕು ಇರಿದಿದ್ದು ಓರ್ವನ ಮೇಲೆ ದಾಳಿ ನಡೆಸಿದ್ದಾರೆ. ಈ ಘಟನೆ ಸಂಬಂಧ ಕೊಣಾಜೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದ್ದಾರೆ. ಹರೀಶ್(41), ನಂದಕುಮಾರ್(24)ಗೆ ಚಾಕು ಇರಿಯಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೋರ್ವ ಕೃಷ್ಣ ಕುಮಾರ್ ಎಂಬಾತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ (Assault) ನಡೆಸಲಾಗಿದೆ.

ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಸಂಭ್ರಮಕ್ಕಾಗಿ ಪಟಾಕಿ ಸಿಡಿಸಿದಕ್ಕೆ ಗಲಾಟೆಯಾಗಿ ಮರು ದಿನ ಬಜರಂಗದಳ ಕಾರ್ಯಕರ್ತನಿಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ನಡೆದಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿ ನಡೆದಿತ್ತು. ಆದರೆ ನಿನ್ನೆ ಕೂಡ ಚುನಾವಣೋತ್ತರ ಹಿಂಸಾಚಾರ ಘಟನೆ ಮರುಕಳಿಸಿದೆ. ನಿನ್ನೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಬಳಿಕ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ‌ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ಆರೋಪ

ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಸುರೇಶ್, ನಂದ ಕುಮಾರ್​ ಹಾಗೂ ಕೃಷ್ಣ ಕುಮಾರ್ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಈ ಗಲಾಟೆಯಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೊಂದೆಡೆ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಹಲವರಿಗಾಗಿ ಪೊಲೀಸರು ಬಲೆಬೀಸಿದ್ದಾರೆ.

ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಚಾಕು ಇರಿತ ನಡೆದಿದೆ. ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಬಿಜೆಪಿ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ವೇಳೆ ಬೈಕ್‌ಗಳಲ್ಲಿ 20-25 ಮುಸ್ಲಿಂ ಯುವಕರ ತಂಡ ಅವರನ್ನು ಹಿಂಬಾಲಿಸಿ ಬಂದು ಬೋಳಿಯಾರ್ ಬಾರ್‌ ಬಳಿ ವಾಗ್ವಾದ ನಡೆಸಿ ಥಳಿಸಿದ್ದಾರೆ. ಇದರಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ.

ಬೋಳಿಯಾರ್​ನಲ್ಲಿ ಪೊಲೀಸ್ ಭದ್ರತೆ

ಇನ್ನು ಘಟನೆ ಬಳಿಕ ಬೋಳಿಯಾರ್​ನಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಮೂರು ಕೆಎಸ್​ಆರ್​ಪಿ ತುಕಡಿ ಸೇರಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಸದ್ಯ ಸಮಾಧಾನ್ ಬಾರ್ ನ ಸಿಸಿಟಿವಿ ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬಾರ್ ಮುಂಭಾಗ ಇರೋ ಇರಿತಕ್ಕೊಳಗಾದ ಹರೀಶ್ ಗೆ ಸೇರಿದ ಆಕ್ಟಿವ್ ಹೋಂಡಾ

ವಿಜಯೋತ್ಸವ ಮುಗಿಸಿ ಮನೆಗೆ ವಾಪಾಸ್ ಆಗ್ತಿದ್ದ ಹರೀಶ್ ಮತ್ತು ನಂದಕುಮಾರ್ ಮೇಲೆ 25ಕ್ಕೂ ಅಧಿಕ ಜನರಿಂದ ದಾಳಿ ನಡೆದಿತ್ತು. ಹರೀಶ್ ಆಕ್ಟಿವಾದಲ್ಲಿ ತಪ್ಪಿಸಿಕೊಂಡು ಬಾರ್ ಬಳಿ ಬಂದಿದ್ದ ಅದರೂ ಬಾರ್​ನ ಎದುರು ಅಡ್ಡ ಗಟ್ಟಿ ಚೂರಿ ಇರಿದು ಪರಾರಿಯಾಗಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಆಸ್ಪತ್ರೆಗೆ ಸೇರಿಸಿದ ಪರಿಣಾಮ ಯುವಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:11 am, Mon, 10 June 24

ತಾಜಾ ಸುದ್ದಿ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ