AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕೆತ್ತಿಕಲ್​​ನಲ್ಲಿ 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ

ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಅಪರೂಪದ ಕಲ್ಲು ಪತ್ತೆಯಾಗಿದೆ. ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದಾಗ ಕಲ್ಲು ಪತ್ತೆಯಾಗಿದೆ. ಈ ಕಲ್ಲಿಗೆ 500 ವರ್ಷಗಳ ಇತಿಹಾಸವಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಮಂಗಳೂರು: ಕೆತ್ತಿಕಲ್​​ನಲ್ಲಿ 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ
ಮಂಗಳೂರು ಹೊರವಲಯದಲ್ಲಿ ವಿಶೇಷ ಕಲ್ಲು ಪತ್ತೆ
ವಿವೇಕ ಬಿರಾದಾರ
|

Updated on: Nov 28, 2023 | 11:03 AM

Share

ಮಂಗಳೂರು, ನ.28: ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಸ್ಥಳದ ಹೆಸರು ಬರಲು ಕಾರಣ ಎನ್ನಲಾದ ಕಲ್ಲು (Stone) ಪತ್ತೆಯಾಗಿದೆ. ಈ ಕಲ್ಲು ಹಲವು ವರ್ಷಗಳಿಂದ ಗಿಡಗಂಟಿಗಳ ಎಡೆಯಲ್ಲಿ ಹುದುಗಿತ್ತು. ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದಾಗ ಕಲ್ಲು ಪತ್ತೆಯಾಗಿದೆ.

ಕಲ್ಲು ಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ಅಲ್ಲಿಗೆ ಹೋಗಿ, ಕಲ್ಲನ್ನು ತಕ್ಷಣ ತೆರವು ಮಾಡಬಾರದು. ನೂರಾರು ವರ್ಷಗಳ ಇತಿಹಾಸವಿದ್ದು, ಈ ಮಾಹಿತಿ ಕಲ್ಲಿನಲ್ಲಿ ಲಭಿಸಬಹುದಾದ್ದರಿಂದ ಕಲ್ಲನ್ನು ತೆರವುಗೊಳಿಸದಂತೆ ಸ್ಥಳೀಯರು ಮನವಿ ಮಾಡಿದರು. ಕಲ್ಲನ್ನು ಗೌರವಯುತವಾಗಿ ಬೇರೆ ಸ್ಥಳಾಂತರಿಸುವಂತೆ ಕೇಳಿಕೊಂಡರು. ಮನವಿಗೆ ಸಮ್ಮತಿಸಿದ ಎನ್​ಹೆಚ್​ಎಐ ಅಧಿಕಾರಿಗಳು ಕ್ರೇನ್ ಮತ್ತು ಹಗ್ಗ ಬಳಸಿ ಕಲ್ಲು ಸ್ಥಳಾಂತರಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: 14-15ನೇ ಶತಮಾನದ ಶಾಸನಗಳಲ್ಲಿ ಉಡುಪಿ ಕಂಗೂರು ಮಠದ ಬಗ್ಗೆ ಉಲ್ಲೇಖ

ಕೆತ್ತಿದ ಈ ಕಲ್ಲಿನಿಂದಾಗಿ ಈ ಸ್ಥಳಕ್ಕೆ ಕೆತ್ತಿಕಲ್ ಎಂಬ ಹೆಸರು ಬಂದಿದೆ ಎಂದು ಸ್ಥಳೀಯರು ಹೇಳುತ್ತಾರೆ. ಇದು 500 ವರ್ಷಗಳಷ್ಟು ಹಳೆಯದಂತೆ ತೋರುತ್ತದೆ. ಎತ್ತಿನ ಗಾಡಿಯಲ್ಲಿ ಸಾಗುವಾಗ ಈ ಕಲ್ಲಿನ ಮೇಲೆ ಜನರು ವಿಶ್ರಾಂತಿ ಪಡೆಯುತ್ತಿದ್ದರು ಎಂದು ಹಿರಿಯರು ಹೇಳುತ್ತಿದ್ದರು ಎನ್ನುತ್ತಾರೆ ಸ್ಥಳೀಯ ಕಲಾಮೃತ ಕಲಾವಿದರ ಸಂಘಟನೆಯ ಉಮೇಶ್ ಕೋಟ್ಯಾನ್.

ಕೆತ್ತಿಕಲ್​ನಲ್ಲಿ ದಶಕಗಳ ಹಿಂದೆ ಗುಡ್ಡ ಜರಿತವೂ ಸಂಭವಿಸಿತ್ತು. ಆದಾಗ್ಯೂ, ಗುಡ್ಡದ ವಿರುದ್ಧ ದಿಕ್ಕಿನಲ್ಲಿ ಕಣಿವೆ ಭಾಗಕ್ಕೆ ಹೆದ್ದಾರಿಯ ಬದಿಯಲ್ಲಿ ಈ ಕಲ್ಲು ಸ್ಥಿರವಾಗಿದೆ. ಇದು ಶಿವಲಿಂಗದಂತೆ ಕಾಣುತ್ತದೆ. ಆದರೆ ಅದು ಕಪ್ಪು ಕಲ್ಲಿನಲ್ಲಿ ಮಾಡಿದ್ದಲ್ಲ. ಬದಲಿಗೆ ಕೆಂಪುಕಲ್ಲಿನಲ್ಲಿ ವೃತ್ತಾಕಾರದಿಂದ ಕೆತ್ತಲಾಗಿದೆ. ಕಲ್ಲಿನ ಮೇಲೆ ಯಾವುದೇ ಶಾಸನ ಕಂಡುಬಂದಿಲ್ಲ. ಇಲ್ಲಿ ‘ಅಣ್ಣಾಜಿ’ ಸಿನಿಮಾದ ಚಿತ್ರೀಕರಣವೂ ನಡೆದಿತ್ತು ಎಂದು ಉಮೇಶ್ ಕೋಟ್ಯಾನ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?