AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕೆತ್ತಿಕಲ್​​ನಲ್ಲಿ 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ

ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಅಪರೂಪದ ಕಲ್ಲು ಪತ್ತೆಯಾಗಿದೆ. ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದಾಗ ಕಲ್ಲು ಪತ್ತೆಯಾಗಿದೆ. ಈ ಕಲ್ಲಿಗೆ 500 ವರ್ಷಗಳ ಇತಿಹಾಸವಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಮಂಗಳೂರು: ಕೆತ್ತಿಕಲ್​​ನಲ್ಲಿ 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ
ಮಂಗಳೂರು ಹೊರವಲಯದಲ್ಲಿ ವಿಶೇಷ ಕಲ್ಲು ಪತ್ತೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 28, 2023 | 11:03 AM

Share

ಮಂಗಳೂರು, ನ.28: ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಸ್ಥಳದ ಹೆಸರು ಬರಲು ಕಾರಣ ಎನ್ನಲಾದ ಕಲ್ಲು (Stone) ಪತ್ತೆಯಾಗಿದೆ. ಈ ಕಲ್ಲು ಹಲವು ವರ್ಷಗಳಿಂದ ಗಿಡಗಂಟಿಗಳ ಎಡೆಯಲ್ಲಿ ಹುದುಗಿತ್ತು. ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದಾಗ ಕಲ್ಲು ಪತ್ತೆಯಾಗಿದೆ.

ಕಲ್ಲು ಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ಅಲ್ಲಿಗೆ ಹೋಗಿ, ಕಲ್ಲನ್ನು ತಕ್ಷಣ ತೆರವು ಮಾಡಬಾರದು. ನೂರಾರು ವರ್ಷಗಳ ಇತಿಹಾಸವಿದ್ದು, ಈ ಮಾಹಿತಿ ಕಲ್ಲಿನಲ್ಲಿ ಲಭಿಸಬಹುದಾದ್ದರಿಂದ ಕಲ್ಲನ್ನು ತೆರವುಗೊಳಿಸದಂತೆ ಸ್ಥಳೀಯರು ಮನವಿ ಮಾಡಿದರು. ಕಲ್ಲನ್ನು ಗೌರವಯುತವಾಗಿ ಬೇರೆ ಸ್ಥಳಾಂತರಿಸುವಂತೆ ಕೇಳಿಕೊಂಡರು. ಮನವಿಗೆ ಸಮ್ಮತಿಸಿದ ಎನ್​ಹೆಚ್​ಎಐ ಅಧಿಕಾರಿಗಳು ಕ್ರೇನ್ ಮತ್ತು ಹಗ್ಗ ಬಳಸಿ ಕಲ್ಲು ಸ್ಥಳಾಂತರಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: 14-15ನೇ ಶತಮಾನದ ಶಾಸನಗಳಲ್ಲಿ ಉಡುಪಿ ಕಂಗೂರು ಮಠದ ಬಗ್ಗೆ ಉಲ್ಲೇಖ

ಕೆತ್ತಿದ ಈ ಕಲ್ಲಿನಿಂದಾಗಿ ಈ ಸ್ಥಳಕ್ಕೆ ಕೆತ್ತಿಕಲ್ ಎಂಬ ಹೆಸರು ಬಂದಿದೆ ಎಂದು ಸ್ಥಳೀಯರು ಹೇಳುತ್ತಾರೆ. ಇದು 500 ವರ್ಷಗಳಷ್ಟು ಹಳೆಯದಂತೆ ತೋರುತ್ತದೆ. ಎತ್ತಿನ ಗಾಡಿಯಲ್ಲಿ ಸಾಗುವಾಗ ಈ ಕಲ್ಲಿನ ಮೇಲೆ ಜನರು ವಿಶ್ರಾಂತಿ ಪಡೆಯುತ್ತಿದ್ದರು ಎಂದು ಹಿರಿಯರು ಹೇಳುತ್ತಿದ್ದರು ಎನ್ನುತ್ತಾರೆ ಸ್ಥಳೀಯ ಕಲಾಮೃತ ಕಲಾವಿದರ ಸಂಘಟನೆಯ ಉಮೇಶ್ ಕೋಟ್ಯಾನ್.

ಕೆತ್ತಿಕಲ್​ನಲ್ಲಿ ದಶಕಗಳ ಹಿಂದೆ ಗುಡ್ಡ ಜರಿತವೂ ಸಂಭವಿಸಿತ್ತು. ಆದಾಗ್ಯೂ, ಗುಡ್ಡದ ವಿರುದ್ಧ ದಿಕ್ಕಿನಲ್ಲಿ ಕಣಿವೆ ಭಾಗಕ್ಕೆ ಹೆದ್ದಾರಿಯ ಬದಿಯಲ್ಲಿ ಈ ಕಲ್ಲು ಸ್ಥಿರವಾಗಿದೆ. ಇದು ಶಿವಲಿಂಗದಂತೆ ಕಾಣುತ್ತದೆ. ಆದರೆ ಅದು ಕಪ್ಪು ಕಲ್ಲಿನಲ್ಲಿ ಮಾಡಿದ್ದಲ್ಲ. ಬದಲಿಗೆ ಕೆಂಪುಕಲ್ಲಿನಲ್ಲಿ ವೃತ್ತಾಕಾರದಿಂದ ಕೆತ್ತಲಾಗಿದೆ. ಕಲ್ಲಿನ ಮೇಲೆ ಯಾವುದೇ ಶಾಸನ ಕಂಡುಬಂದಿಲ್ಲ. ಇಲ್ಲಿ ‘ಅಣ್ಣಾಜಿ’ ಸಿನಿಮಾದ ಚಿತ್ರೀಕರಣವೂ ನಡೆದಿತ್ತು ಎಂದು ಉಮೇಶ್ ಕೋಟ್ಯಾನ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ