ಪಾಳುಬಿದ್ದ ಸರ್ಕಾರಿ ಶಾಲೆಗೆ ಲಕ್ಷ ಲಕ್ಷ ಸುರಿದು ಅಭಿವೃದ್ಧಿ ಮಾಡಿದ ಸಮಾಜಮುಖಿ ತಂಡ! ಉಜಿರೆಯಲ್ಲೊಂದು ಮಾದರಿ ಕೆಲಸ

ಪಾಳುಬಿದ್ದ ಸರ್ಕಾರಿ ಶಾಲೆಯೊಂದನ್ನು ಸಮಾಜಮುಖಿ ತಂಡವೊಂದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸರ್ಕಾರಕ್ಕೆ ಹಸ್ತಾಂತರಿಸಿದ ಅಪರೂಪದ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ತಂಡದ ಮಾದರಿ ಕಾರ್ಯದಲ್ಲಿ ಸಾರ್ವಜನಿಕರು, ಪತ್ರಕರ್ತರೂ ಕೈಜೋಡಿಸಿದ್ದಾರೆ. ಆ ಕುರಿತ ವಿವರ ಇಲ್ಲಿದೆ.

ಪಾಳುಬಿದ್ದ ಸರ್ಕಾರಿ ಶಾಲೆಗೆ ಲಕ್ಷ ಲಕ್ಷ ಸುರಿದು ಅಭಿವೃದ್ಧಿ ಮಾಡಿದ ಸಮಾಜಮುಖಿ ತಂಡ! ಉಜಿರೆಯಲ್ಲೊಂದು ಮಾದರಿ ಕೆಲಸ
ಪಾಳುಬಿದ್ದ ಸರ್ಕಾರಿ ಶಾಲೆಗೆ ಲಕ್ಷ ಲಕ್ಷ ಸುರಿದು ಅಭಿವೃದ್ಧಿ ಮಾಡಿದ ಸಮಾಜಮುಖಿ ತಂಡ!
Follow us
| Updated By: ಗಣಪತಿ ಶರ್ಮ

Updated on: May 25, 2024 | 4:15 PM

ಮಂಗಳೂರು, ಮೇ 25: ಸರ್ಕಾರಿ ಶಾಲೆಗಳತ್ತ (Government Schools) ಸರ್ಕಾರವೇ ಗಮನ ಹರಿಸುವುದಿಲ್ಲ ಎಂಬ ಆರೋಪಗಳು ಆಗಾಗ ಕೇಳಿಬರುತ್ತವೆ. ಆದರೆ, ಪಾಳುಬಿದ್ದ ಸ್ಥಿತಿಯಲ್ಲಿದ್ದ ಅಂತಹ ಸರ್ಕಾರಿ ಶಾಲೆಯೊಂದನ್ನು ಸಮಾಜಮುಖಿ ತಂಡವೊಂದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅದನ್ನು ಅಭಿವೃದ್ಧಿಪಡಿಸಿ ಸರ್ಕಾರಕ್ಕೆ ಹಸ್ತಾಂತರಿಸಿರುವ ಅಪರೂಪದ ಮಾದರಿ ವಿದ್ಯಮಾನ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಎಜುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಉಜಿರೆಯಲ್ಲಿ (Ujire) ನಡೆದಿದೆ. ಈ ಕೆಲಸಕ್ಕೆ, ಸಂಘಸಂಸ್ಥೆಗಳು, ಪರ್ತಕರ್ತರು ಕೂಡ ಸಾಥ್ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಹಳೇಪೇಟೆಯಲ್ಲಿರುವ ಸರ್ಕಾರಿ ಶಾಲೆಯ ಹೆಂಚುಗಳು ಹಾರಿ ಹೋಗಿ, ರೀಪು ಪಕ್ಕಾಸುಗಳೂ ಮುರಿದು ಬಿದ್ದ ಘಟನೆ ಕಳೆದ ವರ್ಷ ಸಂಭವಿಸಿತ್ತು. ಆ ಸಂದರ್ಭದಲ್ಲಿ ಶಾಲೆಯ ಒಂದು ಕಾರ್ಯಕ್ರಮಕ್ಕೆ ‘ಬದುಕು ಕಟ್ಟೋಣ ಬನ್ನಿ’ ಎಂಬ ತಂಡದ ಮೋಹನ್ ಕುಮಾರ್ ಹಾಜರಾಗಿದ್ದರು. ಈ ವೇಳೆ ಅವರ ಎದುರಿಗೇ ಹಂಚೊಂದು ಬಿದ್ದಿತ್ತು. ಅದನ್ನು ನೋಡಿ ಶಾಲೆಯ ಕಾಯಕಲ್ಪಕ್ಕೆ ಕೈ ಹಾಕಲು ಅವರು ಮನ ಮಾಡಿದ್ದರು. ನಂತರ ಅವರು ರೋಟರಿ ಸೇರಿದಂತೆ ವಿವಿಧ ಸಂಘಟನೆಗಳ ಸಹಾಯ ಪಡೆದರು. ಬೆಳ್ತಂಗಡಿ ಪರ್ತಕರ್ತರ ಸಂಘ ಕೂಡ ಕೈಜೋಡಿಸಿತ್ತು. ಶಾಲೆಯ ಅಭಿವೃದ್ಧಿಗೆ 35 ಲಕ್ಷ ರೂಪಾಯಿ ಬೇಕಾಗಿದ್ದು ಅದನ್ನು ಇವರೆಲ್ಲಾ ಹೊಂದಿಸಿದ್ದಾರೆ.

ಅಭಿವೃದ್ಧಿಗೊಂಡ ಸರ್ಕಾರಿ ಶಾಲೆಯ ತರಗತಿ ಕೊಠಡಿ

‘ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್’ನಿಂದ ‘ನಮ್ಮೂರ ಕನ್ನಡ ಶಾಲೆ ಉಳಿಸೋಣ ಬನ್ನಿ’ ಎಂಬ ಕಾರ್ಯಕ್ರಮದ ಅಡಿ ಇದೇ ರೀತಿ ಈಗಾಗಲೇ 2 ಶಾಲೆಗಳನ್ನು ನವೀಕರಿಸಲಾಗಿದೆ. ಇನ್ನು ಮತ್ತೊಂದು ಸರ್ಕಾರಿ ಕನ್ನಡ ಮಾದ್ಯಮ ಶಾಲೆಯ ಕೆಲಸ ಶೇ 80 ರಷ್ಟಾಗಿದೆ.

ಹಸ್ತಾಂತರ ಕಾರ್ಯಕ್ರಮವನ್ನು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಸ್​ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ದಿ. ಡಾ ಯಶೋವರ್ಮ ನೆನೆಪಿನಾರ್ಥ ಸುಸಜ್ಜಿದ ಶಾಲೆಯನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಲಾಯಿತು. ಈ ವೇಳೆ ಎರಡೂ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಶೂ ವಿತರಿಸಲಾಯಿತು.

ಸರ್ಕಾರಿ ಶಾಲೆ ದುಸ್ಥಿತಿಯಲ್ಲಿದ್ದ ಸಂದರ್ಭದ ಚಿತ್ರ

ಇದನ್ನೂ ಓದಿ: ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ

ಈ ಕಾರ್ಯಕ್ರಮದಡಿ ಒಟ್ಟು 25 ಶಾಲೆಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಅದರಲ್ಲಿ ಈಗ ಮೂರು ಶಾಲೆಯ ಅಭಿವೃದ್ಧಿ ಕಾರ್ಯ ಮುಗಿದಿದ್ದು ಇನ್ನು ಒಂದು ಕಾಮಗಾರಿ ಹಂತದಲ್ಲಿದೆ. ಈ ಟ್ರಸ್ಟ್ ಈ ಹಿಂದೆ ಪ್ರವಾಹದಿಂದ ಮನೆ ಕಳೆದುಕೊಂಡಿದ್ದ ಚಾರ್ಮಡಿ ನಿವಾಸಿಗಳಿಗೆ ಮನೆ ನಿರ್ಮಿಸಿಕೊಟ್ಟಿತ್ತು. ಇನ್ನು ಸಾಕಷ್ಟು ಸಮಾಜಮುಖಿ ಕಾರ್ಯ ಮಾಡುತ್ತಾ ಬೆಳ್ತಂಗಡಿ ಸುತ್ತಾಮುತ್ತ ಜನರ ಮೆಚ್ಚುಗೆಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?