AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ: ಮಂಗಳೂರು ಜಿಲ್ಲಾಡಳಿತಕ್ಕೆ ವಜ್ರದೇಹಿ ಸ್ವಾಮೀಜಿ ಆಗ್ರಹ

ಮುಸ್ಲಿಂ ಸಮುದಾಯದ ಸ್ಫೀಕರ್ ಯುಟಿ ಖಾದರ್​ ಎದುರು ಬಿಜೆಪಿ ದೊಡ್ಡ ದೊಡ್ಡ ನಾಯಕರು ನಮಸ್ಕರಿಸುವಂತೆ ಕಾಂಗ್ರೆಸ್ ಮಾಡಿದೆ ಎನ್ನುವ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಜಮಿರ್ ಅಹಮ್ಮದ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಈ ಬಗ್ಗೆ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಮೊದಲು ಜಮೀರ್ ಅಹ್ಮದ್ ಖಾನ್ ನನ್ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ: ಮಂಗಳೂರು ಜಿಲ್ಲಾಡಳಿತಕ್ಕೆ ವಜ್ರದೇಹಿ ಸ್ವಾಮೀಜಿ ಆಗ್ರಹ
ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Nov 20, 2023 | 11:13 AM

Share

ಮಂಗಳೂರು, (ನವೆಂಬರ್ 20): ಮಂಗಳೂರಿನ ಬಜರಂಗದಳದ ಕೆಲ ಕಾರ್ಯಕರ್ತರ ಗಡಿಪಾರು ಆದೇಶಕ್ಕೆ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ (Vajradehi Rajashekarananda Swamiji) ಕೆಂಡಾಮಂಡಲರಾಗಿದ್ದಾರೆ. ಮಂಗಳೂರಿನಲ್ಲಿ ಸುಳ್ಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ, ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್ ನನ್ನ ಗಡಿಪಾರು ಮಾಡಿ. ಇಲ್ಲೆಲ್ಲೂ ಅಲ್ಲ, ಜಮೀರ್ ನನ್ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ಇದು ನಿಮಗೆ ತಾಕತ್ತಿದ್ಯಾ ಎಸ್ಪಿ ಸಾಹೇಬ್ರೆ? ಎಂದು ಪೊಲೀಸ್ ಇಲಾಖೆಗೆ ಸವಾಲ್ ಹಾಕಿದರು.

ಹಿಂದೂ ಕಾರ್ಯಕರ್ತರ ಯಾವುದಕ್ಕೋಸ್ಕರ ಕೇಸ್ ಹಾಕೊಂಡ್ರು ? ಅವಲೋಕನ ಮಾಡಿ. ಗೋವುಗಳನ್ನ ರಕ್ಷಣೆ ಮಾಡಿ 10-20 ಕೇಸ್ ಬಿದ್ದಿವೆ. ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನ ಗಡಿಪಾರು ಮಾಡಲಿ. ಸರಕಾರಕ್ಕೆ ನಮ್ಮ ಮಕ್ಕಳನ್ನ ಕಂಡರೆ ಭಯ. ಹಿಂದೂ ಕಾರ್ಯಕರ್ತ ಲತೇಶ್ ನನ್ನ ಗಡಿಪಾರು ಮಾಡಬಹುದು. ಲತೇಶ್ ನಂತಹ ಸಾವಿರ ಯುವಕರು ಹುಟ್ಟಿದ್ರೆ ಮುಂದಿನ ದಿನಗಳು ನಿಮಗೆ ಕಷ್ಟವಾಗಬಹುದು ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ

ಭಜರಂಗದಳ ಕಾರ್ಯಕರ್ತರಿಗೆ ನೋಟಿಸ್

ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಐವರು ಭಜರಂಗದಳ (Bajrang Dal) ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಅವರಿಗೆ ನೋಟಿ ಜಾರಿ ಮಾಡಿದ ಪೊಲೀಸರು, ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರೆದುರು ಹಾಜರಾಗಲು ಸೂಚನೆ ನೀಡಿದ್ದಾರೆ.

ಭಜರಂಗದಳದಲ್ಲಿ ದಿನೇಶ್, ಪ್ರಜ್ವಲ್ ಅವರು ಪುತ್ತೂರು ತಾಲೂಕು ಜವಾಬ್ದಾರಿ ಹೊಂದಿದ್ದು, ಲತೇಶ್ ಗುಂಡ್ಯ ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಆಗಿದ್ದಾರೆ. ಉಳಿದ ಇಬ್ಬರು ಕಾರ್ಯಕರ್ತರಾದ ನಿಶಾಂತ್ ಮತ್ತು ಪ್ರದೀಪ್ ವಿರುದ್ಧವೂ ಗಡೀಪಾರು ಅಸ್ತ್ರ ಪ್ರಯೋಗಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ