AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ: ಶರಣ್ ಪಂಪ್​ವೆಲ್

ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ ಮಾಡಲಾಗಿದೆ ಎಂದು ವಿಹೆಚ್​​ಪಿ ಮುಖಂಡ ಶರಣ್ ಪಂಪ್​ವೆಲ್ ಹೇಳಿದ್ದಾರೆ. ಉಳ್ಳಾಲದಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ: ಶರಣ್ ಪಂಪ್​ವೆಲ್
ಶರಣ್ ಪಂಪ್​ವೆಲ್ ಮತ್ತು ಹತ್ಯೆಯಾದ ಫಾಜಿಲ್
TV9 Web
| Edited By: |

Updated on: Jan 29, 2023 | 6:49 PM

Share

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆಯ (Praveen Nettaru Murder) ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ (Fazil Murder) ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್​​ವೆಲ್ (Sharan Pumpwell) ಹೇಳಿದ್ದಾರೆ. ಉಳ್ಳಾಲದಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, ಅಗತ್ಯ ಬಿದ್ದರೆ ಭಜರಂಗದಳ ಹೋರಾಟ ಮಾಡುತ್ತದೆ, ಕೆಲವೊಮ್ಮೆ ‌ನಾವು ನುಗ್ಗಿ ಹೊಡೆಯುತ್ತೇವೆ. ಪ್ರವೀಣ್ ನೆಟ್ಟಾರು ‌ಹತ್ಯೆಯಾದಾಗ ಹಿಂದೂ ಸಮಾಜ ಕಣ್ಣೀರಲ್ಲಿ ಮುಳುಗಿತ್ತು. ಇಡೀ ಜಿಲ್ಲೆ ಒಬ್ಬ ಉತ್ತಮ ಕಾರ್ಯಕರ್ತನ ಬಲಿದಾನಕ್ಕೆ ಬೇಸರ ಪಟ್ಟಿತ್ತು. ಆಗ ನಮ್ಮ ಕಾರ್ಯಕರ್ತರು ಅವನ ಬಲಿದಾನ ನೋಡಿ ಸುಮ್ಮನೆ ಕೂರಲಿಲ್ಲ. ಸುರತ್ಕಲ್​ಗೆ‌ ಹೋಗಿ ನುಗ್ಗಿ ನುಗ್ಗಿ ಹೊಡೆದರು. ಅದು ನಮ್ಮ ಶೌರ್ಯ. ಸುರತ್ಕಲ್​ನಲ್ಲಿ ಹೊಡೆದ ವಿಡಿಯೋವನ್ನ ಎಲ್ಲರೂ ವಿಡಿಯೋದಲ್ಲಿ ನೋಡಿದ್ದೀರಾ ಎಂದು ಹೇಳಿದರು.

ಬಾಬರಿ ಮಸೀದಿಯನ್ನು ಕೆಡವಿದ ನೆನಪಿನಾರ್ಥ ನಡೆಯುತ್ತಿರುವ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, ಗುಜರಾತ್​​ನಲ್ಲಿ ನಡೆದಿದ್ದು ನರಮೇಧ ಅಲ್ಲ, ಅಲ್ಲಿ ನಡೆದಿದ್ದು ಹಿಂದುಗಳ ಶೌರ್ಯ, ಅದು ನಮ್ಮ ಪರಾಕ್ರಮ ಎಂದು ಹೇಳಿದ ಶರಣ್ ಪಂಪ್​ವೆಲ್, ಪ್ರವೀಣ್ ನೆಟ್ಟಾರು ಮಾತ್ರವಲ್ಲ ಇನ್ನೂ ಕೆಲವು ಹಿಂದೂ ಕಾರ್ಯಕರ್ತರ ಹೆಸರು ಪಿಎಫ್​ಐ ಟಾರ್ಗೆಟ್​ ಲಿಸ್ಟ್​ನಲ್ಲಿತ್ತು ಅಂತ ಎನ್ಐಎ ಹೇಳಿದೆ. ಆ ಸಂಘಟನೆ ಬ್ಯಾನ್​ ಆಗಿದ್ದರೂ ಕಾರ್ಯಕರ್ತರೂ ಇನ್ನೂ ಜೀವಂತ ಇದ್ದಾರೆ. ಇನ್ನಷ್ಟು ನಮ್ಮ ಕಾರ್ಯಕರ್ತರ ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ. ಆದರೆ ನಾನು ಆ ಜಿಹಾದ್ ನಾಯಿಗಳಿಗೆ ಎಚ್ಚರಿಕೆ ಕೊಡುತ್ತಾ ಇದ್ದೇನೆ. ಇನ್ನು ಮುಂದೆ ನಮ್ಮ ಕಾರ್ಯಕರ್ತರ ಹತ್ಯೆಯಾದ್ರೆ ಒಂದಕ್ಕೆ ಎರಡು, ಎರಡಕ್ಕೆ ನಾಲ್ಕೂ, ನಾಲ್ಕಕ್ಕೆ ಎಂಟಾಗುತ್ತದೆ. ನಮ್ಮ ಒಬ್ಬ ಕಾರ್ಯಕರ್ತನ ಮೇಲೆ ನೀವು ಹಲ್ಲೆ ಮಾಡಿದರೆ ನಿಮ್ಮ ಹತ್ತು ಜನರನ್ನ ನಾವು ಆಸ್ಪತ್ರೆಗೆ ಸೇರಿಸುತ್ತೇವೆ ಎಂದಿದ್ದಾರೆ.

ಹಿಂದೂ ಶಾಸಕ ಬಿಜೆಪಿ ಮಾತ್ರ ಅಲ್ಲ, ಕಾಂಗ್ರೆಸ್​‌ನಲ್ಲಾದ್ರೂ ನಮ್ಮ ಬೆಂಬಲ ಇದೆ

ಉಳ್ಳಾಲದಲ್ಲಿ ಚುನಾವಣೆಗೋಸ್ಕರ ನಾವು ಕಾರ್ಯಕ್ರಮ ‌ಮಾಡುತ್ತಿಲ್ಲ. ಆದರೆ ಉಳ್ಳಾಲದಲ್ಲಿ ಹಿಂದೂ ಶಾಸಕ ಆಯ್ಕೆಯಾಗಬೇಕು ಎನ್ನುವ ಸಂಕಲ್ಪ ನಮ್ಮದು. ಅದಕ್ಕಾಗಿ ನಾವು ಉಳ್ಳಾಲದಲ್ಲಿ ಹಿಂದೂ ಶಾಸಕನ ಆಯ್ಕೆಗಾಗಿ ಅಭಿಯಾನ ಮಾಡುತ್ತಿದ್ದೇವೆ. ಈ ಹಿಂದೂ ಶಾಸಕ ಬಿಜೆಪಿ ಮಾತ್ರ ಅಲ್ಲ, ಕಾಂಗ್ರೆಸ್​​ನಲ್ಲಾದ್ರೂ ನಮ್ಮ ಬೆಂಬಲ ಇದೆ. ಉಳ್ಳಾಲದ ಹಿಂದೂ ಕಾಂಗ್ರೆಸ್ಸಿಗರು ಎಷ್ಟು ದಿನ ಗುಲಾಮನ ಕಾಲ ಕೆಳಗೆ ಇರುತ್ತೀರಿ. ನಿಮಗೆ ತಾಕತ್ತಿದ್ದರೆ ಒಬ್ಬ ಹಿಂದೂವನ್ನ ಶಾಸಕನಾಗಿ ಗೆಲ್ಲಿಸಿ ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಗುಜರಾತ ಗಲಭೆ ಹಿಂದುಗಳ ಪರಾಕ್ರಮದ ಸಂಕೇತ, ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್​ವೆಲ್

ಸಿದ್ದರಾಮಯ್ಯ ಜೀವನದ ಮೊದಲ ಸತ್ಯವನ್ನು ಮೊನ್ನೆ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ ಆಗುತ್ತಿದೆ ಅಂತ ಸತ್ಯ ಹೇಳಿದ್ದಾರೆ. ಈ ಜಿಲ್ಲೆ ಹಿಂದುತ್ವದ ನೆಲ, ಈ ಮಣ್ಣಲ್ಲಿ ಹಿಂದುತ್ವ ಇದೆ. ಈ ಬಗ್ಗೆ ನಮಗೆ ಹೆಮ್ಮೆ ಇದೆ, ಈ ಹಿಂದುತ್ವದ ಫ್ಯಾಕ್ಟರಿಯಲ್ಲಿ ನಾವು ದೇಶಕ್ಕೋಸ್ಕರ ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯನವರೇ, ಕೇವಲ ದಕ್ಷಿಣ ಕನ್ನಡ ಜಿಲ್ಲೆ ಅಲ್ಲ, ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿ ಆಗಲಿದೆ ಎಂದರು.

ಇದಕ್ಕೂ ಮುನ್ನ ತುಮಕೂರಿನಲ್ಲಿ ನಡೆದ ಶೌರ್ಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ಹಿಂದೂ ಸಮಾಜ ಯಾವತ್ತೂ ನಪುಂಸಕ ಸಮಾಜ ಅಲ್ಲ. ನಾವು ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದ್ದೇವೆ. ಒಂದು ಸಲ ಗುಜರಾತಿನ ಘಟನೆಯನ್ನು ನೆನೆಪು ಮಾಡಿಕೊಳ್ಳಿ, 59 ಜನ ಕರಸೇವಕರ ಹತ್ಯೆಗೆ ಪ್ರತಿಕಾರವಾಗಿ 2 ಸಾವಿರ ಜನರ ಹತ್ಯೆ ಮಾಡಿದ್ದೇವೆ. ಇದು ಹಿಂದೂಗಳ ಪರಾಕ್ರಮ. ಹಿಂದುಗಳು ಷಂಡರಲ್ಲ ಎಂದು ಈ ಘಟನೆ ತೋರಿಸುತ್ತದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?