AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಆಯತಪ್ಪಿ ಹೊಂಡಕ್ಕೆ ಬಿದ್ದು ಯುವಕರಿಬ್ಬರ ಸಾವು

ಆಯತಪ್ಪಿ ಹೊಂಡಕ್ಕೆ ಬಿದ್ದು ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ರವಿವಾರ ಮಂಗಳೂರು ಹೊರವಲಯದ ಪಡೀಲ್ ಅಳಪೆ ಎಂಬಲ್ಲಿ ನಡೆದಿದೆ.

ಮಂಗಳೂರು: ಆಯತಪ್ಪಿ ಹೊಂಡಕ್ಕೆ ಬಿದ್ದು ಯುವಕರಿಬ್ಬರ ಸಾವು
ವರುಣ (ಎಡಚಿತ್ರ) ವೀಕ್ಷಿತ್​ (ಬಲಚಿತ್ರ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on: Jul 31, 2023 | 1:03 PM

Share

ಮಂಗಳೂರು: ಆಯತಪ್ಪಿ ಹೊಂಡಕ್ಕೆ ಬಿದ್ದು ಯುವಕರಿಬ್ಬರು (Youths) ಸಾವನ್ನಪ್ಪಿರುವ ಘಟನೆ ರವಿವಾರ ಮಂಗಳೂರು (Mangaluru) ಹೊರವಲಯದ ಪಡೀಲ್ ಅಳಪೆ ಎಂಬಲ್ಲಿ ನಡೆದಿದೆ. ಅಳಪೆ ನಿವಾಸಿ ವರುಣ್ (27), ಎಕ್ಕೂರು ನಿವಾಸಿ ವೀಕ್ಷಿತ್ (28) ಮೃತ ಯುವಕರು. ಕಂಕನಾಡಿ ಟೌನ್ ಠಾಣಾ ವ್ಯಾಪ್ತಿಯ ಅಳಪೆ ಪಡ್ಪು ಎಂಬಲ್ಲಿ ರೈಲ್ವೆ ಕಾಮಗಾರಿ ಸಂಬಂಧ ತೆಗೆದಿದ್ದ ಹೊಂಡ ಮಳೆಯಿಂದ ತುಂಬಿಕೊಂಡಿತ್ತು. ಈ ಹೊಂಡದಲ್ಲಿ ಇಬ್ಬರು ಯುವಕರು ಆಯತಪ್ಪಿ ಬಿದ್ದಿದ್ದಾರೆ. ಇದನ್ನು ಕಂಡ ಅವರ ಸ್ನೇಹಿತರು ರಕ್ಷಿಸಿಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಈ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಧಾವಸಿ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ. ದುರಾದೃಷ್ಟವಶಾತ ಅಷ್ಟೊತ್ತಿಗಾಗಲೆ ಯುವಕರು ಮೃತಪಟ್ಟಿದ್ದು, ಶವಗಳನ್ನು ಪೊಲೀಸರು ಹೊರ ತೆಗೆದಿದ್ದಾರೆ. ನಂತರ ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಕಂಕನಾಡಿ ನಗರ ಪೊಲೀಸರು ಅಸ್ವಾಭಾವಿಕ ಮರಣ (ಯುಡಿಆರ್) ಎಂದು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕರಾವಳಿಯಲ್ಲಿ ಮಳೆ ಕಡಿಮೆಯಾದರು ನಿಲ್ಲದ ಕಡಲ ಅಬ್ಬರ, ಮಂಗಳೂರು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಇನ್ನು ಆಸ್ಪತ್ರಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಳಿದ್ದಾರೆ. ಯುವಕರೇ ಅವರ ಕುಟುಂಬಕ್ಕೆ ಆಧಾರ ಸ್ತಂಬವಾಗಿದ್ದರು. ಆದ್ದರಿಂದ ಸರ್ಕಾರಕ್ಕೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸುತ್ತೇನೆ. ಅಳಪೆ ಬಳಿ ಎರಡು ವರ್ಷದಿಂದ ರೈಲ್ವೇ ಕಾಮಾಗಾರಿ ನಿಂತಿದೆ. ಅಲ್ಲಿ‌ನ ಕಾಮಗಾರಿಯಿಂದಾಗಿ ಈ ಹೊಂಡ ಆಗಿದೆ. ರೈಲ್ವೇ ಇಲಾಖೆ ಗಮನಕ್ಕೆ ಈ ಹಿಂದೆ ಕೂಡ ತರಲಾಗಿತ್ತು. ಪಾಲಿಕೆಗೆ ಈ ಹೊಂಡದ ಬಗ್ಗೆ ಗಮನಕ್ಕೆ ತರಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್